NEWSನಮ್ಮಜಿಲ್ಲೆರಾಜಕೀಯ

ಕಿರಗಸೂರು  ಕೈ ವಶ: ಅಧ್ಯಕ್ಷೆಯಾಗಿ ಜ್ಯೋತಿ, ಉಪಾಧ್ಯಕ್ಷರಾಗಿ ಹುಣಸೂರು ನಾಗರಾಜು ಆಯ್ಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ತಿ.ನರಸೀಪುರ: ತಾಲೂಕಿನ ಕಿರಗಸೂರು ಗ್ರಾಮ ಪಂಚಾಯಿತಿಯ ಆಡಳಿತ ಕಾಂಗ್ರೆಸ್ ಕೈ ವಶವಾಗಿದ್ದು, ನೂತನ ಅಧ್ಯಕ್ಷೆಯಾಗಿ ಜ್ಯೋತಿ ಕಾಂತರಾಜು, ಉಪಾಧ್ಯಕ್ಷರಾಗಿ ಹುಣಸೂರು ನಾಗರಾಜು ಸೋಮವಾರ ನಡೆದ ಚುನಾವಣೆಯಲ್ಲಿ ಆಯ್ಕೆಗೊಂಡರು.

ವರುಣ ವಿಧಾನಸಭಾ ಕ್ಷೇತ್ರದ ತಾಲೂಕಿನ ಕಿರಗಸೂರು ಗ್ರಾಮದಲ್ಲಿರುವ ಗ್ರಾಮ ಪಂಚಾಯಿತಿ ಅಧಿಕಾರದ ಗದ್ದುಗೆಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತರ ನಡುವೆ ಪ್ರತಿಷ್ಠೆಯಾಗಿತ್ತು. ಅಧಿಕಾರ ಕೈಗೊ ಅಥವಾ ಕಮಲಕ್ಕೊ ಎಂಬ ವಬಗ್ಗೆ ಕುತೂಹಲವಿತ್ತು. ಪಂಚಾಯಿತಿ ಕಾರ್ಯಾಲಯದ ಸಭಾಂಗಣದಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಿತು.

ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಜ್ಯೋತಿ ಕಾಂತರಾಜು ಹಾಗೂ ಚಿನ್ನತಾಯಮ್ಮ, ಸಾಮಾನ್ಯಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಹುಣಸೂರು ನಾಗರಾಜು ಮತ್ತು ಪಿ.ನಾಗರಾಜು ನಾಮಪತ್ರ ಸಲ್ಲಿಸಿದರು. ನಂತರ ನಡೆದ ಚುನಾವಣೆಯಲ್ಲಿ ತಲಾ 9 ಮತ ಪಡೆದ ಜ್ಯೋತಿ ಕಾಂತರಾಜು ಅಧ್ಯಕ್ಷೆಯಾಗಿ, ಹುಣಸೂರು ನಾಗರಾಜು ಉಪಾಧ್ಯಕ್ಷರಾಗಿ ಆಯ್ಕೆಯಾದರೆ,ಏಂಟೆಂಟು ಮತಗಳನ್ನು ಪಡೆದುಕೊಂಡ ಚಿನ್ನತಾಯಮ್ಮ ಹಾಗೂ ಪಿ.ನಾಗರಾಜು ಪರಾಭವಗೊಂಡರು.

ಪಂಚಾಯಿತಿಯಲ್ಲಿನ ಎಲ್ಲಾ 17 ಸದಸ್ಯರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು. ಫಲಿತಾಂಶ ಪ್ರಕಟಣೆಗೊಳ್ಳುತ್ತಿದ್ದಂತೆ ಅಧ್ಯಕ್ಷ-ಉಪಾಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು. ಚುನಾವಣಾಧಿಕಾರಿ ನೀರಾವರಿ ನಿಗಮದ ಎಇಇ ಸುಹಾಸ್ ಕಾರ್ಯನಿರ್ವಹಿಸಿದರು.

ತಾಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ರಮೇಶ್ ಮಾತನಾಡಿ, ಹಲವು ಸದಸ್ಯರ ಸಹಕಾರದಿಂದ ಕಿರಗಸೂರು ಗ್ರಾಮ ಪಂಚಾಯಿತಿ ಕಾಂಗ್ರೆಸ್ ವಶವಾಗಿದೆ. ಚುನಾವಣೆ ನಂತರ ಎಲ್ಲಾ ಸದಸ್ಯರನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿಗೆ ಹಾಗೂ ಹಳ್ಳಿಗಾಡಿನ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲು ದುಡಿಯಬೇಕು ಎಂದು ಸಲಹೆ ನೀಡಿದರು.

ಎಪಿಎಂಸಿ ಅಧ್ಯಕ್ಷ ಎನ್.ಅನಿಲ್ ಕುಮಾರ್, ಕುರುಬರ ಸಂಘದ ಮಾಜಿ ಅಧ್ಯಕ್ಷ ಟಿ.ಎಸ್.ಪ್ರಶಾಂತ್ ಬಾಬು, ಗ್ರಾ.ಪಂ ಸದಸ್ಯರಾದ ಕಾಮಿನಿ ರಾಜಶೇಖರ್, ಸರೋಜಮ್ಮ, ಗಿರಿಜಮ್ಮ, ಎಂ.ಮಹೇಶ, ರಾಜೇಶ್ವರಿ ಮಂಜು, ಭಾಗ್ಯ, ಮಾಜಿ ಅಧ್ಯಕ್ಷರಾದ ಮನ್ನೇಹುಂಡಿ ಮಹೇಶ, ಕರಿಯಪ್ಪ, ಪಿಡಿಒ ಸೌಮ್ಯಲತ, ಪುರಸಭೆ ಸದಸ್ಯರಾದ ಸಿ.ಪ್ರಕಾಶ್, ಬಾದಾಮಿ ಮಂಜು, ಮುಖಂಡರಾದ ಏಳುಮಲೆ ಮಂಜು, ಸೋಮಣ್ಣ ನಾಯಕ, ಚಿನ್ನಬುದ್ಧಿ, ಎಂ.ವೆಂಕಟೇಶ್(ವೆಂಕಿ), ಎಚ್.ಸಿ.ಅರುಣ್ ಕುಮಾರ ಇತರರು ಇದ್ದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್