NEWSಕೃಷಿನಮ್ಮರಾಜ್ಯರಾಜಕೀಯ

ರೈತರ ಪರ ಕಾಳಜಿ: ಸಂಭಾವನೆ ಪಡೆಯದೆ ಕೃಷಿ ರಾಯಭಾರಿಯಾದ ದರ್ಶನ್

ರೈತರ ಪರವಾಗಿ ಚಾಲೆಂಜಿಂಗ್ ಸ್ಟಾರ್ ಗೆ ಅಭಿನಂದನೆ ಸಲ್ಲಿಸಿದ ಸಿಎಂ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಯಾವುದೇ ಸಂಭಾವನೆ ಇಲ್ಲದೆ ಕೃಷಿ ಇಲಾಖೆಯ ರಾಯಭಾರಿಯಾಗಲು ನಟ ದರ್ಶನ್ ಒಪ್ಪಿದ್ದಾರೆ. ಇದು ಮೆಚ್ಚುಗೆಯ ಸಂಗತಿ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಕೃಷಿ ಕಾಯಕದ ರಾಯಬಾರಿ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೃಷಿ ಇಲಾಖೆಯ ಯೋಜನೆಗಳನ್ನು, ಕೃಷಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೈತರಿಗೆ ತಲುಪಿಸಲು, ರೈತರಿಗೆ ಹಾಗೂ ವಿಶೇಷವಾಗಿ ಯುವಜನತೆಗೆ ಪ್ರೇರಣೆ ನೀಡುವ ನಿಟ್ಟಿನಲ್ಲಿ ಕೃಷಿ ಕಾಯಕದ ರಾಯಭಾರಿಯಾಗಿ ಪದಗ್ರಹಣ ಮಾಡಿದ ದರ್ಶನ್ ಅವರನ್ನು ಇಂದು ಅಭಿನಂದಿಸಲಾಯಿತು ಎಂದು ತಿಳಿಸಿದರು.

ಇನ್ನು ಸಿನಿಮಾರಂಗದಲ್ಲಿ ಎತ್ತರಕ್ಕೆ ಬೆಳೆದಿರುವ ದರ್ಶನ್ ನಟ, ಜೊತೆಗೆ ಕೃಷಿ ಚಟುವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ರೈತರ ಪರವಾಗಿ ದರ್ಶನ್‌ಗೆ ಅಭಿನಂದನೆಗಳು. ನಾನು ಕೂಡ ದರ್ಶನ್ ಅವರ ರಾಬರ್ಟ್‌ ಚಿತ್ರವನ್ನು ನೋಡುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.

ಇದು ಕೃಷಿ ಇಲಾಖೆ ಅಭೂತಪೂರ್ವ ಕಾರ್ಯಕ್ರಮ. ಚಾಲೆಂಜಿಂಗ್ ಸ್ಟಾರ್ ಚಿತ್ರರಂಗದಲ್ಲಿ ನಟನೆಯ ಜೊತೆಗೆ ಕೃಷಿ, ಪಶುಸಂಗೋಪನೆ ಚಟುವಟಿಕೆಗಳಲ್ಲೂ ತೊಡಗಿಕೊಂಡಿದ್ದಾರೆ ದರ್ಶನ್ ಕೃಷಿ ಕಾಯಕದ ರಾಯಭಾರಿಯಾಗಿ ಇರುವುದು ಹೆಮ್ಮೆಯ ವಿಷಯ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.

ರೈತ ನಾಯಕರಾಗಿ ರೈತಪರ ಹೋರಾಟ ಮಾಡಿ ರಾಜ್ಯದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿರುವ ನಾಡಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುತ್ತಿರುವುದು ಸಂತಸದ ವಿಚಾರ.

ದರ್ಶನ್ ಎಷ್ಟು ಎತ್ತರವಾಗಿದ್ದಾರೋ ಅವರ ಹೃದಯವು ಅಷ್ಟೇ ವಿಶಾಲವಾಗಿದೆ. ದರ್ಶನ್ಗೆ ರೈತಪರ ಕಾಳಜಿ ಇದೆ. ದರ್ಶನ್ ಅವರ ಫಾರ್ಮ್ ಎನ್ನುವುದು ಒಂದು ಸಣ್ಣ ಝೂ ಇದ್ದಂತಿದೆ. ರೈತರೊಂದಿಗಿನ ಕಾರ್ಯಕ್ರಮದಲ್ಲಿ ಒಂದು ದಿನ ಪಾಲ್ಗೊಳ್ಳುತ್ತೇನೆ ಎಂದಿದ್ದಾರೆ ಎಂದು ತಿಳಿಸಿದರು.

ಸೂಪರ್ ಸ್ಟಾರ್ ಗಳು ಸಂಭಾವನೆ ಪಡೆದು ದೊಡ್ಡ ದೊಡ್ಡ ಕಂಪನಿಯ ಕಾರ್ಯಕ್ರಮಗಳಲ್ಲಿ ರಾಯಭಾರಿ ಯಾಗುತ್ತಾರೆ. ಆದರೆ ದರ್ಶನ್ ಕೃಷಿ ಇಲಾಖೆಗೆ ಯಾವುದೇ ಸಂಭಾವನೆ ಪಡೆಯದೆ ರಾಯಭಾರಿಯಾಗಿದ್ದಾರೆ. ಇದು ಅವರಲ್ಲಿರುವ ಕೃಷಿ ಉತ್ಸಾಹ, ರೈತರ ಕಾಳಜಿಯನ್ನು ತೋರಿಸುತ್ತದೆ ಎಂದರು.

ದರ್ಶನ್ ನಟನೆಯ ರಾಬರ್ಟ್ ಚಿತ್ರ ರಿಲೀಸ್ ಕಾರ್ಯಕ್ರಮಕ್ಕೆ ಸ್ವತಃ ಸ್ಪೂರ್ತಿಯಿಂದ ಅಭಿಮಾನಿಗಳು, ಜನರು ಸೇರುವುದು ನೋಡಿದರೆ ಅವರಿಗೆ ಜನರ ಅಭಿಮಾನ ಎಷ್ಟಿದೆ ಎಂದು ತೋರುತ್ತದೆ. ನಾನು ಆಧುನಿಕ ಕೌರವನಾಗಿ ನಟನೆ ಮಾಡಿದ್ದೆ, ಆದರೆ ಪೌರಾಣಿಕವಾಗಿ ನಟನೆಯಲ್ಲಿ ದರ್ಶನ್ ಕೌರವನಾಗಿ ನಟಿಸಿದ್ದಾರೆ. ಮಾರ್ಚ್ 11ರಂದು ಚಿತ್ರ ಬಿಡುಗಡೆಯಾಗಲಿದ್ದು, ಚಿತ್ರ ಸೂಪರ್ ಡೂಪರ್ ಹಿಟ್ ಆಗಲಿ ಎಂದು ಹೇಳಿದರು.

ದರ್ಶನ್ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ಸಿನಿಮಾರಂಗ ಅಲ್ಲಿಂದ ರಾಜಕೀಯಕ್ಕೆ ಬಂದ ಪಾಟೀಲ್ ಅವರು ಸಚಿವರಾಗಿದ್ದಾರೆ. ನಾನು ಸರ್ಕಾರದ ಕೃಷಿ ಇಲಾಖೆಯ ಕಾರ್ಯಕ್ರಮಗಳಿಗೆ ಪ್ರಚಾರ ನೀಡುತ್ತೇನೆ. ರೈತರಿಗೂ ಜನರಿಗೂ ಇರುವುದು ರಕ್ತಸಂಬಂಧ. ನಾನು ಆ ಸಂಬಂಧಕ್ಕೆ ಶ್ರಮಿಸುತ್ತೇನೆ ಎಂದರು. ಕಾರ್ಯಕ್ರಮದಲ್ಲಿ ಕೃಷಿ ಕೈಪಿಡಿ 2021ಬಿಡುಗಡೆ ಮಾಡಲಾಯಿತು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...