CrimeNEWSನಮ್ಮಜಿಲ್ಲೆ

ಕಾರು ಕಳ್ಳನ ಬಂಧನ: 7ಲಕ್ಷ ರೂ. ಮೌಲ್ಯದ ಕಾರು ವಶ

ಡಿಸಿಪಿ ಗೀತಾ ಪ್ರಸನ್ನ, ಎಸಿಪಿ ಶಶಿಧರ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ನಗರ ಮತ್ತು ನಗರದ ಸುತ್ತಮುತ್ತ ನಿಲ್ಲಿಸಿ ತಮ್ಮ ಕಾರ್ಯಕ್ಕೆ ತೆರಳಿದ ಬಳಿಕ ಕ್ಷಣಾರ್ಧದಲ್ಲೇ ಕಾರುಗಳನ್ನು ಕದಿಯುತ್ತಿದ್ದ ಚೋರನನ್ನು ಲಷ್ಕರ್ ಠಾಣೆ ಪೊಲೀಸರು ಬಂಧಿಸಿ, 7 ಲಕ್ಷ ರೂ. ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಪಾಂಡವಪುರ ತಾಲೂಕಿನ ಬನ್ನಘಟ್ಟ ಗ್ರಾಮದ ಸತೀಶ್ (22) ಬಂಧಿತ ಆರೋಪಿ. ಕಳೆದ ಫೆ.28ರಂದು ಸಂಜೆ 6ರ ಸಮಯದಲ್ಲಿ ಗೌತಮ್ ಶೇಖರ್ ಎಂಬುವರು ಬಟ್ಟೆ ಖರೀದಿಸಲು ತಮ್ಮ ಮಾರುತಿ ಸ್ವೀಫ್ಟ್ ಕಾರಿನಲ್ಲಿ ತಮ್ಮ ಮನೆಯವರ ಜತೆ ಮೈಸೂರಿನ ಕರ್ನಾಟಕ ಸಿಲ್ಕ್ಸ್‌ಗೆ ಬಂದಿದ್ದರು.

ಬಟ್ಟೆ ಖರೀದಿ ನಂತರ ಅಲ್ಲಿಂದ ಸುಮಂಗಲಿ ಸಿಲ್ಕ್ಸ್‌ಗೆ ಬಂದು, ಕಾರನ್ನು ಆರ್‌ಆರ್ ಹೋಟೆಲ್ ಮುಂದೆ ನಿಲ್ಲಿಸಿದ್ದರು. ಶಾಪಿಂಗ್ ಮುಗಿಸಿ ಬಂದು ನೋಡಿದಾಗ ಕಾರು ನಾಪತ್ತೆಯಾಗಿತ್ತು. ಈ ಸಂಬಂಧ ಲಷ್ಕರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ಕೈಗೊಂಡ ಪೊಲೀಸರು ಪಾಂಡುವಪುರದ ಮಾದೇಗೌಡನ ಹಳ್ಳಿಯಲ್ಲಿ ಸತೀಶನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಾರು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಡಿಸಿಪಿ ಗೀತಾ ಪ್ರಸನ್ನ, ದೇವರಾಜ ವಿಭಾಗದ ಎಸಿಪಿ ಶಶಿಧರ್ ಮಾರ್ಗದರ್ಶನದಲ್ಲಿ ಲಷ್ಕರ್ ಪೊಲೀಸ್ ಠಾಣೆಯ ಸುರೇಶ್ ಕುಮಾರ್, ಪಿಎಸ್‌ಐಗಳಾದ ಗೌತಮ್ ಗೌಡ, ಧನಲಕ್ಷ್ಮೀ, ಸಿಬ್ಬಂದಿ ಬೋಪಯ್ಯ, ಮಹದೇವಸ್ವಾಮಿ, ಲೋಕೇಶ್, ಮಂಜುನಾಥ್, ಚಿನ್ನಪ್ಪ, ಪ್ರತೀಪ, ಮಂಜುನಾಥ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ