NEWSಕೃಷಿದೇಶ-ವಿದೇಶರಾಜಕೀಯ

ಗೃಹಿಣಿಯರಿಗೆ 2 ಸಾವಿರ ಮಾಸಾಶನ: ಪ್ರಿಯಾಂಕಾ ಗಾಂಧಿ ವಾದ್ರಾ ಘೋಷಣೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಿಣಿ ಸಮ್ಮಾನ್ ಯೋಜನೆ ಜಾರಿ l ಟೀ ತೋಟದಲ್ಲಿ ಸೊಪ್ಪು ಬಿಡಿಸುವ ಮಹಿಳೆಯರಿಗೆ ಪ್ರತಿದಿನ 365 ರೂ.

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ದಿಸ್ಪುರ್: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಿಣಿ ಸಮ್ಮಾನ್ ಯೋಜನೆ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ. ಕೊಡಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಘೋಷಣೆ ಮಾಡಿದ್ದಾರೆ.

ಅಸ್ಸಾಂನಲ್ಲಿ ಭರ್ಜರಿಯಾಗಿ ಚುನಾವಣೆ ಪ್ರಚಾರ ಆರಂಭಿಸಿರುವ ಅವರು ಇಂದು ಎಸ್ಟೇಟುಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಮಿಕರೊಂದಿಗೆ ಸಮಯ ಕಳೆದಿದ್ದಾರೆ. ಈ ವೇಳೆ ಗೃಹಿಣಿ ಸಂಯೋಜನೆ ಮೂಲಕ ಗೃಹಿಣಿಯರಿಗೆ ಪ್ರತಿ ತಿಂಗಳು 2000 ರೂ. ಮತ್ತು ಟೀ ತೋಟದಲ್ಲಿ ಸೊಪ್ಪು ಬಿಡಿಸುವ ಮಹಿಳೆಯರಿಗೆ ಪ್ರತಿದಿನ 365 ರೂ. ನೀಡುತ್ತೇವೆ. ಜತೆಗೆ 5ಲಕ್ಷ ಹೊಸ ಸರ್ಕಾರಿ ಕೆಲಸಗಳನ್ನು ಸೃಷ್ಟಿಸುತ್ತಿವೆ ಎಂದು ಹೇಳಿದರು.

ಈ ಎಲ್ಲಾ ಹೇಳಿಕೆಗಳು ಕೇವಲ ಆಶ್ವಾಸನೆಗಳಲ, ಭರವಸೆಗಳು. ಅಲ್ಲದೆ ಪ್ರತಿ ತಿಂಗಳು 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಎಲ್ಲಾ ಹೇಳಿಕೆಗಳನ್ನು ಈಡೇರಿಸುತ್ತೇವೆ ಎಂದು ಹೇಳುವ ಮೂಲಕ ಜನರಲ್ಲಿ ಕಾಂಗ್ರೆಸ್‌ ಪರ ಒಲವು ಮೂಡಿಸುತ್ತಿದ್ದಾರೆ.

ಅಸ್ಸಾಂನಲ್ಲಿ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಇಂದು ಬೆಳಗ್ಗೆ ಸಹ ಪ್ರಿಯಾಂಕಾ ಗಾಂಧಿ ವಾದ್ರಾ ಟೀ ಎಲೆಗಳನ್ನು ಕಿತ್ತಿದ್ದಾರೆ. ಆ ಫೋಟೋಗಳನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದು ಸಕ್ಕತ್ತು ವೈರಲ್ ಆಗುತ್ತಿದೆ.

ಅಸ್ಸಾಂನಲ್ಲಿ ಚುನಾವಣಾ ಪ್ರಚಾರದಲ್ಲಿರುವ ಪ್ರಿಯಾಂಕಾ ವಾದ್ರಾ ಪ್ರಚಾರದ ಅಂಗವಾಗಿ ಆದಿವಾಸಿಗಳೊಂದಿಗೆ ಸಂವಾದ ನಡೆಸಿದ್ದಾರೆ. ಅಲ್ಲದೆ ಚಹಾ ತೋಟ ಕಾರ್ಮಿಕರ ಜೀವನದ ಸತ್ಯ ಮತ್ತು ಸರಳತೆ ಇಂದ ಕೂಡಿದೆ ಮತ್ತು ಅವರ ಶ್ರಮ ದೇಶಕ್ಕೆ ಅಮೂಲ್ಯವಾಗಿದೆ ಎಂದು ಹೇಳಿದ್ದಾರೆ.

ಅವರೊಂದಿಗೆ ಕುಳಿತುಕೊಳ್ಳುವುದು ಅವರ ಕೆಲಸ ಕುಟುಂಬದ ಯೋಗಕ್ಷೇಮ ಮತ್ತು ಅವರ ಜೀವನದ ಕಷ್ಟಗಳ ಅನುಭವವನ್ನು ತಿಳಿದುಕೊಂಡೆ ಅವರಿಂದ ನನಗೆ ದೊರೆತ ಪ್ರೀತಿ ಮತ್ತು ಅನ್ಯೂನ್ಯತೆಯನ್ನು ನಾನು ಮರೆಯುವುದಿಲ್ಲ ಎಂದು ಬರೆದುಕೊಂಡಿರುವ ಅವರು, ಸುಂದರ ಕ್ಷಣಗಳ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ತೋಟದಲ್ಲಿ ಮಹಿಳಾ ಕಾರ್ಮಿಕರಿಂದ ಚಹಾ ಎಲೆಗಳನ್ನು ಬಿಡಿಸಿದ್ದಾರೆ ಎಂದು ಬರೆದುಕೊಂಡು ಕಾಂಗ್ರೆಸ್ ಅಧಿಕೃತ ಖಾತೆಯಲ್ಲಿ ಪ್ರಿಯಾಂಕಾ ಅವರ ಟೀ ಎಲೆ ಬಿಡಿಸುತ್ತಿರುವ ವಿಡಿಯೋವನ್ನು ಹಂಚಿಕೊಂಡಿದೆ.

ಅಸ್ಸಾಂನಲ್ಲಿ ಮಾರ್ಚ್ 27ರಿಂದ ಚುನಾವಣೆ ಆರಂಭವಾಗಲಿದ್ದು ಪ್ರಿಯಾಂಕಗಾಂಧಿ ಎರಡು ದಿನಗಳ ಕಾಲ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ವಿಧಾನಸಭಾ ಚುನಾವಣೆ 3 ಹಂತಗಳಲ್ಲಿ ನಡೆಯಲಿದೆ.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ