NEWSದೇಶ-ವಿದೇಶರಾಜಕೀಯ

ಟ್ರಂಪ್ – ಬಿಜೆಪಿ ಬೆಂಬಲಿಗರಿಗೆ ಹೆಚ್ಚೇನು ವ್ಯತ್ಯಾಸವಿಲ್ಲ : ದೀದಿ ವ್ಯಂಗ್ಯ

ವಿಜಯಪಥ ಸಮಗ್ರ ಸುದ್ದಿ

ಕೋಲ್ಕತಾ: ಚುನಾವಣಾ ಸೋಲನ್ನು ಒಪ್ಪದೆ ಅಮೆರಿಕ ಸಂಸತ್​ ಭವನದ ಮೇಲೆ ದಾಳಿ ನಡೆಸಿರುವ ಡೊನಾಲ್ಡ್​ ಟ್ರಂಪ್ ಹಾಗೂ ಬಿಜೆಪಿ ಬೆಂಬಲಿಗರಿಗೆ ಹೆಚ್ಚೇನು ವ್ಯತ್ಯಾಸ ಇಲ್ಲ. ಭವಿಷ್ಯದಲ್ಲಿ ಯಾವಾಗ ಬಿಜೆಪಿ ಸೋಲುತ್ತದೆಯೋ ಅಂದು ’ನಾವು ಗೆದ್ದಿದ್ದೇವೆ, ನಾವು ಗೆದ್ದಿದ್ದೇವೆ’ ಎಂದು ಬಿಜೆಪಿ ಬೆಂಬಲಿಗರೂ ಇದೇ ರೀತಿ ಹೇಳುತ್ತಾ, ಅಂತಹದ್ದೇ ವರ್ತನೆ ತೋರುತ್ತಾರೆ. ಇದರಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವ್ಯಂಗ್ಯವಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಟಿಎಂಸಿ ಪಕ್ಷ ನಿನ್ನೆ ನಾಡಿಯಾ ಜಿಲ್ಲೆಯಲ್ಲಿ ಸಾರ್ವಜನಿಕ ರ್‍ಯಾಲಿಯನ್ನು ಆಯೋಜಿಸಿತ್ತು. ಈ ರ್‍ಯಾಲಿಯಲ್ಲಿ ಮಾತನಾಡಿರುವ ದೀದಿ, “ನೀವು ಅವರನ್ನು ನೋಡಲಿಲ್ಲವೇ? ಸೋತರೂ ತಾನು ಗೆದ್ದಿದ್ದೇನೆ ಎಂದು ಟ್ರಂಪ್ ಹೇಳುತ್ತಲೇ ಇದ್ದಾರೆ. ಅವರ ಬೆಂಬಲಿಗರು ಅಮೆರಿಕ ಸಂಸತ್​ ಭವನದ ಮೇಲೆ ದಾಳಿ ನಡೆಸಿದ್ದಾರೆ.

ಈ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಘಟನೆಯನ್ನು ಇಡೀ ವಿಶ್ವದ ಪ್ರಮುಖ ನಾಯಕರು ಖಂಡಿಸಿದ್ದರು. ಆದರೆ, ಮಮತಾ ಬ್ಯಾನರ್ಜಿ ಇದೀಗ ಬಿಜೆಪಿ ಬೆಂಬಲಿಗರನ್ನು ಡೊನಾಲ್ಡ್​ ಟ್ರಂಪ್ ಅಭಿಮಾನಿಗಳಿಗೆ ಹೋಲಿಕೆ ಮಾಡಿ ಮಾತನಾಡುವ ಮೂಲಕ ಬಿಜೆಪಿಯನ್ನು ಅಪಹಾಸ್ಯಕ್ಕೆ ಗುರಿಮಾಡಿದ್ದಾರೆ.

ಇನ್ನು ಹರಿಯಾಣ ಪಂಜಾಬ್ ರೈತರು ಒಂದು ತಿಂಗಳಿನಿಂದ ಬಿಸಿಲು ಮತ್ತು ಮಳೆಯೆನ್ನದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲವರು ಚಳಿಯಲ್ಲಿ ಮೃತಪಟ್ಟಿದ್ದಾರೆ, ಆದರೆ, ನಮ್ಮ ರೈತ ಬಾಂಧವರಿಗೆ ಈವರೆಗೆ ನ್ಯಾಯ ಧಕ್ಕಿಲ್ಲ ಎಂದು ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಕಾಯ್ದೆಯ ವಿರುದ್ಧವೂ ಕಿಡಿಕಾರಿದ್ದಾರೆ.

ಬಿಜೆಪಿಯನ್ನು ಜಂಕ್ ಪಾರ್ಟಿ ಎಂದು ಜರಿದಿರುವ ಅವರು, ಬಿಜೆಪಿ ನನ್ನ ಬಗ್ಗೆ ಭಯಭೀತವಾಗಿದೆ. ಏಕೆಂದರೆ ನನ್ನನ್ನು ಖರೀದಿಸಲು ಸಾಧ್ಯವಿಲ್ಲ ಎಂದು ಅವರಿಗೆ ಚೆನ್ನಾಗಿ ತಿಳಿದಿದೆ. ನಾನು ಹೋರಾಟದಲ್ಲಿ ಮುಂದೆಯೆ ನಿಲ್ಲುತ್ತೇನೆ. ಅವರಿಗೆ ಬಂಗಾಳವನ್ನು ಮಾರಾಟ ಮಾಡಲು ನಾನು ಬದುಕಿರುವವರೆಗೆ ಬಿಡುವುದಿಲ್ಲಎಂದು ಸವಾಲು ಹಾಕಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ