NEWSದೇಶ-ವಿದೇಶರಾಜಕೀಯ

ರಾಜಕೀಯಕ್ಕೆ ಬರೊಲ್ಲ: ನನ್ನ ನಿರ್ಧಾರ ಸ್ಪಷ್ಟ, ದಯವಿಟ್ಟು ಮನ ನೋಯಿಸಬೇಡಿ

ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ನಾನು ರಾಜಕೀಯ ಪ್ರವೇಶಿಸುವ ಮಾತೇ ಇಲ್ಲ. ಈ ನಿರ್ಧಾರವನ್ನು ಪುನರ್‌ ಪರಿಶೀಲಿಸುವಂತೆ ಒತ್ತಾಯಿಸಿ ನನ್ನ ಮನ ನೋಯಿಸಬೇಡಿ ಎಂದು ನಟ ರಜಿನಿಕಾಂತ್‌ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ರಜಿನಿಕಾಂತ್‌ ತಮ್ಮ ನಿರ್ಧಾರವನ್ನು ಹಿಂಪಡೆದು ರಾಜಕೀಯಕ್ಕೆ ಧುಮುಕ ಬೇಕೆಂದು ಒತ್ತಾಯಿಸಿ ಅವರ ಅಭಿಮಾನಿಗಳು ಭಾನುವಾರ ಧರಣಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಅವರು, ಈ ನಿರ್ಧಾರ ಮರು ಪರಿಶೀಲಿಸುವ ಮಾತೇ ಇಲ್ಲ, ದಯ ವಿಟ್ಟು ಈ ರೀತಿಯ ಪ್ರತಿಭಟನೆಗಳನ್ನು ನಡೆಸಬೇಡಿ ಎಂದು ಹೇಳಿದ್ದಾರೆ.

ನನ್ನ ನಿರ್ಧಾರವನ್ನು ಸ್ಪಷ್ಟವಾಗಿ ಹೇಳಿಯಾಗಿದೆ. ಅದಕ್ಕೆ ಕಾರಣ ಏನು ಎಂಬುದನ್ನೂ ವಿವರಿಸಿದ್ದೇನೆ. ಧರಣಿ ನಡೆಸುವ ಮೂಲಕ ನನ್ನ ಮೇಲೆ ಒತ್ತಡ ಹೇರಬೇಡಿ. ಆ ಮೂಲಕ ನನಗೆ ಪದೇ ಪದೇ ನೋವು ಕೊಡಬೇಡಿ’ ಎಂದು ಅವರು ಟ್ವೀಟ್‌ ಮೂಲಕ ಕೋರಿಕೊಂಡಿದ್ದಾರೆ.

‘ಬಹಳ ಶಿಸ್ತು ಮತ್ತು ಸಹನೆಯಿಂದ ನೀವು ಧರಣಿ ನಡೆಸಿದ್ದೀರಿ. ಇದು ಸಂತಸ ನೀಡಿದೆ. ರಜನಿ ಮಕ್ಕಳ್‌ ಮಂಡ್ರಂ (ಆರ್‌ಎಂಎಂ) ಅಭಿಮಾನಿ ಸಂಘದ ಸದಸ್ಯರು ಈ ಧರಣಿಯಲ್ಲಿ ಪಾಲ್ಗೊಂ ಡಿಲ್ಲ. ಅದಕ್ಕಾಗಿ ಅವರಿಗೆ ಆಭಾರಿಯಾಗಿದ್ದೇನೆ ಎಂದೂ ತಿಳಿಸಿದ್ದಾರೆ.

ಆರೋಗ್ಯ ಹದಗೆಟ್ಟಿರುವುದರಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಸಂಘಟಿಸುವುದಕ್ಕೆ ಆಗುವುದಿಲ್ಲ. ಹೀಗಾಗಿ ರಾಜಕೀಯ ಪಕ್ಷ ಸ್ಥಾಪಿಸುವ ಆಲೋಚನೆಯನ್ನು ಕೈಬಿಟ್ಟಿದ್ದೇನೆ ಎಂದು ಅವರು ಡಿಸೆಂಬರ್‌ 29ರಂದು ಪ್ರಕಟಿಸಿದ್ದರು. ಈ ನಿರ್ಧಾರದಿಂದ ಅಭಿಮಾನಿಗಳು ಸಹಜವಾಗಿಯೇ ನಿರಾಸೆಗೆ ಒಳಗಾಗಿದ್ದರು.

ಹೊಸ ವರ್ಷದಲ್ಲಿ (2021) ಹೊಸ ಪಕ್ಷ ಸ್ಥಾಪಿಸಿ ರಾಜಕೀಯ ಇನಿಂಗ್ಸ್‌ ಆರಂಭಿಸುವುದಾಗಿ ಹೇಳಿದ್ದ ರಜಿನಿ, ಬಳಿಕ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ