NEWSನಮ್ಮಜಿಲ್ಲೆರಾಜಕೀಯ

ಬಿಎಂಟಿಸಿ ಬಸ್‌ಗಳಲ್ಲಿ ಸಂಚರಿಸಲು ಎಲ್ಲಾ ವರ್ಗದ ಮಹಿಳೆಯರಿಗೆ ದೆಹಲಿ ಮಾದರಿ ಉಚಿತ ಬಸ್‌ಪಾಸ್ ಯೋಜನೆ ಘೋಷಿಸಿ

ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯ ಸಹ ಸಂಚಾಲಕಿ ಶಾಂತಲಾ ದಾಮ್ಲೆ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಈ ಬಾರಿಯ ಬಜೆಟ್‌ನಲ್ಲಿ ಮಹಿಳೆಯರು ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸಲು ಉಚಿತ ಬಸ್‌ಪಾಸ್ ಯೋಜನೆ ಜಾರಿಗೆ ತರಬೇಕು, ಮಹಿಳಾ ದಿನಾಚರಣೆ ಹೊತ್ತಿನಲ್ಲಿ ಉಡುಗೊರೆ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಮ್ ಆದ್ಮಿ ಪಕ್ಷದ ರಾಜ್ಯ ಸಹ ಸಂಚಾಲಕಿ ಶಾಂತಲಾ ದಾಮ್ಲೆ ಆಗ್ರಹಿಸಿದ್ದಾರೆ.

ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೆಹಲಿಯ ಆಮ್ ಆದ್ಮಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಮಹಿಳೆಯರಿಗೆ ಎಲ್ಲಾ ಪ್ರಕಾರಗಳ ಸಾರಿಗೆ ವ್ಯವಸ್ಥೆಯಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಿತು. ಇದೇ ಮಾದರಿಯನ್ನು ಬೆಂಗಳೂರು ನಗರದ ಮಹಿಳೆಯರಿಗೆ ನೀಡಬೇಕು ಎಂದು ಆಮ್ ಆದ್ಮಿ ಪಕ್ಷದ ಕಳೆದ ವರ್ಷ ಮಾರ್ಚ್ 5 ರಂದು ಪಕ್ಷದ ನಿಯೋಗ ಭೇಟಿ ಮಾಡಿ ಈ ಯೋಜನೆ ಜಾರಿಗೆ ತರುವಂತೆ ಮನವಿ ಸಲ್ಲಿಸಿತ್ತು.

ಆದರೆ ಇದನ್ನು ತಪ್ಪು ತಪ್ಪಾಗಿ ನಕಲು ಮಾಡಿದ ಯಡಿಯೂರಪ್ಪ ಅವರು ಕಳೆದ ಬಜೆಟ್ ವೇಳೆ ಕೇವಲ ಗಾರ್ಮೆಂಟ್ಸ್ ಮಹಿಳೆಯರಿಗೆ ಮಾತ್ರ ಉಚಿತ ಬಸ್ ಪಾಸ್ ಯೋಜನೆ ಘೋಷಣೆ ಮಾಡಿದರೆ ಹೊರತು ಕೊರೊನಾ ನೆಪವೊಡ್ಡಿ ನಯಾ ಪೈಸೆ ಹಣ ಬಿಡುಗಡೆ ಮಾಡಲಿಲ್ಲ. ಈ ಬಾರಿಯಾದರೂ ನಂಬಿಕೆ ದ್ರೋಹ ಮಾಡದೆ ಆಮ್ ಆದ್ಮಿ ಪಕ್ಷದ ಮನವಿಗೆ ಸ್ಪಂದಿಸಬೇಕು ಎಂದರು.

ನಗರ ಭಾಗದಲ್ಲಿ ಜೀವನ ನಡೆಸಲು ಗಂಡ-ಹೆಂಡತಿ ಇಬ್ಬರು ದುಡಿಯಬೇಕಾದ ಪರಿಸ್ಥಿತಿ ಇದೆ. ಇದನ್ನು ಸರಿದೂಗಿಸಬೇಕಾದರೆ ದುಡಿಮೆಗೆ ಹೋಗುವ ಮಹಿಳೆಯರಿಗೆ ಉಚಿತ ಸಾರಿಗೆ ನೀಡಬೇಕು.
ನಮ್ಮ ದೇಶದಲ್ಲಿ ದುಡಿಯುತ್ತಿರುವ ಗಂಡ ಹೆಂಡತಿಯರ ಸರಾಸರಿ ಶೇ. 21 ರಷ್ಟಿದೆ. ತೃತಿಯ ಜನಗತ್ತಿನ ದೇಶಗಳನ್ನು ಹೊರತು ಪಡಿಸಿ ಬೇರೆ ದೇಶಗಳಲ್ಲಿ ಈ ಪ್ರಮಾಣ ಶೇ 46 ರಷ್ಟಿದೆ. ಇದನ್ನು ಹೆಚ್ಚಳ ಮಾಡಲು ಯೋಜನೆ ರೂಪಿಸಬೇಕು.

ದೆಹಲಿಯಲ್ಲಿ ಆರ್ಥಿಕ ಚಟುವಟಿಕೆಗಳು ಗರಿಗೆದರಿ ಜಿಡಿಪಿಗೆ ಹೆಚ್ಚಿನ ಕೊಡುಗೆ ನೀಡಿದ್ದೇ ಮಹಿಳೆಯರಿಗೆ ಉಚಿತ ಸಾರಿಗೆ ಯೋಜನೆ. ಆದ ಕಾರಣ ಈ ಅಂಶಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ಮಹಿಳಾಪರವಾದ ಉಚಿತ ಬಸ್‌ಪಾಸ್ ಯೋಜನೆ ಸರಿಯಾದ ರೀತಿಯಲ್ಲಿ ಘೋಷಣೆ ಮಾಡದಿದ್ದರೆ ಆಮ್ ಆದ್ಮಿ ಪಕ್ಷ ಸುಮ್ಮನೆ ಕೂರುವುದಿಲ್ಲ, ಬೃಹತ್ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮಹಿಳಾ ಘಟಕದ ಸುಧಾ‌ಮಣಿ, ಯುವ ಘಟಕದ ಉಪಾಧ್ಯಕ್ಷೆ ಸಿಂಧು ಮಳವಳ್ಳಿ ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ