NEWSದೇಶ-ವಿದೇಶ

ಜ.16ರಂದು ಲಸಿಕೆ ಅಭಿಯಾನ: ದೇಶದ ವಿವಿಧ ಭಾಗಗಳಿಗೆ ತಲುಪಿದ ಕೊರೊನಾ ಔಷಧ

ವಿಜಯಪಥ ಸಮಗ್ರ ಸುದ್ದಿ

ಪುಣೆ: ದೇಶಾದ್ಯಂತ ಸಂಕ್ರಾಂತಿ ಮುಗಿದ ಬಳಿಕ ಜನವರಿ 16ರಂದು ಲಸಿಕೆ ಅಭಿಯಾನ ನಡೆಯಲಿದ್ದು ಅದಕ್ಕೂ ಮೊದಲೇ ಇಂದು ಕೋವಿಶೀಲ್ಡ್ ದೇಶದ ವಿವಿಧ ಭಾಗಗಳಿಗೆ ತಲುಪಲಿದೆ. ತೀವ್ರ ಭದ್ರತೆ ನಡುವೆ ಮೊದಲ ಹಂತದಲ್ಲಿ ಲಸಿಕೆಯನ್ನು ಮೂರು ಟ್ರಕ್ ಗಳಲ್ಲಿ ದೇಶದ ವಿವಿಧ ಕಡೆಗಳಿಗೆ ತಲುಪಿಸಲಾಗುತ್ತಿದೆ.

ಇನ್ನು ಮೊದಲ ಹಂತದ ರವಾನೆಯಲ್ಲಿ 1088 ಕೆಜಿ ಕೋವಿಶೀಲ್ಡ್ ಲಸಿಕೆ ಹೊತ್ತ 34 ಪೊಟ್ಟಣಗಳನ್ನು ಪುಣೆಯಿಂದ ದೆಹಲಿಗೆ ರವಾನಿಸಲಾಗಿದೆ ಎಂದು ಸ್ಪೈಸ್ ಜೆಟ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಜಯ್ ಸಿಂಗ್ ತಿಳಿಸಿದ್ದಾರೆ.

ಜತೆಗೆ ಕೋವಿಶೀಲ್ಡ್ ಲಸಿಕೆಯನ್ನು ಹೊತ್ತ ಸ್ಪೈಸ್ ಜೆಟ್ ವಿಮಾನ ದೆಹಲಿ ತಲುಪಿದೆ. ಅದರ ಜತೆಗೆ ಮೂರು ಟ್ರಕ್ ಗಳಲ್ಲಿ ದೇಶದ 13 ಕಡೆಗಳಿಗೆ ಪುಣೆಯ ಸೆರಂ ಇನ್ಸ್ಟಿಟ್ಯೂಟ್ ನಿಂದ ಕೋವಿಡ್-19 ಲಸಿಕೆ ಪೂರೈಕೆಯಾಗುತ್ತಿದೆ.

ಇಂದು ಪುಣೆಯಿಂದ ದೆಹಲಿ, ಚೆನ್ನೈ, ಕೋಲ್ಕತಾ, ಗುವಾಹಟಿ, ಶಿಲ್ಲಾಂಗ್, ಅಹಮದಾಬಾದ್, ಹೈದರಾಬಾದ್, ವಿಜಯವಾಡ, ಭುವನೇಶ್ವರ, ಪಾಟ್ನಾ, ಬೆಂಗಳೂರು, ಲಕ್ನೊ ಮತ್ತು ಚಂಡೀಗಢಕ್ಕೆ 56.5 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ 9 ವಿಮಾನಗಳಲ್ಲಿ ಏರ್ ಇಂಡಿಯಾ, ಸ್ಪೈಸ್ ಜೆಟ್ ಮತ್ತು ಇಂಡಿಗೊ ವಿಮಾನದಲ್ಲಿ ರವಾನೆಯಾಗಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಎಸ್ ಪುರಿ ತಿಳಿಸಿದ್ದಾರೆ.

ಒಟ್ಟು 8 ವಿಮಾನಗಳು, ಎರಡು ಕಾರ್ಗೊ ವಿಮಾನಗಳು ಮತ್ತು ಇತರ ನಿತ್ಯದ ವಾಣಿಜ್ಯ ವಿಮಾನಗಳು ಲಸಿಕೆಯನ್ನು ಹೊತ್ತೊಯ್ಯಲಿವೆ. ಇಂದು ಬೆಳಗ್ಗೆ 10 ಗಂಟೆಗೆ ಎಲ್ಲಾ ಲಸಿಕೆಗಳು ವಿತರಣೆಯಾಗಲಿವೆ ಎಂದು ವಿವರಿಸಿದರು.

ಪುಣೆ ವಿಮಾನ ನಿಲ್ದಾಣದಿಂದ ಲಸಿಕೆಯನ್ನು ಹೊತ್ತ ಮೊದಲ ವಿಮಾನ ದೆಹಲಿಗೆ ಹೊರಡಲಿದೆ ಎಂದು ಕೋವಿಶೀಲ್ಡ್ ಲಸಿಕೆಯನ್ನು ಪುಣೆಯಿಂದ ವಿವಿಧ ವಿಮಾನ ನಿಲ್ದಾಣಗಳಿಗೆ ತಲುಪಿಸುವ ಹೊಣೆ ಹೊತ್ತಿರುವ ಎಸ್.ಬಿ.ಲಾಜಿಸ್ಟಿಕ್ಸ್ ತಂಡದ ಸಂದೀಪ್ ಬೊಸಲೆ ತಿಳಿಸಿದ್ದಾರೆ.

ಕಳೆದೊಂದು ತಿಂಗಳಲ್ಲಿ 50ಕ್ಕೂ ಹೆಚ್ಚು ದೇಶಗಳಲ್ಲಿ 5 ಕೋಟಿಗೂ ಅಧಿಕ ಮಂದಿಗೆ ಕೋವಿಡ್-19 ಲಸಿಕೆಯನ್ನು ಹಾಕಲಾಗಿದೆ. ಇಂದು ದೆಹಲಿ, ಕರ್ನಲ್, ಅಹಮದಾಬಾದ್, ಚಂಡೀಗಢ, ಲಕ್ನೊ, ಚೆನ್ನೈ, ಬೆಂಗಳೂರು, ಹೈದರಾಬಾದ್, ವಿಜಯವಾಡ, ಭುವನೇಶ್ವರ, ಕೋಲ್ಕತ್ತಾ ಮತ್ತು ಗುವಾಹಟಿಗಳಿಗೆ ತಲುಪಲಿವೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ