ವಿದ್ಯುತ್ ಕಂಪನಿಗಳ ಖಾಸಗೀಕರಣ ವಿಚಾರದಲ್ಲಿ ಕೊಟ್ಟ ಮಾತಿನಂತೆ ನಡೆದ ಸಿಎಂಗೆ KPTCL ನೌಕರರಿಂದ ಸನ್ಮಾನ
ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ಕೋರಿ ಟಾಟಾ ಪವರ್ ಕಂಪನಿಯು ಕೆಇಆರ್ಸಿ (KERC)ಗೆ ಸಲ್ಲಿಸಿದ್ದ ತನ್ನ ಅರ್ಜಿಯನ್ನು ಶುಕ್ರವಾರ ಹಿಂಪಡೆದುಕೊಂಡಿದೆ.

ಬೆಂಗಳೂರು: ರಾಜ್ಯದ ಯಾವುದೇ ವಿದ್ಯುತ್ ಕಂಪನಿಗಳನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಲು ಈ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೃಢವಾಗಿ ಘೋಷಿಸಿ ಅದಕ್ಕೆ ಬದ್ಧವಾಗಿ ನಿಲುವು ತೆಗೆದುಕೊಂಡಿದ್ದಕ್ಕೆ ಒಕ್ಕೂಟ ಹಾಗೂ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಸಿಎಂ ಅವರನ್ನು ಸನ್ಮಾನಿಸಿದೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (KPTCL) ಎಲ್ಲ ನೌಕರರು ಮತ್ತು ಅಧಿಕಾರಿಗಳ ಒಕ್ಕೂಟದ ವತಿಯಿಂದ ಇತತ್ತೀಚೆಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಈ ಭರವಸೆ ನೀಡಿದ್ದರು.
ಅದರಂತೆ ಸರ್ಕಾರ ಈ ಕಟ್ಟುನಿಟ್ಟಿನ ನಿಲುವಿನ ಬೆನ್ನಲ್ಲೇ, ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ಕೋರಿ ಟಾಟಾ ಪವರ್ ಕಂಪನಿಯು ಕೆಇಆರ್ಸಿ (KERC)ಗೆ ಸಲ್ಲಿಸಿದ್ದ ತನ್ನ ಅರ್ಜಿಯನ್ನು ಶುಕ್ರವಾರ ಹಿಂಪಡೆದುಕೊಂಡಿದೆ.
ಹೀಗಾಗಿ ಸರ್ಕಾರದ ಈ ಐತಿಹಾಸಿಕ ನಿರ್ಧಾರ ಮತ್ತು ನೌಕರರ ಹಿತರಕ್ಷಣೆಯನ್ನು ಶ್ಲಾಘಿಸಿ, ಒಕ್ಕೂಟ ಹಾಗೂ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ವತಿಯಿಂದ ಮುಖ್ಯಮಂತ್ರಿ ಡಿಕೆಶಿ ಅವರನ್ನು ನಿನ್ನೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಬಸವಣ್ಣ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ದೇಸಾಯಿ, ಹಿರಿಯ ಉಪಾಧ್ಯಕ್ಷ ರಾಜೋಜಿ ರಾವ್ ಹಾಗೂ ಇತರೆ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.







