NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಮಹಿಳೆಯರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಿ: ಶ್ರೀ ನಿರಂಜನ ಸ್ವಾಮೀಜಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಜೇವರ್ಗಿ: ಹೆಣ್ಣು ತಾಯಿಯಾಗಿ, ಸಹೋದರಿಯಾಗಿ, ಮಡದಿಯಾಗಿ ಮತ್ತು ಮಗಳಾಗಿ ಹೀಗೆ ವಿವಿಧ ರೂಪದಲ್ಲಿ ನಮಗೆ ಸದ ಒಳಿತನ್ನೇ ಬಯಸುತ್ತಾಳೆ. ಹೀಗಾಗಿ ಆಕೆಯನ್ನು ನಾವು ಗೌರವಿಸುವುದನ್ನು ಮೊದಲು ಕಲಿಯಬೇಕು ಎಂದು ಸಂಚಾರಿ ಯೋಗಿಗಳಾದ ಶ್ರೀ ನಿರಂಜನ ಸ್ವಾಮೀಜಿ ಹೇಳಿದರು.

ಇಂದು ಪಟ್ಟಣದಲ್ಲಿ ಅದ್ದೂರಿಯಾಗಿ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಸ್ವಾಮೀಜಿ ಅವರು, ಮಹಿಳಾ ದಿನಾಚರಣೆಯ ಇಂದು ತುಂಬಾ ಅವಶ್ಯ. ಕಾರಣ ಆಕೆ ನಮ್ಮನ್ನು ಎಷ್ಟೇ ಪೊಷಿಸುತ್ತಿದ್ದರೂ ನಾವು ಆಕೆಯನ್ನಿ ಒಂದು ರೀತಿ ನಿರ್ಲಕ್ಷ್ಯ ಮಾಡುತ್ತೇವೆ. ಆದರೆ ಅವಳಿಂದಲೇ ನಾವು ಎಂಬುದನ್ನು ಮರೆತು ಬಿಡುತ್ತೇವೆ. ಹೀಗಾಗಿ ಈ ದಿನವಾದರೂ ಆಕೆಯನ್ನು ನಾವು ಗೌರವಿಸುವ ಬಗ್ಗೆ ತಿಳಿದುಕೊಳ್ಳಬೇಕು. ಹಾಗಾಗಿ ಇಂಥ ಕಾರ್ಯಕ್ರಮಗಳು ಬೇಕು ಎಂದು ಹೇಳಿದರು.

ಹೆಣ್ಣು ತಾಯಿಯಾಗಿ ಮಡದಿಯಾಗಿ ತಂಗಿಯಾಗಿ ಅಕ್ಕನಾಗಿ ತಮ್ಮ ಜೀವನವಿಡೀ ಸಂಸಾರದ ಕಣ್ಣಾಗಿತ್ತಾಳೆ. ಅಷ್ಟೇಅಲ್ಲ ದೇಶದ ಉನ್ನತಿಗೂ ದುಡಿಯುವ ಮೂಲಕ ಮಹಿಳೆಯರು ಆದರ್ಶವಾಗಿದ್ದಾರೆ. ಅವರ ಜ್ಞಾನ ವಿಶಾಲವಾದುದು. ಅದನ್ನು ಯಾವಪದಗಳಿಂದಲೂ ಬಣ್ಣಿಸಲು ಸಾಧ್ಯವಿಲ್ಲ ಎಂದರು.

ಈ ಸಂದರ್ಭದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷೆ ಕಾವೇರಿ ಪಾಟೀಲ, ನೀಲಮ್ಮನ ಬಳಗದ ಗೀತಾ ರಾಜೋಳ್ಳಿ, ಮಹಾನಂದಾ ಹುಗ್ಗಿ, ಲೀಲಾವತಿ ಅರಳಿ, ಸಾವಿತ್ರಿ ಹಳ್ಳಿ, ಸಂಗೀತಾ ಘಂಟಿಮಠ, ರಾಜೇಶ್ವರಿ ಹಿರೇಗೌಡ, ನಾಗಮ್ಮ ಬೀಳವಾರ ಸೇರಿ ಅನೇಕರು ಹಾಜರಿದ್ದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...