NEWSನಮ್ಮರಾಜ್ಯಸಂಸ್ಕೃತಿ

ಶಿವಯೋಗಿ ಸಿದ್ದರಾಮೇಶ್ವರರು ಹೊಸ ಸಮಾಜ ನಿರ್ಮಿಸಿದ ಮಹಾನ್ ವ್ಯಕ್ತಿ : ಸಿಎಂ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಶಿವಯೋಗಿ ಸಿದ್ದರಾಮೇಶ್ವರ ಅವರು ಸಮಾಜದಲ್ಲಿ ಸಮಾನತೆ ಮೂಡಿಸಿ ಹೊಸ ಸಮಾಜ ನಿರ್ಮಿಸಿದ ಮಹಾನ್ ವ್ಯಕ್ತಿ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಗರದಲ್ಲಿ ಆಯೋಜಿಸಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಎಲ್ಲಾ ಮಹಾನಿಯರ ಜಯಂತಿಯನ್ನು ಆಚರಿಸಲಾಗುವುದು ಎಂದು ಹೇಳಿದರು.

ಜನರಲ್ಲಿ ರಾಷ್ಟ್ರಪ್ರಜ್ಞೆ ಮತ್ತು ಸಮಾಜಪ್ರಜ್ಞೆ ಮೂಡಿಸುವ ದೃಷ್ಟಿಯಿಂದ ನಾಡಿನಲ್ಲಿ ಜನಿಸಿದ ಎಲ್ಲ ಮಹಾನುಭಾವರ ಜಯಂತಿಗಳನ್ನು ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದರು.

ಶಿವಯೋಗಿ ಸಿದ್ದರಾಮೇಶ್ವರ ಅವರು ಒಬ್ಬ ಪವಾಡ ಪುರುಷ ಸಮಾಜದಲ್ಲಿ ಸಮಾನತೆ ಕಲ್ಪಿಸಲು ಹೋರಾಡಿದವರು. ಜಾತಿಯತೆಯನ್ನ ತೊಡೆದು ಹಾಕಿ ಎಲ್ಲರು ಒಂದೇ ಎಂಬ ಮನೋಭಾವ ಬೆಳೆಸಿದಂತಹ ವ್ಯಕ್ತಿ, ನಾವೆಲ್ಲರೂ ಅವರ ಗುಣಗಳನ್ನು ಮೈಗೂಡಿಸಿಕೊಂಡು ಸಾಗೋಣ ಎಂದು ಹೇಳಿದರು.

ಶಿವಯೋಗಿ ಸಿದ್ಧರಾಮೇಶ್ವರ ಸೇರಿದಂತೆ ಶರಣರು ವಚನ ಸಾಹಿತ್ಯದ ಮೂಲಕ ವಾಸ್ತವದ ನೆಲೆಯಲ್ಲಿ ಜೀವನದರ್ಶನ ಮಾಡಿಸಿದರು. ಈ ಮೂಲಕ ನಮ್ಮ ಬದುಕಿಗೆ ಹೊಸ ಆಯಾಮ ಒದಗಿಸಿ ಕೊಟ್ಟರು. ಅಂತಹ ಮಹಾನುಭಾವರ ಜಯಂತಿ ಆಚರಿಸುವ ಮೂಲಕ ಅವರ ವಿಚಾರಧಾರೆಗಳನ್ನು ಜನರಿಗೆ ತಿಳಿಸಿ, ಜಾಗೃತಿ ಮೂಡಿಸುವುದು ಸರ್ಕಾರದ ಉದ್ದೇಶ ಎಂದರು.

ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿಯನ್ನು ಜಾತ್ರೆಯ ಮೂಲಕ ಆಚರಿಸುವ ಬದಲಾಗಿ ಜಾಗೃತಿಯ ರೂಪದಲ್ಲಿ ಆಚರಿಸಬೇಕು. ಅತ್ಯಂತ ತಳಮಟ್ಟದ ಶ್ರಮಿಕ ವರ್ಗದವರನ್ನು ಹೊಂದಿರುವ ಸಮಾಜಕ್ಕೆ ಜಾಗೃತಿಯ ಅವಶ್ಯಕತೆ ಹೆಚ್ಚಾಗಿದೆ. ಎಲ್ಲ ನಾಯಕರೂ ಪಕ್ಷಭೇದ ಮರೆತು, ಭೋವಿ ಸಮಾಜದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಭೋವಿ ಗುರುಪೀಠದ ಸಿದ್ಧರಾಮೇಶ್ವರ ಸಂಸ್ಥಾನದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.

ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದಲ್ಲಿ ಅಲ್ಲಮಪ್ರಭುಗಳ ನಂತರ ಎರಡನೆಯವರಾಗಿ ಶಿವಯೋಗಿ ಸಿದ್ಧರಾಮೇಶ್ವರರು ಶೂನ್ಯ ಪೀಠವನ್ನು ಅಲಂಕರಿಸಿದರು. ಕಾಯಕಕ್ಕೆ ಹೆಸರಾದ ಶಿವಯೋಗಿ ಸಿದ್ಧರಾಮೇಶ್ವರರು 12ನೇ ಶತಮಾನದಲ್ಲಿ ಕೆರೆಕಟ್ಟೆಗಳನ್ನು ನಿರ್ಮಿಸಿ, ದುಡಿಯುವ ವರ್ಗಕ್ಕೆ ನೆರವು ನೀಡಿದರು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮೆಚ್ಚುಗೆ
ವ್ಯಕ್ತಪಡಿಸಿದರು.

ಸಿದ್ಧರಾಮೇಶ್ವರರ ಸಂದೇಶಗಳು ಒಂದು ಸಮಾಜಕ್ಕೆ ಸೀಮಿತವಾಗಿಲ್ಲ. ಬದಲಾಗಿ ಇಡೀ ರಾಜ್ಯದ ಜನತೆ ಅವನ್ನು ಪಾಲಿಸಬೇಕಿದೆ. 12ನೇ ಶತಮಾನದಲ್ಲಿ ಬಸವಣ್ಣನವರು ಪ್ರಾರಂಭಿಸಿದ ಕ್ರಾಂತಿಯ ನೇತೃತ್ವವಹಿಸಿದ್ದ ಅವರು, ಜನರಲ್ಲಿ ವಿಚಾರಕ್ರಾಂತಿ ಮೂಡಿಸಲು ನೆರವಾದರು ಎಂದು ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ