NEWSಉದ್ಯೋಗನಮ್ಮರಾಜ್ಯ

ಹೆಣ್ಣು ಮಕ್ಕಳಿಗೂ ಅನುಕಂಪದ ಆಧಾರದ ನೌಕರಿ: ಸಂಪುಟ ಸಭೆ ತೀರ್ಮಾನ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸರ್ಕಾರಿ ನೌಕರರು ಮೃತಪಟ್ಟಾಗ ಆ ಕುಟುಂಬದಲ್ಲಿ ಗಂಡು ಮಕ್ಕಳಿಲ್ಲದೇ ಕೇವಲ ಹೆಣ್ಣು ಮಕ್ಕಳಿದ್ದರೆ ಅವರಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡಲು ಕಾಯ್ದೆಗೆ ತಿದ್ದುಪಡಿ ಮಾಡಿದ್ದು, ಅದಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ವೇಳೆ ಹೆಣ್ಣು ಮಕ್ಕಳಿಗೆ ಮದುವೆ ಆಗಿದ್ದರೂ ನೌಕರಿ ನೀಡಲು ತೀರ್ಮಾನಿಸಲಾಗಿದೆ. ಅಲ್ಲದೆ, ಸ್ವಂತ ಮಕ್ಕಳಿಲ್ಲದೇ ಸಾಕು
ಮಕ್ಕಳಿದ್ದರೂ ಅವರಿಗೆ ನೌಕರಿ ನೀಡಲಾಗುವುದು ಎಂದರು.

ಅನುಕಂಪದ ಆಧಾರದಲ್ಲಿ ನೌಕರಿ ಪಡೆಯಲು ಕುಟುಂಬ ಸದಸ್ಯರು ಯಾರು ಅರ್ಹರು ಎಂಬುದರ ವ್ಯಾಖ್ಯೆಯನ್ನೂ ಕರ್ನಾಟಕ ನಾಗರಿಕ ಸೇವಾ(ಅನುಕಂಪದ ಆಧಾರದ ಮೇಲೆ ನೇಮಕಾತಿ)( ತಿದ್ದುಪಡಿ) ನಿಯಮಗಳು2020 ದಲ್ಲಿ ಸ್ಪಷ್ಟಪಡಿಸಲಾಗಿದೆ ಎಂದು ಹೇಳಿದರು.

ಅಂಗವಿಕಲರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಲು ಟೆಂಡರ್‌ ಕರೆಯಲು ಅನುಮತಿ ನೀಡಲಾಗಿದೆ. 1,500 ಜನರಿಗೆ 12.75 ಕೋಟಿ ರೂ. ವೆಚ್ಚದಲ್ಲಿ ವಾಹನ ಖರೀದಿಸಲಾಗುವುದು ಎಂದರು.

ರಾಜ್ಯದ ಸುಮಾರು 1.20 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಪೋಷಣ್‌ ಅಭಿಯಾನ್‌ ಯೋಜನೆಯಡಿ ಸಮವಸ್ತ್ರ ವಿತರಿಸಲು ನಿರ್ಧರಿಸಲಾಗಿದೆ. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಮೂಲಕ 10.27 ಕೋಟಿ ರೂ. ವೆಚ್ಚದಲ್ಲಿ 65,911 ಅಂಗನವಾಡಿ ಕಾರ್ಯಕರ್ತೆಯರು ಮತ್ತು 62,580 ಸಹಾಯಕಿಯರಿಗೆ ತಲಾ ಎರಡು ಸೀರೆಗಳನ್ನು ನೀಡಲಾಗುವುದು. ಇದರ ಜತೆ ಐಸಿಡಿಎಸ್‌ ಯೋಜನೆ ಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿಯಾಗಿ ತಲಾ ಒಂದೊಂದು ಸೀರೆ ವಿತರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ಗೃಹ ಮಂಡಳಿ ಈಗಾಗಲೇ ಅನುಷ್ಠಾನಗೊಳಿಸಿ ಪೂರ್ಣಗೊಂಡಿರುವ ಮತ್ತು ಪೂರ್ಣಗೊಳ್ಳುವ ಹಂತದಲ್ಲಿರುವ 65 ವಸತಿ ಬಡಾವಣೆಗಳ ವಿನ್ಯಾಸ ನಕ್ಷೆಗಳಿಗೆ ಘಟನೋತ್ತರ ಅನುಮೋದನೆ ನೀಡಲಾಗಿದೆ. 2000 ಇಸವಿಯಿಂದ ಇಲ್ಲಿಯವರೆಗೆ 236 ಬಡಾವಣೆಗಳ ಪೈಕಿ 65 ಬಡಾವಣೆಗಳಿಗೆ ಯಥಾಸ್ಥಿತಿ ನ‌ಕ್ಷೆಗಳಿಗೆ ಸಚಿವ ಸಂಪುಟ ಸಭೆ ಒಂದು ಬಾರಿಗೆ ಅನುಮೋದನೆ ನೀಡಿದೆ.

ಪ್ರಮುಖ ನಿರ್ಧಾರಗಳು
* ಸ್ವಚ್ಛ ಭಾರತ್‌ ಮಿಷನ್‌ ಯೋಜನೆ 2 ನೇ ಹಂತದ ಅಡಿ, 5.5 ಲಕ್ಷ ಮನೆಗಳಿಗೆ ಮುಂದಿನ 5 ವರ್ಷಗಳಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಿಸಿ ಕೊಡಲಾಗುವುದು.

* ಕರ್ನಾಟಕ ಸ್ಟೇಟ್‌ ವೈಡ್‌ ಏರಿಯಾ ನೆಟ್‌ ವರ್ಕ್‌ ಯೋಜನೆ ಅಡಿ ಸೌಲಭ್ಯಗಳನ್ನು ವಿಸ್ತರಿಸಲು 35 ಕೋಟಿ ರೂ.ಗೆ ಅನುದಾನ ನೀಡಲು ಒಪ್ಪಿಗೆ. ಹೆಚ್ಚಿನ ಸಂಖ್ಯೆಯ ಸರ್ಕಾರು ಕಚೇರಿಗಳು ಸೌಲಭ್ಯಗಳನ್ನು ಪಡೆಯಲಿವೆ. 52 ತಹಸೀಲ್ದಾರ್‌ ಕಚೇರಿಗಳು, 30 ಜಿಲ್ಲಾ ಪಂಚಾಯಿತಿಗಳು, 227 ತಾಲೂಕು ಪಂಚಾಯಿತಿಗಳಲ್ಲಿ ವಿಡಿಯೋ ಸಂವಾದದ ಸೌಲಭ್ಯಗಳನ್ನು ಪಡೆಯಲಿವೆ.

* ನಂಜನಗೂಡು ತಾಲೂಕಿನಲ್ಲಿ 9 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ₹14 ಕೋಟಿ ನೀಡಲು ಒಪ್ಪಿಗೆ

* ಹೊನ್ನಾಳಿ ತಾಲೂಕಿನಲ್ಲಿ 48 ಕೋಟಿ ರೂ. ವೆಚ್ಚದಲ್ಲಿ 19 ಕೆರೆಗಳನ್ನು ತುಂಬಿಸುವ ಬೆನಕಹಳ್ಳಿ ಏತನೀರಾವರಿ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಅನುಮೋದನೆ

* ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮವು ದುಡಿಮೆ ಬಂಡವಾಳಕ್ಕಾಗಿ 31 ಕೋಟಿ ರೂ. ಸಾಲ ಮಾಡಿತ್ತು. ಅದಕ್ಕೆ ಸರ್ಕಾರವು ಬ್ಯಾಂಕ್‌ ಗ್ಯಾರೆಂಟಿ ನೀಡಿತ್ತು. ಅದರಲ್ಲಿ 7 ಕೋಟಿ ರೂ. ಸಾಲ ತೀರಿಸಿದ್ದು, ಉಳಿದ ₹24 ಕೋಟಿಗೆ ಗ್ಯಾರೆಂಟಿ ಮುಂದುವರಿಸಲು ತೀರ್ಮಾನಿಸಲಾಗಿದೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್