NEWSನಮ್ಮರಾಜ್ಯರಾಜಕೀಯ

ಒಂದು ದೇಶ ಒಂದು ಚುನಾವಣೆಗೆ ಕಾಂಗ್ರೆಸ್‌ ವಿರೋಧ: ಸದನದ ಬಾವಿಗಿಳಿದ ಶಾಸಕರು- ಸದನದಲ್ಲಿ ಕೋಲಾಹಲ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಒಂದು ದೇಶ ಒಂದು ಚುನಾವಣೆ ಯಿಂದ ಅಭಿವೃದ್ಧಿಯ ವೇಗ ಹೆಚ್ಚಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ವಿಧಾನಸಭೆಯಲ್ಲಿಂದು ಒಂದು ದೇಶ ಒಂದು ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗಳು ನಡೆಯುವುದರಿಂದ ಆಡಳಿತಯಂತ್ರದ ಸುಗಮ ಕಾರ್ಯನಿರ್ವಹಣೆ ಸಾಧ್ಯವಾಗಲಿದೆ. ಈ ಚುನಾವಣೆಯಿಂದ ಕೆಲವು ವ್ಯತ್ಯಾಸಗಳು ಆಗಬಹುದು. ಆದರೆ ಅಭಿವೃದ್ಧಿಯ ದೃಷ್ಟಿಯಿಂದ ಇದು ಅನಿವಾರ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಏಕಕಾಲದಲ್ಲಿ ನಡೆದರೆ ಅಭಿವೃದ್ಧಿಯಾಗಲಿದೆ. ಈ ಬಗ್ಗೆ ವ್ಯಾಪಕ ಚರ್ಚೆ ನಡೆದು ಭಾರತದಲ್ಲಿ ಒಂದೇ ಬಾರಿಗೆ ಚುನಾವಣೆ ನಡೆಯುವ ಪದ್ಧತಿ ಅನುಷ್ಠಾನಕ್ಕೆ ಬರಲಿ. ಅನಗತ್ಯ ಖರ್ಚು ವೆಚ್ಚಗಳು ಮತ್ತು ಸಮಯದ ಉಳಿತಾಯ ಇದರಿಂದ ಸಾಧ್ಯವಾಗಿದೆ. ಜತೆಗೆ ಎಲ್ಲ ರಾಜಕೀಯ ಪಕ್ಷಗಳು ರಾಜ್ಯ ಸರ್ಕಾರಗಳು ಸಂಸತ್ತಿನ ಉಭಯ ಸದನಗಳಲ್ಲಿ ರಾಜ್ಯದ ವಿಧಾನಮಂಡಲದಲ್ಲಿ ಚಿಂತನ-ಮಂಥನ ನಡೆಸಿದರೆ ಮಾತ್ರ ಒಂದು ರಾಷ್ಟ್ರ ಒಂದು ಚುನಾವಣೆ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ ಎಂದು ಯಡಿಯೂರಪ್ಪ ಹೇಳಿದರು.

ಈ ನಿಯಮ ಜಾರಿಗೆ ಬಂದರೆ ಕೆಲವು ರಾಜಕೀಯ ಹೊಂದಾಣಿಕೆ ಅನಿವಾರ್ಯವಾಗುವುದು. ಲೋಕಸಭೆ-ವಿಧಾನಸಭೆಗಳ ಅವಧಿಯಲ್ಲಿ ಏರಿಳಿತಗಳು ಆಗಬಹುದು. ಇವೆಲ್ಲಾ ಪ್ರಾರಂಭಿಕ ಆಡಚರಣೆಗಳಾಗಿದ್ದು, ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಒಂದು ರಾಷ್ಟ್ರ ಒಂದು ಚುನಾವಣೆ ಜಾರಿಗೆ ತರುವುದು ದೊಡ್ಡ ಸವಾಲು ಎನ್ನುವುದರಲ್ಲಿ ಅನುಮಾನವೇ ಇಲ್ಲ. ವಿಸ್ತೃತ ಚರ್ಚೆ ಮೂಲಕ ಸಾಧಕ-ಬಾಧಕಗಳನ್ನು ತಿಳಿದರೆ ಸ್ಪಷ್ಟತೆ ಮೂಡಲಿದೆ.

ಏಕಕಾಲದಲ್ಲಿ ಚುನಾವಣೆ ನಡೆಸಬೇಕು. ಒಮ್ಮೆ ಶಾಸಕರು ಆಯ್ಕೆಯಾಗಿ ಕೆಲವರು ಅಕಾಲಿಕವಾಗಿ ಮೃತಪಟ್ಟರೆ ಆ ಸ್ಥಾನಗಳನ್ನು ತುಂಬಲು ನಡೆಯುವ ಉಪಚುನಾವಣೆ ವ್ಯವಸ್ಥೆಗೆ ನಾಂದಿ ಹಾಡಬೇಕಿದೆ. ಸ್ಥಳೀಯ ಸಮಸ್ಯೆಗಳು ಮತ್ತು ಸ್ಥಳೀಯ ಮತದಾರರ ಹಿತಕ್ಕೆ ಯಾವುದೇ ಧಕ್ಕೆಯಾಗದಂತೆ ಚುನಾವಣೆ ನಡೆಸುವುದು ಮುಖ್ಯ. ಆಡಳಿತ ಸುಧಾರಣೆಯ ದಿಕ್ಕಿನಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಮಹತ್ವದ ಹೆಜ್ಜೆಯಾಗಲಿದೆ ಎಂದು ಹೇಳಿದರು

ಹಣ ಬಲದ ಮೇಲೆ ಚುನಾವಣೆ-ದುರದೃಷ್ಟಕರ
ಚುನಾವಣೆ ಯಶಸ್ಸು ಹಣ ಬಲದ ಮೇಲೆ ನಿಂತಿರುವುದು ದುರದೃಷ್ಟಕರ ಎಂದು ಹೇಳಿದ ಯಡಿಯೂರಪ್ಪ ವ್ಯಕ್ತಿ, ವ್ಯಕ್ತಿತ್ವ, ಚರಿತ್ರೆ ಹಾಗೂ ಅಭ್ಯರ್ಥಿಗಳ ವರ್ಚಸ್ಸು ಮತ್ತು ವಿಶ್ವಾಸವನ್ನು ಅವಲಂಬಿತ ಚುನಾವಣೆಗಳೂ ನಡೆಯುವುದರಿಂದ ಪಕ್ಷ ಅಭ್ಯರ್ಥಿ ಹಾಗೂ ಮತದಾರರ ಮೇಲೆ ಸಕಾರಾತ್ಮಕ ಪರಿಣಾಮ ಬೀರೆ ದೇಶದಲ್ಲಿ ಮಹತ್ವದ ಬದಲಾವಣೆ ತರಲಿದೆ. ಆಳವಾದ ಅಧ್ಯಯನ ಮತ್ತು ಸಮಾಲೋಚನೆ ಸವಿಸ್ತಾರವಾದ ಚರ್ಚೆ ನಡೆಯಬೇಕು. ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ನಮಗೆ ಚುನಾವಣೆಯಲ್ಲಿ ಏಕರೂಪ ವ್ಯವಸ್ಥೆ ಜಾರಿಗೆ ತರುವುದು ಕಷ್ಟವೇನಲ್ಲ. ಈ ನಿಟ್ಟಿನಲ್ಲಿ ಕರ್ನಾಟಕ ವಿಧಾನಮಂಡಲ ನಿರ್ಣಯ ಕೈಗೊಂಡು ಜಾರಿಗೆ ಮುಂದಾಗಬೇಕಿದೆ ಎಂದು ಸಿಎಂ ತಿಳಿಸಿದರು.

ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ
ಒಂದು ದೇಶ ಒಂದು ಚುನಾವಣೆ ಕುರಿತಂತೆ ವಿಧಾನಸಭೆಯಲ್ಲಿ ಚರ್ಚೆ ಆರಂಭಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಚರ್ಚೆಯ ಪ್ರತಿಯನ್ನು ಹರಿದುಹಾಕಿ ಬಾವಿಗಿಳಿದು ಧರಣಿ ನಡೆಸಿದರು. ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭಗೊಂಡಿದೆ. ವಿಧಾನಮಂಡಲ ಕಲಾಪದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಒಂದು ದೇಶ ಒಂದು ಚುನಾವಣೆ ವಿಷಯವನ್ನು ಚರ್ಚೆಗೆ ಕೈಗೆತ್ತಿಕೊಳ್ಳುವುದಾಗಿ ಹೇಳಿದರು. ಸಿದ್ದರಾಮಯ್ಯ ಮಾತನಾಡಿ ಈ ವೇಳೆ ಇದರ ಚರ್ಚೆಗೆ ನಮ್ಮ ಒಪ್ಪಿಗೆ ಇಲ್ಲ ಇದು ಆರ್‌ಎಸ್‌ಎಸ್‌ ಅಜೆಂಡವಾಗಿದೆ . ಯಾವುದೇ ಕಾರಣಕ್ಕೂ ಈ ಚರ್ಚೆಗೆ ಸಮ್ಮತಿಸುವುದಿಲ್ಲ ಎಂದು ಪಟ್ಟುಹಿಡಿದರು.

ಈ ನಡುವೆ ಸದನದಲ್ಲಿ ಗದಲ ಕೋಲಾಹಲ ಹೆಚ್ಚಾದ್ದರಿಂದ 15 ನಿಮಿಷಗಳ ಕಾಲ ಕಲಾಪವನ್ನು ಸ್ಪೀಕರ್ ಮುಂದೂಡಿದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...