NEWSನಮ್ಮಜಿಲ್ಲೆರಾಜಕೀಯ

ಟಿ.ದೊಡ್ಡಪುರ ಗ್ರಾಪಂಗೆ ಅಧ್ಯಕ್ಷರಾಗಿ ಭಾರತಿ, ಉಪಾಧ್ಯಕ್ಷರಾಗಿ ಪುಟ್ಟಬುದ್ಧಿ ಆಯ್ಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ತಿ.ನರಸೀಪುರ: ತಾಲೂಕಿನ ಟಿ.ದೊಡ್ಡಪುರ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಆರ್.ಭಾರತಿ, ಉಪಾಧ್ಯಕ್ಷರಾಗಿ ಪುಟ್ಟಬುದ್ಧಿ ಚುನಾವಣೆಯಲ್ಲಿ ಆಯ್ಕೆಗೊಂಡಿದ್ದಾರೆ.

ಟಿ.ದೊಡ್ಡಪುರ ಗ್ರಾಮದಲ್ಲಿರುವ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಚುನಾಯಿತ ಜನಪ್ರತಿನಿಧಿಗಳ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ಮಂಗಳವಾರ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ  ಆರ್.ಭಾರತಿ ಹಾಗೂ ರೇಖಾ, ಪ.ಜಾತಿಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಪುಟ್ಟಸ್ವಾಮಿ ಮತ್ತು ರಾಜಮ್ಮ ನಾಮಪತ್ರ ಸಲ್ಲಿಸಿದ್ದರಿಂದ ಎರಡು ಸ್ಥಾನಗಳಿಗೂ ಚುನಾವಣೆ ನಡೆಯಿತು.

ತಲಾ ಒಂಬತ್ತು ಮತಗಳನ್ನು ಪಡೆದ ಆರ್.ಭಾರತಿ ಅಧ್ಯಕ್ಷರಾಗಿ, ಪುಟ್ಟಸ್ವಾಮಿ ಉಪಾಧ್ಯಕ್ಷರಾಗಿ ಆಯ್ಕೆಯಾದರೆ, ಏಳೇಳು ಮತಗಳನ್ನು ಪಡೆದುಕೊಂಡ ರೇಖಾ ಮತ್ತು ರಾಜಮ್ಮ ಪರಾಭವಗೊಂಡರು. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಸಭೆಯಲ್ಲಿ ಪಂಚಾಯಿತಿಯ 19 ಮಂದಿ ಸದಸ್ಯರು ಭಾಗವಹಿಸಿದ್ದರು. ಫಲಿತಾಂಶ ಪ್ರಕಟಗೊಂಡ ಬಳಿಕ ವಿಜೇತರ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು. ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಮರಿಸ್ವಾಮಿ ಕಾರ್ಯನಿರ್ವಹಿಸಿದರು.

ಸದಸ್ಯರಾದ ಆರ್.ಮಾದೇಶ, ಎಂ.ರಾಜೇಶ, ಮಂಜುಳ ಮಹೇಶ, ನಿಜಗುಣ, ಚಿಕ್ಕತಾಯಮ್ಮ, ಜಯಬಸವಣ್ಣ, ಬಸಮ್ಮಣ್ಣಿ, ಪಿಡಿಓ ರಾಜಶೇಖರಮೂರ್ತಿ, ಮುಖಂಡರಾದ ದೊಡ್ಡನಹುಂಡಿ ನಂಜುಂಡಸ್ವಾಮಿ, ಪುಟ್ಟಬುದ್ಧಿ, ಮಾವಿನಹಳ್ಳಿ ನಂದೀಶ್, ಮಾದೇಗೌಡ, ಮಾವಿನಹಳ್ಳಿ ಪುಟ್ಟಸ್ವಾಮಿ ಹಾಗೂ ಇತರರು ಹಾಜರಿದ್ದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ