NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಪ್ರಧಾನಿ ಮೋದಿ ಒಬ್ಬ ಹೇಡಿ- ಚೀನಾವನ್ನು ಎದುರಿಸುವ ಧೈರ್ಯ, ತಾಕತ್ತಿಲ್ಲದವರು: ರಾಹುಲ್ ಗಾಂಧಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತಕ್ಕೆ ಸೇರಿದ ಪ್ರಾಂತ್ಯವನ್ನು ಚೀನಾಕ್ಕೆ ಬಿಟ್ಟುಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಆರೋಪಿಸಿದ್ದಾರೆ.

ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೇಶದ ಪ್ರಾಂತ್ಯವನ್ನು ಚೀನಾಕ್ಕೆ ಬಿಟ್ಟುಕೊಟ್ಟಿರುವುದಕ್ಕೆ ಜನತೆಗೆ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕಳೆದ ವರ್ಷ ಏಪ್ರಿಲ್ ವರೆಗೆ ಪೂರ್ವ ಲಡಾಕ್ ನಲ್ಲಿ ಭಾರತ ಸೇನೆಯ ಸ್ಥಿತಿ ಯತಾಸ್ಥಿತಿ ಯಲ್ಲಿತ್ತು ಎಂದು ಭಾರತೀಯ ಪಡೆ ಫಿಂಗರ್‌ 3ರಲ್ಲಿತ್ತು. ಹೀಗಾಗಿ ಇಂದು ಭಾರತೀಯ ಪಡೆ ಫಿಂಗರ್ ಮೂರರಲ್ಲಿ ನಿಲುಗಡೆ ಆಗಲಿದೆ ಎಂದು ರಕ್ಷಣಾ ಸಚಿವರು ನಿನ್ನೆ ರಾಜ್ಯಸಭೆಯಲ್ಲಿ ಹೇಳಿಕೆ ನೀಡಿದ್ದಾರೆ. ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಫಿಂಗರ್ 4 ಭಾರತಕ್ಕೆ ಸೇರಿದ ಪ್ರಾಂತ್ಯ ವಾಗಿದೆ. ಅಲ್ಲೇ ನಮ್ಮ ಸೇನೆ ಹೋಗಿ ನಿಲುಗಡೆ ಯಾಗಬೇಕು ಅದುಬಿಟ್ಟು ಪ್ರಧಾನಿ ಮೋದಿಯವರು ಭಾರತಕ್ಕೆ ಸೇರಿದ ಜಾಗವನ್ನು ಏಕೆ ಚೀನಾಕ್ಕೆ ಬಿಟ್ಟುಕೊಟ್ಟಿದ್ದಾರೆ ಎಂದು ರಾಹುಲ್ ಪ್ರಶ್ನಿಸಿದ್ದಾರೆ.

ನಮ್ಮ ಸೇನಾಪಡೆ ಕಷ್ಟಪಟ್ಟು ಕೈಲಾಶ್‌ ವಲಯವನ್ನು ಪಡಿಸಿಕೊಂಡಿದೆ. ಅಲ್ಲಿಂದ ಹಿಂದೆ ಸರಿಯುವಂತೆ ಸೇನೆಗೆ ಹೇಳಲಾಗುತ್ತಿದೆ. ಕೈಲಾಶ್‌ ವಲಯವನ್ನು ಹಿಂಪಡೆದಿದ್ದಕ್ಕೆ ಭಾರತಕ್ಕೆ ಸಿಕ್ಕಿರುವುದಾದರೂ ಏನು? ಅತ್ಯಂತ ಕಾರ್ಯತಂತ್ರ ಹೊಂದಿರುವ ಸ್ಥಳವಾದ ಡೆಪ್ಸಂಗ್ ಪ್ರಸ್ಥಭೂಮಿಯಿಂದ ಚೀನಾದ ಸೇನಾಪಡೆ ಹಿಂದೆ ಸರಿದಿಲ್ಲವೇಕೆ? ಗೂಗ್ರಾ ಮತ್ತು ಹಾಟ್‌ ಸ್ಟ್ರಿಂಗ್ಸ್‌ ಪ್ರದೇಶಗಳಿಂದಲೂ ಚೀನಾ ತನ್ನ ಸೇನೆಯನ್ನು ಹಿಂದೆ ಪಡೆದುಕೊಂಡಿಲ್ಲ ಎಂದು ಪ್ರಶ್ನೆಗಳ ಸುರೆಮಳೆಯನ್ನೇ ಕೇಂದ್ರಕ್ಕೆ ಸುರಿಸಿದ್ದಾರೆ. ಪ್ರಧಾನಿ ಮೋದಿ ಅವರು ಭಾರತದ ಪ್ರಾಂತ್ಯವನ್ನು ಚೀನಾಕ್ಕೆ ಬಿಟ್ಟುಕೊಟ್ಟು ತಲೆತಗ್ಗಿಸಿ ನಿಂತಿದ್ದಾರೆ ಎಂದು ಟೀಕಿಸಿದರು.

ಮೋದಿ ಒಬ್ಬ ಹೇಡಿ ಪ್ರಧಾನ ಮಂತ್ರಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಹೇಡಿ ಎಂದು ಕರೆದ ರಾಹುಲ್ ಗಾಂಧಿ, ಚೀನಾವನ್ನು ಎದುರಿಸಿ ನಿಲ್ಲುವ ತಾಕತ್ತು ಧೈರ್ಯ ಅವರಿಗಿಲ್ಲ ಎಂದು ದೂಷಿಸಿದರು.

ಪ್ರಧಾನಮಂತ್ರಿಗಳು ಹೇಡಿಗಳು, ಅವರಿಗೆ ಚೀನಾದ ಮುಂದೆ ನಿಲ್ಲುವ ತಾಕತ್ತು ಇಲ್ಲ. ನಮ್ಮ ಸೈನಿಕರ ತ್ಯಾಗ ಬಲಿದಾನಗಳು ನಿಷ್ಪ್ರಯೋಜಕವಾಗುವಂತೆ ಮಾಡುತ್ತಿದ್ದಾರೆ. ಸೇನೆಯ ತ್ಯಾಗವನ್ನು ದೇಶದ್ರೋಹಗೊಳಿಸುತ್ತಿದ್ದಾರೆ.

ಒಬ್ಬ ಭಾರತೀಯನಾಗಿ ಯಾರು ಅಂತಹ ಕೆಲಸ ಮಾಡಬಾರದು. ಭಾರತದ ಪ್ರಧಾನಮಂತ್ರಿಯಾಗಿ ದೇಶಕ್ಕೆ ಸೇರಿದ ಇಂಚಿಂಚು ಜಾಗವನ್ನು ಕಾಪಾಡುವುದು ರಕ್ಷಿಸಿಕೊಳ್ಳುವುದು ಅವರ ಜವಾಬ್ದಾರಿಯಾಗಿದೆ. ಅದನ್ನು ಯಾವ ರೀತಿ ಮಾಡುತ್ತಾರೆ ಎಂಬುದು ಅವರಿಗೆ ಬಿಟ್ಟಿದ್ದು ಎಂದರು.

ಇನ್ನೂ ನಿನ್ನೆ ರಾಜ್ಯಸಭೆಯಲ್ಲಿ ಹೇಳಿಕೆ ನೀಡಿದ್ದ ರಕ್ಷಣ ಸಚಿವ ರಾಜನಾಥ್ ಸಿಂಗ್ ಭಾರತದ ಒಂದು ಇಂಚು ನೆಲವನ್ನು ಕೂಡ ಬಿಟ್ಟುಕೊಡುವುದಿಲ್ಲ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆದೇಶ ಸೂಚನೆ ಪ್ರಕಾರ ಚೀನಾದ ಜೊತೆಗೆ ಸೇನೆ ಹಿಂತೆಗೆದುಕೊಳ್ಳುವ ಮಾತುಕತೆಯಾಗಿತ್ತು. ನಾವು ಯಾರೊಬ್ಬರಿಗೂ ಒಂದು ಇಂಚು ಜಾಗವನ್ನು ಸಹ ಬಿಟ್ಟುಕೊಡುವುದಿಲ್ಲ. ನಮ್ಮ ದೃಢನಿರ್ಧಾರದಿಂದ ಒಪ್ಪಂದದ ಪರಿಸ್ಥಿತಿಗೆ ನಾವು ತಲುಪಿದ್ದೇವೆ ಎಂದು ಹೇಳಿದ್ದರು.

ಪೂರ್ವ ಲಡಾಕ್ ಗಡಿ ವಾಸ್ತವ ರೇಖೆಯುದ್ದಕ್ಕೂ ಕಳೆದ ವರ್ಷ ಏಪ್ರಿಲ್ ಮೇ ತಿಂಗಳಿನಿಂದ ಎರಡು ದೇಶಗಳು ಸೇನೆ ಯೋಜನೆಯನ್ನು ಹೊಂದಿದ್ದು ಚೀನಾ ಸಾಕಷ್ಟು ಸಂಖ್ಯೆಯಲ್ಲಿ ಸೇನೆಯನ್ನು ನಿಯೋಜಿಸಿದ್ದರೆ ಅದಕ್ಕೆ ಭಾರತವೂ ಪ್ರತ್ಯುತ್ತರ ನೀಡುತ್ತ ಬಂದಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್