CrimeNEWSನಮ್ಮಜಿಲ್ಲೆ

ಜಗಳ ಬಿಡಿಸಲು ಹೋದ ನಾಲ್ಕು ತಿಂಗಳ ಗರ್ಭಿಣಿಗೆ ಒದ್ದು ಗರ್ಭಪಾತ

ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು l ಹಲ್ಲೆ ಮಾಡಿದವರ ಬಂಧನ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕೊಳ್ಳೇಗಾಲ: ಗಂಡ ಮತ್ತು ಆತ್ತೆಯ ಮೇಲೆ ಹಲ್ಲೆ ನಡೆಸುತ್ತಿದ್ದವರು ತಡೆಯಲು ಹೋದ ಗರ್ಭಿಣಿ ಹೊಟ್ಟೆಗೆ ಒದ್ದು ನಾಲ್ಕು ತಿಂಗಳ ಭ್ರೂಣ ಹತ್ಯೆ ಮಾಡಿರುವ ಘಟನೆ ತಾಲೂಕಿನ ಉತ್ತಂಬಳ್ಳಿಯಲ್ಲಿ ನಡೆದಿದೆ.

ಗ್ರಾಮದ ಸೋಮು ಎಂಬಾತನ ಹೆಂಡತಿ ಮಾದೇವಿ ಎಂಬುವರಿಗೆ ಗರ್ಭಪಾತವಾಗಿರುವುದು.

ಸೋಮು ಸ್ನೇಹಿತರೊಡನೆ ಜಿಮ್‌ ಮಾಡುತ್ತಿದ್ದಾಗ ನನ್ನ ಹೆಂಡತಿಯನ್ನು ನೋಡುತ್ತಿದ್ದ ಎಂದು ಅದೇ ಗ್ರಾಮದ ಬೆಳೆ ಮಹೇಶ ಎಂಬಾತ ತನ್ನ ಸಹೋದರ ಶಿವಣ್ಣ ಹಾಗೂ ಗೋವಿಂದ ಎಂಬುವರ ಜೊತೆಗೂಡಿ ಅವಾಚ್ಯ ಶಬ್ದಗಳಿಂದ ಬೈದು, ಸೋಮನ ಮೇಲೆ ಹಲ್ಲೆ ಮಾಡುವಾಗ ಅದನ್ನು ಬಿಡಿಸಲು ಹೋದ ಆತನ ತಾಯಿ ಮಲ್ಲಮ್ಮಳ ಮೇಲೂ ಹಲ್ಲೆ ಮಾಡಿದ್ದಾರೆ.

ಗರ್ಭಿಣಿ ಮಾದೇವಿ ಗಂಡ ಸೋಮು, ಆತ್ತೆ ಮಲ್ಲಮ್ಮಳ ಮೇಲೆ ಹಲ್ಲೆ ನಡೆಯುತ್ತಿರುವುದನ್ನು ನೋಡಿ, ತಡೆಯಲು ಹೋಗಿದ್ದಾರೆ. ವೇಳೆ ಮಾದೇವಿ ಹೊಟ್ಟೆಯ ಮೇಲೆ ಮಹೇಶ ಒದ್ದಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಹೊಟ್ಟೆ ನೋವಿನಿಂದ ನರಳಾಡುತ್ತಿದ್ದಾಗ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ. ಈ ಅಘಾತದಿಂದ ಮಹಿಳೆಗೆ ಗರ್ಭಪಾತವಾಗಿದೆ.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ