NEWSನಮ್ಮಜಿಲ್ಲೆನಮ್ಮರಾಜ್ಯ

ಸಾಮೂಹಿಕ ವಿವಾಹದಿಂದ ಕುಟುಂಬದ ಅಭಿವೃದ್ಧಿ: ಸಚಿವ ಸೋಮಶೇಖರ್

ಸುತ್ತೂರಿನಲ್ಲಿ ಸಾಮೂಹಿಕ ವಿವಾಹ l ಮಠದ ಸೇವಾ ಕಾರ್ಯಕ್ಕೆ ಮೆಚ್ಚುಗೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಸುತ್ತೂರು: ಕುಟುಂಬದ ಅಭಿವೃದ್ಧಿಗೆ ಸಾಮೂಹಿಕ ವಿವಾಹದಂತಹ ಹೆಜ್ಜೆ ಅತಿ ಅವಶ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಸುತ್ತೂರಿನಲ್ಲಿ ಶ್ರೀಮಠದ ವತಿಯಿಂದ ಏರ್ಪಡಿಸಲಾಗಿದ್ದ ಸಾಮೂಹಿಕ ವಿವಾಹ -95 ಕಾರ್ಯಕ್ರಮದಲ್ಲಿ “ವಚನಕ್ಕೊಂದು ಕಥೆ” ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡಿದ ಸಚಿವರು, ಇಂದು ಬಡವರಾದಿಯಾಗಿ ಹೆಚ್ಚಿನವರು ಶಿಕ್ಷಣಕ್ಕಿಂತ ಹೆಚ್ಚಾಗಿ ವಿವಾಹಕ್ಕೆ ಖರ್ಚು ಮಾಡುತ್ತಿದ್ದಾರೆ. ಇದರಿಂದ ಸಾಲದ ಹೊರೆಯಲ್ಲಿ ಸಿಲುಕುತ್ತಿದ್ದಾರೆ. ಆದರೆ, ಶ್ರೀಕ್ಷೇತ್ರ ಸುತ್ತೂರು ಮಠದ ಈ ಸಾಮೂಹಿಕ ವಿವಾಹ ಮಾಡುತ್ತಿರುವುದು ಶ್ಲಾಘನೀಯ ಹಾಗೂ ಮಾದರಿಯಾಗಿದೆ ಎಂದರು.

ಇಂದು ಸಮಾಜದಲ್ಲಿ ವಿವಾಹಕ್ಕೆ ಅತಿಯಾಗಿ ಖರ್ಚು ಮಾಡುತ್ತಿರುವುದು ಕುಟುಂಬದ ಅಭ್ಯುದಯಕ್ಕೆ ಮಾರಕವಾಗಿದೆ. ಸಾಲ ಮಾಡಿ ಮದುವೆ ಮಾಡಿ ಹತ್ತಾರು ವರ್ಷಗಳಾದರೂ ಸಹ ಸಾಲಮುಕ್ತರಾಗದೆ ಪರಿತಪಿಸುತ್ತಿರುತ್ತಾರೆ. ಶ್ರೀಮಠ ಆಯೋಜಿಸುವ ಇಂತಹ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಮದುವೆಯಾದರೆ ಸಾಲ ಮಾಡುವ ಸಂಭವವೇ ಇರುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ತಮಗೆಲ್ಲ ತಿಳಿದಂತೆ ‘ಹತ್ತೂರಿಗೆ ಮಿಗಿಲು ಸುತ್ತೂರು ಜಾತ್ರೆ’ ಎಂಬ ಖ್ಯಾತಿ ಹೊಂದಿರುವ ಸುತ್ತೂರು ಜಾತ್ರೆಯು ಕೊರೊನಾ ಸೋಂಕಿನ ಕಾರಣಕ್ಕೆ ಈ ವರ್ಷ ಸರಳವಾಗಿ ಜರುಗುತ್ತಿದೆ. ಸುತ್ತೂರು ಮಠದ ವತಿಯಿಂದ ಅನೇಕ ಸಮಾಜೋದ್ಧಾರಕ ಕಾರ್ಯಗಳು ನಡೆಯುತ್ತಿದ್ದು, ಅದರಲ್ಲಿ ಸಾಮೂಹಿಕ ವಿವಾಹವು ಒಂದು.

ಜಾತ್ರಾ ಸಂದರ್ಭದಲ್ಲಿ ಸುಮಾರು 200 ಜೋಡಿಗಳಿಗೆ ಸಾಮೂಹಿಕ ವಿವಾಹವನ್ನು ಏರ್ಪಡಿಸುತ್ತಿದ್ದು, ಅದನ್ನು ರದ್ದುಗೊಳಿಸಿ ಇಡೀ ವರ್ಷ ಪ್ರತಿ ತಿಂಗಳು ಉಚಿತ ಮಾಂಗಲ್ಯ ಹಾಗೂ ವಸ್ತ್ರಗಳನ್ನು ವಿತರಿಸಿ ಸಾಮೂಹಿಕ ವಿವಾಹವನ್ನು ಏರ್ಪಡಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ. ಇಂತಹ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳಲು ನನಗೆ ಹರ್ಷವಾಗುತ್ತಿದೆ. ಈ ಕ್ಷೇತ್ರದಲ್ಲಿ ಮದುವೆ ಆಗುತ್ತಿರುವ ಜೋಡಿಗಳಿಗೆ ಪೂಜ್ಯರ ಆಶೀರ್ವಾದ ದೊರೆಯುತ್ತಿರುವುದರಿಂದ ಅವರಿಗೆ ಸಾರ್ಥಕ ಮನೋಭಾವ ಮೂಡುತ್ತದೆ ಎಂದು ಹೇಳಿದರು.

ಶರಣಿ ಎಂ.ಎ.ನೀಲಾಂಬಿಕಾರವರು ರಚಿಸಿರುವ ವಚನಕ್ಕೊಂದು ಕಥೆ ಎಂಬ ಪುಸ್ತಕವನ್ನು ನಾನು ಬಿಡುಗಡೆ ಮಾಡಿದೆ. ಇಂತಹ ಮೌಲಿಕ ಕೃತಿಯನ್ನು ರಚಿಸಿದ್ದಕ್ಕಾಗಿ ಅವರಿಗೆ ಅಭಿನಂದಿಸುತ್ತೇನೆ. ರಾಜೇಂದ್ರ ಶಿಶು ಎಂಬ ಕಾವ್ಯನಾಮದಲ್ಲಿ ಶರಣೆ ನೀಲಾಂಬಿಕಾ ಅವರು ಹಲವಾರು ಕೃತಿಗಳನ್ನು ರಚಿಸಿರುತ್ತಾರೆ ಎಂದರು.

ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ‍್ಯ ವಹಿಸಿದ್ದರು. ವಿಜಯಪುರ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ, ಶ್ರೀ ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇತರರು ಇದ್ದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ