NEWSನಮ್ಮರಾಜ್ಯರಾಜಕೀಯ

ಭೂ ಅಕ್ರಮ- ಎಚ್‌ಡಿಕೆ, ಅವರ ಸಂಬಂಧಿಕರನ್ನು ಜೈಲಿಗೆ ಅಟ್ಟಬೇಕು: ಎಸ್‌.ಆರ್.ಹಿರೇಮಠ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ರಾಮನಗರ: ಬಿಡದಿ ಹೋಬಳಿ ಕೇತಗಾನಹಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಅವರ ಸಂಬಂಧಿಕರ ವಶದಲ್ಲಿರುವ ಗೋಮಾಳವನ್ನು ಸರ್ಕಾರ ಸ್ವಾಧೀನ ವಶಕ್ಕೆ ಪಡೆಯಬೇಕು ಮತ್ತು ಅವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ಜೈಲಿಗೆ ಅಟ್ಟಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖಂಡ ಎಸ್‌.ಆರ್.ಹಿರೇಮಠ ಒತ್ತಾಯಿಸಿದರು.

ದಲಿತರ ಜಮೀನು ಹಿಂದಕ್ಕೆ ಪಡೆಯುವಂವಂತೆ ಆಗ್ರಹಿಸಿ ಇಲ್ಲಿನ ಹಳೇ ಬಸ್ ನಿಲ್ದಾಣ ವೃತ್ತದಲ್ಲಿ ಶನಿವಾರ ನಡೆದ ಧರಣಿಯಲ್ಲಿ ಮಾತನಾಡಿದರು.

ಎಚ್‌ಡಿಕೆ ಕುಟುಂಬದವರು ಹೊಂದಿರುವ ಜಮೀನಿಗೆ ಯಾವುದಕ್ಕೂ ಅಧಿಕೃತ ಮಂಜೂರು ಆದೇಶ ಇಲ್ಲ. ಅದು ತುಳಿತಕ್ಕೆ ಒಳಗಾದ ದಲಿತರಿಗೆ ಸರ್ಕಾರ ಮಂಜೂರು ಮಾಡಿದ್ದ ಗೋಮಾಳ. ಇದನ್ನು ಖರೀದಿಸಲು ಕಾನೂನಿನಲ್ಲಿ ಅವಕಾಶ ಇಲ್ಲ. ಈ ಬಗ್ಗೆ ಹೈಕೋರ್ಟ್‌ 2020ರ ಜನವರಿ 14ರಂದು ಆದೇಶ ನೀಡಿ, ಲೋಕಾಯುಕ್ತ ವರದಿ ಅನ್ವಯ ಮೂರು ತಿಂಗಳಲ್ಲಿ ಜಮೀನು ವಶಕ್ಕೆ ಪಡೆಯಲು ಆದೇಶಿಸಿತ್ತು. ಆದರೆ, ಕುಮಾರಸ್ವಾಮಿ ಪ್ರಭಾವ ಬಳಸಿ ಅದಕ್ಕೆ ಅವಕಾಶ ನೀಡಿಲ್ಲ ಎಂದು ದೂರಿದರು.

ಇನ್ನು ಕುಮಾರಸ್ವಾಮಿ, ಅವರ ಚಿಕ್ಕಮ್ಮ ಸಾವಿತ್ರಮ್ಮ, ಮಾಜಿ ಸಚಿವ ಡಿ.ಸಿ. ತಮ್ಮಣ್ಣ, ಅವರ ಪತ್ನಿ ಪ್ರಮೀಳಾ, ಅವರ ಮೂರು ಮಕ್ಕಳ ಹೆಸರಿನಲ್ಲಿ ಇಲ್ಲಿ ಇನ್ನೂರು ಎಕರೆಗೂ ಹೆಚ್ಚು ಜಮೀನಿದೆ. ಇದರಲ್ಲಿ 110 ಎಕರೆಗೂ ಹೆಚ್ಚು ಜಮೀನು ಗೋಮಾಳ. ಇದನ್ನು ಕಾನೂನಾತ್ಮಕವಾಗಿ ಪರಭಾರೆ ಮಾಡಿದ್ದಲ್ಲಿ ಅವರು ಸರ್ಕಾರದ ಮುಂದೆ ದಾಖಲೆ ಇಡಬೇಕು ಎಂದು ಆಗ್ರಹಿಸಿದರು.

ಈ ಜಮೀನನ್ನು ನ್ಯಾಯಬದ್ಧವಾಗಿ ಖರೀದಿಸಿದ್ದೇವೆ ದಾಖಲೆಗಳು ಬೆಂಕಿಯಿಂದ ಹಾಳಾಗಿದ್ದರಲ್ಲಿ ನಮ್ಮ ಪಾತ್ರ ಇಲ್ಲ ಎಂದು ಎಚ್‌ಡಿಕೆ ಆಣೆ ಮಾಡಲಿ ಎಂದು ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಮುಖಂಡ ರವಿಕೃಷ್ಣ ರೆಡ್ಡಿ ಸವಾಲು ಹಾಕಿದರು.

ಧರಣಿ ನಿರತ ಜನಾಂದೋಲನಗಳ ಮಹಾ ಮೈತ್ರಿ-ಕರ್ನಾಟಕ, ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ, ಜನಸಂಗ್ರಾಮ ಪರಿಷತ್, ದಲಿತ ಸಂಘರ್ಷ ಸಮಿತಿ, ಶ್ರೀ ಲಕ್ಷ್ಮೀದೇವಿ ಪೂಜಮ್ಮ ಭೂ ಸಂತ್ರಸ್ತರ ಹೋರಾಟ ಸಮಿತಿಯ ಸದಸ್ಯರು ಈ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಕಾನೂನು ರೀತಿ ಖರೀದಿಸಿದ್ದರೂ ಸಲ್ಲದ ಆರೋಪ
ಕೇತಗಾನಹಳ್ಳಿ ಜಮೀನು ವಿಚಾರದಲ್ಲಿ ಈಗಾಗಲೇ ಹಲವು ಬಾರಿ ಸ್ಪಷ್ಟನೆ ನೀಡಿದ್ದೇನೆ. ಆದರೂ ರವಿಕೃಷ್ಣ ರೆಡ್ಡಿ, ಹಿರೇಮಠ್ ಮೊದಲಾದವರು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ಈ ಭೂಮಿಯನ್ನು ಕಾನೂನು ರೀತಿ ಖರೀದಿಸಿದ್ದರೂ ಸಲ್ಲದ ಆರೋಪ ಮಾಡುತ್ತಿದ್ದಾರೆ. ಈ ಭೂಮಿಯನ್ನು ಬಡವರಿಗೆ ಹಂಚಿ ನೆಮ್ಮದಿಯಾಗಿರಬೇಕು ಎನ್ನುವಷ್ಟು ಬೇಸರ ತರಿಸಿದ್ದಾರೆ ಎಂದು ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

Leave a Reply

error: Content is protected !!
LATEST
ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!!