NEWSನಮ್ಮಜಿಲ್ಲೆರಾಜಕೀಯ

ಸ್ನೇಹಿತನ ಪರಿಷತ್‌ ಸದಸ್ಯತ್ವ ಅವಧಿ ಮುಕ್ತಾಯ: ಭಾವುಕರಾದ ಪ್ರಧಾನಿ ಮೋದಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಗುಲಾಬ್ ನಬಿ ಆಜಾದ್ ಅವರ ಪರಿಷತ್‌ ಸದಸ್ಯತ್ವ ಸ್ಥಾನದ ಅವಧಿ ಮುಕ್ತಾಯವಾಗಿದ್ದು ಅವರಿಗೆ ವಿದಾಯ ಹೇಳುವಾಗ ಪ್ರಧಾನಿ ನರೇಂದ್ರ ಮೋದಿ ಭಾವುಕರಾದರು.

ಇಂದು ರಾಜ್ಯ ಸಭೆಯಲ್ಲಿ ಮಾತನಾಡಿದ ಅವರು, ಭಯೋತ್ಪಾದಕ ದಾಳಿಯಿಂದಾಗಿ ಗುಜರಾತ್‌ನ ಜನರು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಸಿಲುಕಿಕೊಂಡಾಗ ಆಜಾದ್ ಮತ್ತು ಪ್ರಣವ್‌ ಮುಖರ್ಜಿಯವರ ಪ್ರಯತ್ನಗಳನ್ನು ನಾನು ಎಂದಿಗೂ ಮರೆಯುವುದಿಲ್ಲ. ತಮ್ಮ ಕುಟುಂಬದ ಸದಸ್ಯರೇ ಸಿಲುಕಿಕೊಂಡಿದ್ದಾರೆ ಎಂಬುವಷ್ಟು ಚಡಪಡಿಸಿ ಗುಜರಾತ್‌ ಜನರನ್ನು ರಕ್ಷಿಸುವಲ್ಲಿ ಅವಿರತ ಶ್ರಮಿಸಿದ್ದರು ಎಂದು ಆಜಾದ್ ಅವರನ್ನು ಹಾಡಿ ಹೊಗಳಿದರು.

ಗುಲಾಮ್ ನಬಿ ಆಜಾದ್ ಅವರನ್ನು ನಾನು ಹಲವು ವರ್ಷಗಳಿಂದ ನೋಡಿದ್ದೇನೆ. ನಾವು ಇಬ್ಬರೂ ಒಟ್ಟಿಗೆ ಮುಖ್ಯಮಂತ್ರಿಗಳಾಗಿದ್ದವರು. ನಾನು ಸಿಎಂ ಆಗುವ ಮೊದಲೇ ಅವರನ್ನು ಸಂಪರ್ಕಿಸಿದ್ದೆ ಆ ವೇಳೆಗಾಗಲೇ ಅವರು ರಾಜಕಾರಣದಲ್ಲಿ ಸಕ್ರಿಯರಾಗಿದ್ದರು. ಅವರ ಸಲಹೆಗಳನ್ನು ನಾನು ಪಡೆದು ಕಾರ್ಯನಿರ್ವಹಿಸಿದ್ದೇನೆ ಎಂದು ತಿಳಿಸಿದರು.

ತೋಟಗಾರಿಕೆ ಬಗ್ಗೆ ಗುಲಾಬ್ ನಬಿ ಆಜಾದ್ ಅವರಿಗೆ ಅಪಾರ ಕಾಳಜಿ ಇದೆ. ಇನ್ನು ಇದಕ್ಕೂ ಮೊದಲು ಜಮ್ಮು ಮತ್ತು ಕಾಶ್ಮೀರ ಚುನಾವಣೆ ಗೆಲ್ಲಲು ಅವರ ಪಾತ್ರವನ್ನು ಹೊಗಳಿದರು. ನಾವು ನಿಜವಾದ ಸ್ನೇಹಿತರು. ಅಧಿಕಾರದಲ್ಲಿ ಎಲ್ಲವನ್ನೂ ಹೇಗೆ ನಿರ್ವಹಿಸಬೇಕು ಎಂಬುದನ್ನು ಅವರನ್ನು ನೋಡಿ ನಾವು ಕಲಿಯಬೇಕು ಎಂದು ಪ್ರಶಂಸಿಸಿದರು.

ಇಂದು ನಾಲ್ವರು ಸಂಸದರು ನಿವೃತ್ತಿಯಾಗುತ್ತಿದ್ದು ಅವರಿಗೆ ಬೀಳ್ಕೊಡಲಾಯಿತು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ