NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಶಾಸಕ ಸಂಗಮೇಶರ ಅಮಾನತು ಮಾಡಿದ್ದು ಸರಿಯಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು
: ಸದನದಲ್ಲಿ ಭದ್ರಾವತಿ ಶಾಸಕ ಸಂಗಮೇಶ ಯಾವ ಕಾರಣಕ್ಕೆ ಶರ್ಟ್‌ ಬಿಚ್ಚಿದ್ದರು ಎಂಬುದನ್ನು ಸ್ಪೀಕರ್ ಕಾಗೇರಿ ಅರ್ಥಮಾಡಿಕೊಳ್ಳಬೇಕಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸದನದಿಂದ ಸಂಗಮೇಶ್ವರ ಅವರನ್ನು ಅಮಾನತು ಮಾಡಿದ ಬಗ್ಗೆ ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಒಬ್ಬ ಶಾಸಕರು ಸದನದಲ್ಲಿ ಸುಮ್ಮಸುಮ್ಮನೆ ಅಂಗಿ ಬಿಚ್ಚುವುದಿಲ್ಲ ಅವರಿಗೆ ಆಗಿರುವ ಸಮಸ್ಯೆಯನ್ನು ಸರ್ಕಾರದಿಂದ ಕೇಳಿಕೊಳ್ಳಲಾಗಲಿಲ್ಲ. ಭದ್ರಾವತಿಯಲ್ಲಿ ಸಂಗಮೇಶ್ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ವಿನಾಕಾರಣ ಕೇಸ್ ಹಾಕಿದ್ದಾರೆ. ನ್ಯಾಯ ಸಿಗದೇ ಇದ್ದುದರಿಂದ ಸಂಗಮೇಶ ಪ್ರತಿಭಟಿಸಿದ್ದಾರೆ. ಇದಕ್ಕೆ ಅವರನ್ನು ಸ್ಪೀಕರ್ ಅಮಾನತು ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಹಿಂದೆ ಸದನದಲ್ಲಿ ಗೂಳಿಹಟ್ಟಿ ಶೇಖರ್ ಶರ್ಟ್‌ ಹರಿದುಕೊಂಡಿದ್ದ ಪ್ರಕರಣವನ್ನು ಉಲ್ಲೇಖಿಸಿದ ರಾಮಲಿಂಗರೆಡ್ಡಿ, ಸಂಗಮೇಶ್‌ ಏಕೆ ಅಂಗಿ ಬಿಚ್ಚಿದ್ದರು ಎಂಬುದನ್ನು ಅರ್ಥಮಾಡಿಕೊಳ್ಳಬೇಕಿತ್ತು. ರಾಜಕಾರಣ ಮಾಡಬಾರದು. ಸಂಗಮೇಶ ಸದನದಲ್ಲಿ ಶರ್ಟ್‌ ಬಿಚ್ಚಿದ್ದು ಸರಿಯಲ್ಲ. ಆದರೆ ಅವರಿಗೆ ಸರಿಯಾಗಿ ಮಾತನಾಡಲು ಅವಕಾಶವೇ ಕೊಡಲಿಲ್ಲ.

ಸಂಗಮೇಶ ತೊಂದರೆಯನ್ನು ಹೇಳಿಕೊಳ್ಳಲು ಅವಕಾಶ ಕೊಡಲಿಲ್ಲ. ಶಾಸಕರಿಗೆ ಈ ಸರ್ಕಾರದಲ್ಲಿ ಸೂಕ್ತ ಭದ್ರತೆ ಇಲ್ಲವೆಂದರೆ ಹೇಗೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಧೋರಣೆ ಸರಿಯಲ್ಲ. ಸಂಗಮೇಶ್ ಅವರನ್ನು ಸ್ಪೀಕರ್ ತಮ್ಮ ಕಚೇರಿಗೆ ಕರೆಸಿ ತೊಂದರೆ ಕೇಳಬೇಕಿತ್ತು. ಆದರೆ ಹಾಗೆ ಮಾಡದೆ ಏಕಾಏಕಿ ಸದನದಿಂದ ಅಮಾನತು ಮಾಡುವ ತೀರ್ಮಾನ ತೆಗೆದುಕೊಂಡಿರುವುದು ಸರಿಯಲ್ಲ ಎಂದು ಖಂಡಿಸಿದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...