NEWSನಮ್ಮರಾಜ್ಯ

ರಾಜ್ಯದಲ್ಲಿ ಕೊರೊನಾ ಲಸಿಕೆ ಅಭಿಯಾನಕ್ಕೆ ಸಿಎಂ ಬಿಎಸ್‌ವೈ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕು ನಿಯಂತ್ರಕ್ಕೆ ಲಸಿಕೆ ಹಾಕುವ ಅಭಿಯಾನ ಇಂದು ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಹಲವು ಕೇಂದ್ರಗಳಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಇನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಸಿಎಂ ಬಿ.ಎಸ್‌. ಯಡಿಯೂರಪ್ಪ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿ ಅವರು, ರಾಜ್ಯದ 243 ಕಡೆ ಲಸಿಕೆ ಅಭಿಯಾನ ಇಂದು ಆರಂಭವಾಗಿದ್ದು, ಪ್ರತಿ ಕೇಂದ್ರದಲ್ಲಿ 100 ಜನರಿಗೆ ಲಸಿಕೆ ಹಾಕಲಾಗುವುದು. ಇನ್ನು ನಾಳೆಯಿಂದ ಪ್ರತಿನಿತ್ಯ ಲಸಿಕೆ ಹಾಕುವುದು ಹೆಚ್ಚಾಗುತ್ತ ಹೋಗುತ್ತದೆ ಎಂದು ತಿಳಿಸಿದರು.

ದೇಶದ ಪ್ರಧಾನಿ ನರೇಂದ್ರ ಮೋದಿಯವರು ದೇಶಾದ್ಯಂತ 3 ಕೋಟಿ ಜನರಿಗೆ ಲಸಿಕೆ ಹಾಕುವುದುಕ್ಕೆ ಚಾಲನೆ ನೀಡಿದ್ದಾರೆ. ಅವರ ಪ್ರಯತ್ನ ಮತ್ತು ವಿಜ್ಞಾನಿಗಳ ಅವಿರತ ಶ್ರಮದಿಂದ ಇಂದು ನಮ್ಮ ದೇಶದಲ್ಲೇ ಲಸಿಕೆ ಕಂಡು ಹಿಡಿದು ಹಾಕಲಾಗುತ್ತಿದೆ. ಇದಕ್ಕೆ ಮೋದಿಯವರಿಗೆ ರಾಜ್ಯದ ಜನರ ಪರವಾಗಿ ಅಭಿನಂದನೆ ಸಲ್ಲಿಸುತ್ತೇವೆ ಎಂದು ಹೇಳಿದರು.

ಜತೆಗೆ ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್‌ಗೆ ಲಸಿಕೆ ಹಾಕಲಾಗುತ್ತಿದೆ. ನಂತರ ಪೊಲೀಸ್‌ ಇಲಾಖೆ ಸೇರಿ ವಿವಿಧ ವಿಭಾಗದಲ್ಲಿ ಲಸಿಕೆ ಹಾಕಲಾಗುವುದು.

ಇನ್ನು ವಿಕ್ಟೋರಿಯಾ ಆಸ್ಪತ್ರೆಯ ಡಿ ಗ್ರೂಪ್‌ ನೌಕರೆ ನಾಗರತ್ನ ಎಂಬುವರಿಗೆ ಲಸಿಕೆ ನೀಡಲಾಗಿದೆ. ಇವರ ಜತೆಗೆ  ಹಲವರಿಗೆ ಲಸಿಕೆ ಹಾಕುವ ಕಾರ್ಯ ಮುಂದುವರಿದಿದೆ.

ಮಲ್ಲೇಶ್ವರದ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಕೋವಿಡ್‌ ಮೊದಲ ಲಸಿಕೆಯನ್ನು ಕೊರೊನಾ ವಾರಿಯರ್ಸ್‌ ಮತ್ತು ಆಸ್ಪತ್ರೆಯ ಡಿ ಗ್ರೂಪ್‌ ನೌಕರ ಚಂದ್ರಶೇಖರ್‌ ಎಂಬುವರಿಗೆ ನೀಡಲಾಗಿದ್ದು, ಅವರಿಗೆ 30 ನಿಮಿಷಗಳ ಬಳಿಕವು ಯಾವುದೇ ಕೆಟ್ಟ ಪರಣಾಮ ಬೀರಿಲ್ಲ.

ಹೀಗಾಗಿ ಚಂದ್ರಶೇಖರ್‌ ಅವರೇ ಬೇರೆಯವರಿಗೆ ಈ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ಕೆ ಮುಂದಾಗಿದ್ದು, ಕೋವಿಶೀಲ್ಡ್‌ ವ್ಯಾಕ್ಸಿನ್‌ನಿಂದ ಯಾವುದೇ ದುಷ್ಪರಿಣಾಮವಿಲ್ಲ ಧೈರ್ಯದಿಂದ ಲಸಿಕೆ ಪಡೆದುಕೊಳ್ಳಿ ಎಂದು ಹೇಳಿದ್ದಾರೆ.

ಇನ್ನು ಎರಡನೇಯದಾಗಿ ಮಲ್ಲಸಂದ್ರದ ಆರೋಗ್ಯ ಕೇಂದ್ರದಲ್ಲಿ ಡಾ. ಕೋಮಲಾ ಅವರಿಗೆ ಲಸಿಕೆ ನೀಡಿದ್ದು ಅವರಿಗೂ ಯಾವುದೇ ರೀತಿಯ ಸೈಟ್‌ ಎಫೆಕ್ಟ್‌ ಆಗಿಲ್ಲ.

Leave a Reply

error: Content is protected !!
LATEST
ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!!