NEWSನಮ್ಮಜಿಲ್ಲೆಸಂಸ್ಕೃತಿ

ಕಲೆ ಉಳಿಸಿ ಬೆಳೆಸಲು ಪ್ರೋತ್ಸಾಹ ಅಗತ್ಯ : ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಜೇವರ್ಗಿ: ಇಂದಿನ ದಿನಮಾನಗಳ ಸಂಸಾರದ ಜಂಜಾಟದಲ್ಲಿ ನಾವೆಲ್ಲ ನಗುವನ್ನೇ ಮರೆತಿದ್ದೇವೆ. ಆ ನಗುವನ್ನು ಮರುಕಳಿಸಲು ನಾವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸಬೇಕು ಎಂದು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ಹೇಳಿದ್ದಾರೆ.

ಪಟ್ಟಣದ ಮಹಿಬೂಬ ಪಂಕ್ಷನ್ ಹಾಲನಲ್ಲಿ ಮಂಗಳವಾರ ಸಂಜೆ ಆರ್ ಕೆ ಪಿ ಗ್ರೂಪ್ ವತಿಯಿಂದ ನಡೆದ ಮಸ್ತ ಮಜಾ ಮಾಡು ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೊರೊನಾ ಸಮಯದಲ್ಲಿ ಸಾರ್ವಜನಿಕರಿಗೆ ಯಾವುದೇ ಮನರಂಜನೆ ಕಾರ್ಯಕ್ರಮ ಇಲ್ಲದೇ ಬಹಳ ಬೇಜಾರಾಗಿದ್ದರು. ಅದನ್ನು ಮನಗಂಡು ಜೇವರ್ಗಿ ಪಟ್ಟಣದ ಆರ್ ಕೆ ಪಿ ಗ್ರೂಪ್ನನವರು ಇಂದು ಕಾರ್ಯಕ್ರಮ ಆಯೋಜಿಸುವ ಮೂಲಕ ಜನರಿಗೆ ಮನರಂಜೆ ನೀಡಿದರು. ಇವರು ಕಳೆದ ಹದಿನಾಲ್ಕು ವರ್ಷಗಳಿಂದ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.

ಇನ್ನು ಕಲಾವಿದರನ್ನು ಪ್ರೋತ್ಸಾಹಿಸಿದೆ ಅವರಿಗೆ ಉತ್ತಮ ವೇದಿಕೆ ಕಲ್ಪಿಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕನ್ನಡ ಕೋಗಿಲೆ ಮತ್ತು ಜೀ ವಾಹಿನಿಯ ಖ್ಯಾತಿಯ ಕು.ಮಹಾನ್ಯ, ಕು. ಅರ್ಜುನ ಇಟಗಿ, ಇಬ್ರಾಹಿಂ ಕಾಸರ, ಕಾಸಿಂ ಅಲಿ ಮತ್ತು ಶೀಲಾ ಹಿರೇಮಠ ಸೇರಿದಂತೆ ಅನೇಕ ಕಲಾವಿದರು ತಮ್ಮ ಪ್ರತಿಭೆ ಪ್ರದರ್ಶನ ಮಾಡಿ ಪ್ರೇಕ್ಷಕರನ್ನು ರಂಜಿಸಿದರು.

ಕೊರೊನಾ ಸಂದರ್ಭದಲ್ಲಿ ಸೇವೆಗೈದ ತಾಲೂಕಿನ ಆರೋಗ್ಯಾಧಿಕಾರಿ ಸಿದ್ದು ಪಾಟೀಲ, ಪಿಎಸ್ಐ ಸಂಗಮೇಶ ಅಂಗಡಿ, ಆಹಾರ ಇಲಾಖೆಯ ಡಿ.ಬಿ.ಪಾಟೀಲ, ಸಿಡಿಪಿಒ ಸಂಗಣಗೌಡ, ಕೊರೊನಾ ಯೋಧ ಮಲ್ಲಿಕಾರ್ಜುನ ಬಿರಾದಾರ ಅವರನ್ನು ಸನ್ಮಾನಿಸಲಾಯಿತು. ಜತೆಗೆ ಐದು ಜನ ಅಂಗವಿಕಲರನ್ನು ವಿಶೇಷವಾಗಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪಟ್ಟಣದ ಸಾವಿರಾರು ಜನರು ಇದ್ದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ