NEWSನಮ್ಮರಾಜ್ಯವಿಜ್ಞಾನ

ಇಂದಿನಿಂದ ಡೆಮು ರೈಲ್‌ ಆರಂಭ: ಮೆಜೆಸ್ಟಿಕ್‌ನಿಂದ ವಿಮಾನ ನಿಲ್ದಾಣಕ್ಕೆ ಕೇವಲ 10 ರೂ.ನಲ್ಲಿ ಪ್ರಯಾಣ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ದೇವನಹಳ್ಳಿಗೆ ಇಂದಿನಿಂದ ಡೆಮು ವಿಶೇಷ ರೈಲು ಸೇವೆ ಆರಂಭವಾಗಿದ್ದು, ಕೆಎಸ್ಆರ್-ದೇವನಹಳ್ಳಿ ಮೊದಲ ಡೆಮು ರೈಲು ಇಂದು ಬೆಳಗ್ಗೆ 6.02ಕ್ಕೆ ತ ದೇವನಹಳ್ಳಿಯನ್ನು ತಲುಪಿತು. ವಿಮಾನ ನಿಲ್ದಾಣ ಕ್ಯಾಂಪಸ್ ಒಳಗೆ 6 ಕಡೆ ರೈಲು ನಿಲುಗಡೆ ಸೌಲಭ್ಯವಿದೆ. ಅಲ್ಲಿಂದ ವಿಮಾನ ನಿಲ್ದಾಣಕ್ಕೆ ಹೋಗಲು ಪ್ರಯಾಣಿಕರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಯಿತು.

ಹೀಗಾಗಿ ಬೆಂಗಳೂರಿನಿಂದ ಇನ್ನುಮುಂದೆ ಕೇವಲ 10-15 ರೂ.ಗಳಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೋಗಬಹದಾಗಿದೆ. ಇಂದಿನಿಂದ ಆರಂಭವಾದ ವಿಶೇಷ ರೈಲಿನಲ್ಲಿ ಸಂಸದ ಪಿ.ಸಿ. ಮೋಹನ್ ಸೇರಿದಂತೆ ರೈಲ್ವೆ ಇಲಾಖೆಯ ಅಧಿಕಾರಿಗಳು ಪ್ರಯಾಣಿಸಿದರು. ಈ ಸೌಲಭ್ಯದಿಂದಾಗಿ ಬೆಂಗಳೂರಿನ ವಿವಿಧ ಭಾಗಗಳಿಂದ 10ರಿಂದ 15 ರೂ. ದರದಲ್ಲಿ ಏರ್​ಪೋರ್ಟ್​ ತಲುಪಲು ಸಾಧ್ಯವಿದೆ. ಇದರಿಂದ ದುಬಾರಿ ಹಣ ತೆತ್ತು ಬಿಎಂಟಿಸಿ ವೋಲ್ವೋ ಬಸ್​, ಕ್ಯಾಬ್​ಗಳಲ್ಲಿ ಹೋಗುವುದು ತಪ್ಪಿದಂತಾಗಿದೆ.

ಮೆಜೆಸ್ಟಿಕ್​ನ ರೈಲ್ವೆ ನಿಲ್ದಾಣದಿಂದ ಹಾಲ್ಟ್​ ಸ್ಟೇಷನ್​ಗೆ ಕೇವಲ 50 ನಿಮಿಷಗಳು ಬೇಕಾಗುತ್ತವೆ. ಮುಂದೆ ಈ ಅವಧಿಯನ್ನುಇನ್ನೂ ಕಡಿಮೆಗೊಳಿಸಲು ಸ್ಟಾಪ್​ಗಳ ಸಂಖ್ಯೆಯನ್ನು ಕಡಿತಗೊಳಿಸುವ ಬಗ್ಗೆಯೂ ಯೋಚಿಸಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಇನ್ನು ಡೆಮೊ ರೈಲಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೀಟುಗಳ ಮಧ್ಯೆ ಅಂತರ ವ್ಯವಸ್ಥೆ ಮಾಡಲಾಗಿದೆ. ಮೊದಲ ರೈಲಿನಲ್ಲೇ ಅನೇಕ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿದರು. ಈ ವಿಶೇಷ ರೈಲು ಕೆಂಪೇಗೌಡ ಏರ್​ಪೋರ್ಟ್​ ಬಳಿಯ ಹಾಲ್ಟ್​ ಸ್ಟೇಷನ್​ಗೆ ತೆರಳಲಿದೆ. ಈ ರೈಲಿಗೆ ಯಲಹಂಕದಲ್ಲಿ ಸ್ಟಾಪ್​ ಇರಲಿದೆ. ಹಾಲ್ಟ್​ ಸ್ಟೇಷನ್​ನಿಂದ ಉಚಿತ ಬಸ್​ ಮೂಲಕ ವಿಮಾನ ನಿಲ್ದಾಣಕ್ಕೆ ಕರೆದೊಯ್ಯಲಾಗುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ಈ ವ್ಯವಸ್ಥೆ ಕಲ್ಪಿಸಲಾಗಿದೆ.

ವಿಮಾನಗಳ ಸಮಯವನ್ನು ಗಮನದಲ್ಲಿಟ್ಟುಕೊಂಡು ರೈಲಿನ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಹೆಚ್ಚು ವಿಮಾನಗಳು ಸಂಚರಿಸುವ ಅವಧಿಗೂ ಮೊದಲೇ ಪ್ರಯಾಣಿಕರು ವಿಮಾನ ನಿಲ್ದಾಣ ತಲುಪಲು ಅನುಕೂಲವಾಗುವಂತೆ ರೈಲು ವ್ಯವಸ್ಥೆ ಮಾಡಲಾಗಿದೆ. ಮೆಜೆಸ್ಟಿಕ್​ನಿಂದ ಏರ್​ಪೋರ್ಟ್​ಗೆ ದಿನಕ್ಕೆ ಮೂರು ಜೋಡಿ ರೈಲುಗಳು ಸಂಚರಿಸಲಿವೆ.

ಅಂದಹಾಗೆ ದೇವನಹಳ್ಳಿಯಿಂದ ಹಾಲ್ಟ್​ ಸ್ಟೇಷನ್​ಗೆ 3, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ 2, ಬಂಗಾರಪೇಟೆಯಿಂದ 2, ಯಲಹಂಕದಿಂದ 1, ಯಶವಂತಪುರದಿಂದ 1, ಬೆಂಗಳೂರು ಕಂಟೋನ್ಮೆಂಟ್​ನಿಂದ 1 ರೈಲು ಹಾಲ್ಟ್​ ಸ್ಟೇಷನ್​ಗೆ ಸಂಚರಿಸಲಿವೆ. ಆರಂಭಿಕವಾಗಿ 10 ರೈಲುಗಳು ಈ ಮಾರ್ಗದಲ್ಲಿ ಸಂಚರಿಸಲಿವೆ. ಕೊರೊನಾ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ಗಮನಿಸಿಕೊಂಡು ರೈಲುಗಳ ಸಂಖ್ಯೆಯನ್ನು ಹೆಚ್ಚಿಸುವ ಯೋಜನೆಯನ್ನು ರೈಲ್ವೆ ಇಲಾಖೆ ಹೊಂದಿದೆ ಎಂದು ರೈಲ್ವೆ ಅಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್