NEWSನಮ್ಮರಾಜ್ಯಶಿಕ್ಷಣ-

ಮಾತೃ ಹೃದಯದ ಮಹಿಳೆ ಸುಧಾ ಮೂರ್ತಿ : ಸಚಿವ ಸುರೇಶ್‌ ಕುಮಾರ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬಾಗಲಕೋಟೆ: ಇನ್ಫೋಸಿಸ್ ಫೌಂಡೇಸನ್‍ದ ಅಧ್ಯಕ್ಷರಾದ ಡಾ.ಸುಧಾ ಮೂರ್ತಿಯವರು ಜಮಖಂಡಿ ತಾಲೂಕಿನ ಸರಕಾರಿ ಶಾಲೆಯ ವಿದ್ಯಾರ್ಥಿಗೆ ಕಂಪ್ಯೂಟರ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸರಕಾರಿ ಶಾಲೆಗಳಿಗೆ 400 ಕಂಪ್ಯೂಟರಗಳನ್ನು ನೀಡುವ ಮೂಲಕ ಮಾತೃ ಹೃದಯಿ ಮಹಿಳೆಯಾಗಿದ್ದಾರೆ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದರು.

ಜಮಖಂಡಿಯ ಹುಲ್ಯಾಳ ಕ್ರಾಸ್‍ನಲ್ಲಿರುವ ರಾನಡೆ ಸ್ಮಾರಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿಂದು ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಹಮ್ಮಿಕೊಂಡ ಸರಕಾರ ಶಾಲೆಗಳಿಗೆ 400 ಕಂಪ್ಯೂಟರ ಮತ್ತು 100 ಶಾಲೆಗಳಿಗೆ ಗ್ರಂಥಾಲಯದ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಪಾರಿವಾಳ ಹಾರಿ ಬಿಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ದೇಶ ವಿದೇಶಗಳಲ್ಲಿ ತಮ್ಮ ಪ್ರತಿಭೆ ತೋರಿ ಪ್ರಸಿದ್ದರಾದ ಅನೇಕ ಜನ ಸರಕಾರಿ ಶಾಲೆಗಳಲ್ಲಿಯೇ ಕಲಿತ ವಿದ್ಯಾರ್ಥಿಯಾಗಿದ್ದಾರೆ. ಸರಕಾರ ಹಾಗೂ ಸುಧಾ ಮೂರ್ತಿಯವರಂತಹ ಸಹಕಾರ ನಿರಂತರವಾಗಿದ್ದಲ್ಲಿ ಸರಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೆ ಹಿಂದೆ ಬೀಳಲಾರವು. ಪಾಲಕರು ಮುಂದೊಂದು ದಿನ ಸರಕಾರಿ ಶಾಲೆಗೆ ಪ್ರವೇಶ ಪಡೆಯಬೇಕಾದರೆ ಸರದಿ ಸಾಲಿನಲ್ಲಿ ನಿಲ್ಲುವ ಸಮಯ ಸನ್ನಿತವಾಗಿದೆ ಎಂದರು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ ಜಮಖಂಡಿಯ ನೆಲ, ಜಲದ ಮಹಿಮೆ ಬಹಳ ಹಿಂದಿನಿಂದ ಗಮನಿಸಿದಾಗ ಬಿ.ಡಿ.ಜತ್ತಿಯಂತಹ ಮಹಾನ್ ವ್ಯಕ್ತಿಯನ್ನು ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿಯನ್ನಾಗಿ ನೋಡಿದ್ದೇವೆ. ಇಂದು ಈ ನೆಲ ಸುಧಾ ಮೂರ್ತಿ ಮತ್ತು ನಾರಾಯಣ ಮೂರ್ತಿಯಂತಹ ಅಗ್ರಗಣ್ಯರ ತಾಣವಾಗಿದೆ. ಇನ್ಪೋಸಿಸ್ ಸಂಸ್ಥೆ ಪ್ರಾರಂಭಿಸಿ ದೇಶ ವಿದೇಶಗಳಲ್ಲಿ ಹೆಸರು ಮಾಡಿ ಜಮಖಂಡಿಯನ್ನು ರಾಷ್ಟ್ರ ಮಟ್ಟದಲ್ಲಿ ಪರಿಚಯಿಸುವ ಕಾರ್ಯ ಮಾಡಿದನ್ನು ಗಮನಿಸಿದರೆ ಇವರ ಕಾರ್ಯ 12ನೇ ಶತಮಾನದ ಶರಣರ ಬದುಕನ್ನು ನೆನಪಿಸುತ್ತಿದೆ ಎಂದರು.

ಸರಕಾರಿ ಶಾಲೆಗಳು ಉತ್ತಮಗೊಳ್ಳಬೇಕಾದರೆ ಶಾಸಕರು, ಸದಸ್ಯರು, ಐಪಿಎಸ್ ಅಧಿಕಾರಿಗಳು ಇನ್ನುಳಿದ ಅಧಿಕಾರಿಗಳ ಮಕ್ಕಳು ಸರಕಾರಿ ಶಾಲೆಗಳಿಗೆ ಬಂದಲ್ಲಿ ಶಿಕ್ಷಕರು ಕೂಡಾ ಜಾಗೃತರಾಗಿ ಎಚ್ಚರಿಕೆಯಿಂದ ಒಳ್ಳೆಯ ಶಿಕ್ಷಣ ನೀಡಲು ಮುಂದಾಗುತ್ತಾರೆ. ರಾಜ್ಯದ ಪ್ರತಿಯೊಂದು ಮಕ್ಕಳು ವಿದ್ಯೆಯಿಂದ ವಂಚಿತರಾಗಬಾರದೆಂಬ ಉದ್ದೇಶದ ಕಾರ್ಯವನ್ನು ಜಾರಿಗೆ ತಂದ ಗೋವಿಂದಗೌಡರನ್ನು ನಾವು ಇಂದು ಸ್ಮರಿಸಬೇಕಾಗಿದೆ ಎಂದರು.

ಸಾನ್ನಿಧ್ಯ ವಹಿಸಿದ್ದ ಜಪಾನಂದ ಸ್ವಾಮಿಜಿಯವರು ಮಾತನಾಡಿ ಸುಧಾ ಮೂರ್ತಿಗಳು ಕೇವಲ ಜಮಖಂಡಿಗೆ ಅವರ ಕಾರ್ಯ ಸೀಮಿತವಾಗಿಲ್ಲ. ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸೀಮಿತವಾಗಿರದೇ ನೆರೆ ರಾಜ್ಯಗಳಾದ ಕೇರಳ, ತಮಿಳುನಾಡುಗಳಲ್ಲಿ ಪ್ರವಾಹ ಸಂದರ್ಭದಲ್ಲಿಯೂ ಕೂಡಾ ನೆರವಿನ ಹಸ್ತ ನೀಡಿದ್ದಾರೆ. ಅನೇಕ ಕಡುಬಡವರಿಗೆ, ರೋಗಿಗಳಿಗೆ, ಅಶಕ್ತರಿಗೆ, ಅಂಗವಿಕಲರಿಗೆ ದಾರಿದೀಪವಾಗಿದ್ದಾರೆ ಎಂದು ತಿಳಿಸಿದರು. ಧಾರವಾಡ ವಿಭಾಗದ ಶಿಕ್ಷಣ ಇಲಾಖೆಯ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ ಮಾತನಾಡಿದರು. ಇನ್ಫೋಸಿಸ್‍ನ ಸಂಚಾಲಕ ಎನ್.ಆರ್.ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಉತ್ತಮ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ನಗದು ಪ್ರೋತ್ಸಾಹಧನದ ಚೆಕ್‍ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕೈಮಗ್ಗ ಅಭಿವೃದ್ದಿ ನಿಗಮದ ಅಧ್ಯಕ್ಷರು ಆಗಿರುವ ತೇರದಾಳ ಶಾಸಕ ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ, ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ಇನ್ಪೋಸಿಸ್‍ನ ರಾಘವೇಂದ್ರ ಕುಲಕರ್ಣಿ, ಜಿ.ಪಂ ಸಿಇಓ ಟಿ.ಭೂಬಾಲನ್, ಉಪವಿಭಾಗಾಧಿಕಾರಿ ಸಿದ್ದು ಹುಳ್ಳೊಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

1 Comment

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ