CrimeNEWSದೇಶ-ವಿದೇಶ

ಹೋಟೆಲ್‌ನಲ್ಲಿ ಮಹಿಳೆಯ ಬರ್ಬರ ಹತ್ಯೆ: ಕೊಲೆ ಮಾಡಲು ಇಷ್ಟವಿಲ್ಲ ಆದ್ರೆ ನಂಗೆ ಬೇರೆ ಆಯ್ಕೆ ಇಲ್ಲ!

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕೋಲ್ಕತ್ತಾ: ಖಾಸಗಿ ಹೋಟೆಲೊಂದರಲ್ಲಿ 20 ವರ್ಷದ ಮಹಿಳೆಯೊಬ್ಬರು ಕೊಲೆಯಾಗಿರುವ ಘಟನೆ ಕೋಲ್ಕತ್ತಾ ಪೂರ್ವ ಹೊರವಲಯದಲ್ಲಿ ನಡೆದಿದೆ.

ಕೊಲೆಯಾಗಿರುವ ಮಹಿಳೆ ಕೊಠಡಿಯಲ್ಲಿ ಪೊಲೀಸರಿಗೆ ಬೆಂಗಾಲಿ ಭಾಷೆಯಲ್ಲಿ ಬರೆದ ಪತ್ರ ಒಂದು ದೊರೆತಿದೆ.

ನಿನ್ನನ್ನು ಕೊಲೆ ಮಾಡಲು ನನಗೆ ಇಷ್ಟವಿರಲಿಲ್ಲ ಆದರೆ ನನಗೆ ಬೇರೆ ಆಯ್ಕೆ ಇಲ್ಲ ಎಂದು ಸ್ಪಷ್ಟವಾಗಿ ಬರೆಯಲಾಗಿದೆ. ಅಲ್ಲದೆ ಒಡೆದುಹೋದ ಮದ್ಯದ ಬಾಟಲಿ ಕೊಲೆಯಾಗಿರುವ ಮಹಿಳೆ ಕೊಠಡಿಯಲ್ಲಿ ಪೊಲೀಸರಿಗೆ ಸಿಕ್ಕಿದೆ.

ಮಹಿಳೆಯ ತಂಗಿದ್ದ ಕೊಠಡಿಗೆ ಹೋಟೆಲ್ ಸಿಬ್ಬಂದಿಯೊಬ್ಬರು ಬಂದ ವೇಳೆ ಆಕೆ ಕೊಲೆಯಾಗಿರುವ ವಿಷಯ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಘಟನೆ ಕುರಿತಂತೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ತನಿಖೆ ನಡೆಸಿದಾಗ ವ್ಯಕ್ತಿಯೊಬ್ಬರ ಜೊತೆ ಮಹಿಳೆ ಹೋಟೆಲಿಗೆ ಒಂದು ಗಂಟೆ ಸುಮಾರಿಗೆ ಬಂದಿದ್ದರು. 2 ಗಂಟೆ ಹೊತ್ತಿಗೆ ಊಟವನ್ನು ಆರ್ಡರ್ ಮಾಡಿದ್ದಾರೆ ಹಾಗೂ ನಾಲ್ಕು ಗಂಟೆ ಹೊತ್ತಿಗೆ ಆಕೆ ಜೊತೆಗಿದ್ದ ವ್ಯಕ್ತಿ ಹೋಟೆಲ್ ನಿಂದ ಹೊರಟಿದ್ದಾನೆ. ಮಹಿಳೆ ಇದ್ದ ರೂಂ ನಿಂದ ವ್ಯಕ್ತಿ ಹೊರ ಬಂದದ್ದನ್ನು ಆಕೆಯ ಪತಿ ನೋಡಿದ್ದಾರೆ.

ಕೊಲೆಯಾದ ಮಹಿಳೆ ಮತ್ತು ಆಕೆಯ ಪತಿ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ನಿವಾಸಿಗಳು ಎಂದು ತಿಳಿದುಬಂದಿದೆ. ಆದರೆ ಕೊಲೆಗೆ ಕಾರಣ ಏನು ಎಂಬುವುದು ಮಾತ್ರ ನಿಗೂಢವಾಗದೆ. ಹೀಗಾಗಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್