CrimeNEWSನಮ್ಮರಾಜ್ಯ

ಅಕ್ರಮವಾಗಿ 2.15 ಕೆಜಿ ಚಿನ್ನ ಸಾಗಣೆ: ಇಬ್ಬರ ಬಂಧನ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮಂಗಳೂರು: ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 2.15 ಕೆಜಿ ಚಿನ್ನವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎಂಐಎ ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ.

ಪ್ರಯಾಣಿಕರ ಗುಪ್ತಚರ ಮತ್ತು ಪ್ರೊಫೈಲಿಂಗ್ ಆಧರಿಸಿ, ಕೇರಳದ ಕಾಸಗೋಡು ಮೂಲದ ಫೈಜಲ್ ತೊಟ್ಟಿ ಮೆಲ್ಪಾರಂಬಾ (37) ಮತ್ತು ಮೊಹಮ್ಮದ್ ಶುಹೈಬ್ ಮುಗು (31) ಎಂಬುವರನ್ನು ಬಂಧಿಸಿರುವ ಅಧಿಕಾರಿಗಳು ಅವರಿಂದ ಸುಮಾರು 1.09 ಕೋಟಿ ರೂ. ಮೌಲ್ಯದ 2.15 ಕೆಜಿ ಚಿನ್ನ ವಶಪಡಿಸಿಕೊಂಡಿದ್ದಾರೆ.

ಬಂಧಿತರಿಬ್ಬರ ಶೋಧ ನಡೆಸಿದಾಗ ತಮ್ಮ ಒಳ ಉಡುಪುಗಳಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಮರೆಮಾಚಿ ಇಟ್ಟುಕೊಂಡಿರುವುದು ಪತ್ತೆಯಾಗಿದ್ದು, 1.09 ಕೋಟಿ ರೂ.ಗಳ ಮೌಲ್ಯದ 24k ಶುದ್ಧತೆಯ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಕಳ್ಳಮಾರ್ಗದಲ್ಲಿ ಚಿನ್ನ ಸಾಗಣೆ ಮಾಡುತ್ತಿದ್ದವರನ್ನು ಗುರುತಿಸಿ ಹಿಡಿದ ಅಧಿಕಾರಿಗಳನ್ನು ಕಸ್ಟಮ್ಸ್ ಆಯುಕ್ತ ಇಮಾಮುದ್ದೀನ್ ಅಹ್ಮದ್, ಜಂಟಿ ಆಯುಕ್ತ ಜೋನಸ್ ಜಾರ್ಜ್ ಅಭಿನಂದಿಸಿದ್ದಾರೆ.

ಕಳ್ಳಸಾಗಣೆ ತಡೆಗಟ್ಟಲು ಜಿಲ್ಲಾಧಿಕಾರಿ ಪ್ರವೀಣ್ ಕಂಡಿ ನೇತೃತ್ವದ ಕಸ್ಟಮ್ಸ್ ತಂಡವನ್ನು ಮತ್ತು ಅಧಿಕಾರಿಗಳಾದ ಶ್ರೀಕಾಂತ್ ಕೆ, ಅಧೀಕ್ಷಕ, ಸುಭೇಂಡು ರಂಜನ್ ಬೆಹೆರಾ, ಅಧೀಕ್ಷಕರು, ನವೀನ್ ಕುಮಾರ್ ಇತರರು ಕಾರ್ಯಾಚರಣೆಯಲ್ಲಿ ಇದ್ದರು.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ