NEWSಕ್ರೀಡೆನಮ್ಮರಾಜ್ಯ

ಬಿಬಿಎಂಪಿಯಿಂದ ಕ್ರೀಡಾ ಸಂಕೀರ್ಣ ಹೆಸರಿನಲ್ಲಿ ಮೋಜು- ಮಸ್ತಿ ಸಂಕೀರ್ಣ: ಎಎಪಿ ಆರೋಪ

ಸ್ಥಳೀಯರ ಬೆಂಬಲದೊಂದಿಗೆ ಆಮ್ ಆದ್ಮಿ ಪಕ್ಷದಿಂದ ಬೃಹತ್ ಪ್ರತಿಭಟನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಎಚ್‌ಎಸ್‌ಆರ್ ಲೇಔಟ್ ಮತ್ತು ಅಗರ ವಾರ್ಡಿನ ಹೃದಯ ಭಾಗದಲ್ಲಿರುವ ಆಟದ ಮೈದಾನದಲ್ಲಿ ಗುತ್ತಿಗೆದಾರರ ಲಾಬಿಗೆ ಮಣಿದು ಬೃಹತ್ ಕ್ರೀಡಾ ಸಂಕೀರ್ಣ ನಿರ್ಮಿಸುತ್ತಿರುವ ಬಿಬಿಎಂಪಿ ನಿರ್ಧಾರ ವಿರೋಧಿಸಿ. ಈ ಕೂಡಲೇ ಕಾಮಗಾರಿ ನಿಲ್ಲಿಸಬೇಕು ಎಂದು ಆಗ್ರಹಿಸಿ ಸ್ಥಳೀಯ ನಾಗರಿಕರ ಬೆಂಬಲದೊಂದಿಗೆ ಶನಿವಾರ ಆಮ್ ಆದ್ಮಿ ಪಕ್ಷ ಬೃಹತ್ ಪ್ರತಿಭಟನೆ ನಡೆಸಿತು.

ಈ ವೇಳೆ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸೀತಾರಾಂ ಗುಂಡಪ್ಪ ಮಾತನಾಡಿ, ಸುತ್ತಮುತ್ತಲಿನ ಸಾವಿರಾರು ಜನರಿಗೆ ಈ ಆಟದ ಮೈದಾನ ಬಹಳ ಉಪಯುಕ್ತವಾಗಿದೆ. ಎಲ್ಲರೂ ಮುಕ್ತವಾಗಿ ಇದನ್ನು ಬಳಸುತ್ತಿದ್ದಾರೆ. ಇಂತಹ ಆಟದ ಮೈದಾನವನ್ನು ಕೆಲವೇ ಕೆಲವು ಮಂದಿಗಳ ಕೈಯಿಗೆ ಕೊಡಲು ಹೊರಟಿರುವ ಬಿಬಿಎಂಪಿ, ಕಮಿಷನ್ ಆಧಾರದಲ್ಲಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಈ ಕ್ರೀಡಾ ಸಂಕೀರ್ಣ ನಿರ್ಮಾಣದಲ್ಲಿ ಸಂಪೂರ್ಣವಾಗಿ ತನ್ನದೇ ನಿಯಮಗಳನ್ನು ಬಿಬಿಎಂಪಿ ಮುರಿಯುತ್ತಿದೆ. ಒಂದು ಮಹಡಿ ಕಟ್ಟುವ ಕಡೆ, 5ಕ್ಕಿಂತ ಹೆಚ್ಚು ಮಹಡಿಗಳ ನಿರ್ಮಾಣದಲ್ಲಿ ತೊಡಗಿದೆ. ವಾಣಿಜ್ಯ ಉದ್ದೇಶಕ್ಕೆ ಕಟ್ಟಡ ಬಳಸಬಾರದು ಎಂದಿದ್ದರೂ ವಾಣಿಜ್ಯ ಉದ್ದೇಶಕ್ಕೆ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಶೇ. 5 ರಷ್ಟು ಜಾಗವನ್ನು ಮುಕ್ತ ಬಳಕೆಗೆ ಮೀಸಲಿಡಬೇಕು ಎನ್ನುವ ನಿಯಮವನ್ನು ಮುರಿಯಲಾಗಿದೆ ಎಂದು ಕಾರಿದರು.

ಒಟ್ಟಿನಲ್ಲಿ ಗುತ್ತಿಗೆದಾರರ ಲಾಬಿಗೆ ಮಣಿದು ಈ ಅವೈಜ್ಞಾನಿಕ ಹಾಗೂ ಅವಶ್ಯಕತೆ ಇಲ್ಲದ ಕಾಮಗಾರಿ ನಡೆಸುತ್ತಿದೆ. ಸ್ಥಳೀಯ ಶಾಸಕ ಸತೀಶ್ ರೆಡ್ಡಿ ಅವರು ಏಕಪಕ್ಷೀಯವಾಗಿ ತೀರ್ಮಾನ ತೆಗೆದುಕೊಂಡು ಕ್ರೀಡಾಂಗಣ ನಿರ್ಮಾಣ ಆಗಲೇ ಬೇಕು ಎಂದು ನಿಂತಿದ್ದಾರೆ.

ಯಾರ ಉದ್ದಾರಕ್ಕೆ ಈ ಸಂಕೀರ್ಣ ಎಂದು ಅವರು ತಿಳಿಸಬೇಕು. ಈ ಕಾಮಗಾರಿ ನಡೆಸುವ ಕುರಿತು ಸ್ಥಳೀಯರ ಅಭಿಪ್ರಾಯವನ್ನೂ ಕೂಡ ಸಂಗ್ರಹಿಸದೆ ಹಾಗೂ ಸಲಹೆ, ಸೂಚನೆಗಳನ್ನು ಪರಿಗಣಿಸದೆ ಇಂತಹ ನಿರ್ಧಾರ ತೆಗೆದುಕೊಂಡಿರುವ ಬಿಬಿಎಂಪಿ ಈ ಕೂಡಲೇ ಹಿಂದೆ ಸರಿಯಬೇಕು ಹಾಗೂ ಕ್ರೀಡಾಂಗಣವನ್ನು ಎಲ್ಲರ ಬಳಕೆಗೆ ಮುಕ್ತವಾಗಿರಿಸಬೇಕು ಎಂದು ಆಗ್ರಹಿಸಿದರು.

ಅಗರ ವಾರ್ಡಿನ ಅಧ್ಯಕ್ಷೆ ಪಲ್ಲವಿ ಚಿದಂಬರ, ಬಿಳಕೇನಹಳ್ಳಿ ವಾರ್ಡ್ ಅಧ್ಯಕ್ಷೆ ಸಬೀಹಾ, ಮಹಿಳಾ ಘಟಕದ ಅಧ್ಯಕ್ಷೆ ಆಯಿಷಾ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ