NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ವರ್ಗಾವಣೆಗೆ ಒಪ್ಪಿಗೆ ಸೂಚಿಸಿದ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನೌಕರರ ಹಲವು ದಿನಗಳ ಬೇಡಿಕೆ ಕೊನೆಗೂ ಈಡೇರಿದ್ದು ಅಂತರ ನಿಗಮ ವರ್ಗಾವಣೆಗೆ ಸಾರಿಗೆ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳಲ್ಲಿ ಕೆಎಸ್ಆರ್ಟಿಸಿ, ಬಿಎಂಟಿಸಿಯಲ್ಲಿ ಉತ್ತರ ಕರ್ನಾಟಕ ಸಾವಿರಾರು ಜನರು ಕೆಲಸ ಮಾಡುತ್ತಿದ್ದಾರೆ. ಅವರೆಲ್ಲರೂ ತಮ್ಮ ಜಿಲ್ಲೆಗಳ, ನಿಗಮಗಳ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ವರ್ಗಾವಣೆ ಮಾಡಿಕೊಡುವಂತೆ ಹಲವು ವರ್ಷಗಳಿಂದ ಮನವಿ ಮಾಡುತ್ತಲೇ ಇದ್ದರು. ಇದಕ್ಕೆ ಸಂಬಂಧಿಸಿದಂತೆ ಸುಮಾರು 12 ವರ್ಷಗಳ ಹಿಂದಿನಿಂದಲೂ ಬೇಡಿಕೆ ಇಟ್ಟಿದ್ದರು. ಆದರೆ, ಅನುಮತಿ ನೀಡಿರಲಿಲ್ಲ.

ಆದರೆ ಕಳೆದ ವರ್ಷ ಡಿಸೆಂಬರ್‌ 10ರಿಂದ ನಾಲ್ಕು ದಿನಗಳ ವರೆಗೆ ಸಾರಿಗೆ ನೌಕರರ ನಡೆಸಿದ ಮುಷ್ಕರದ ವೇಳೆ ಇಟ್ಟಿದ್ದ ಬೇಡಿಕೆಗಳಲ್ಲಿ ಇದು ಒಂದಾಗಿತ್ತು. ಈಗ ಆ ಬೇಡಿಕೆ ಈಡೇರಿಸಲು ಇಲಾಖೆ ಮುಂದಾಗಿದೆ. ಹೀಗಾಗಿ ಅಂತರ ನಿಗಮ ವರ್ಗಾವಣೆ ಆರಂಭಿಸಲು ನಿರ್ಧರಿಸಲಾಗಿದ್ದು ಸಾರಿಗೆ ಇಲಾಖೆ ಮಾರ್ಗಸೂಚಿ ಸಿದ್ಧಪಡಿಸಿದೆ.

ಅದರಂತೆ ಹಿರಿತನದ ಆಧಾರದಲ್ಲಿ ಆನ್ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿದ ನೌಕರರನ್ನು ವರ್ಗಾವಣೆಗೆ ಪರಿಗಣಿಸಲಾಗುತ್ತದೆ. ಅಲ್ಲದೆ ಪ್ರತಿ ವರ್ಷ ಏಪ್ರಿಲ್ 1ರಿಂದ 30ರವರೆಗೆ ಅರ್ಜಿಯನ್ನು ನೀಡಿ ಮೇ ತಿಂಗಳಿಂದ ವರ್ಗಾವಣೆ ಪ್ರಕ್ರಿಯೆ ಆರಂಭಿಸುವ ಕುರಿತಂತೆ ತಿಳಿಸಲಾಗಿದೆ.

ಉತ್ತರ ಕರ್ನಾಟಕದ ಭಾಗದ 20,000 ನೌಕರರು ಬಿಎಂಟಿಸಿ ಮತ್ತು ಕೆಏಸ್‌ಆರ್‌ಟಿಸಿಯಲ್ಲಿದ್ದಾರೆ. ನಾಲ್ಕೂ ನಿಗಮಗಳಲ್ಲಿ 1,30,000 ನೌಕರರಿದ್ದಾರೆ. ಅದರಲ್ಲಿ 20 ಸಾವಿರಕ್ಕೂ ಹೆಚ್ಚು ನೌಕರರು ಅಂತರ ನಿಗಮ ವರ್ಗಾವಣೆ ಗಾಗಿ ಕಾದು ಕುಳಿತಿದ್ದಾರೆ. ಹಿಂದಿನ ಪ್ರಕ್ರಿಯೆಯಲ್ಲಿ 3,589 ನೌಕರರ ವರ್ಗಾವಣೆ ಮಾಡಲಾಗಿದೆ. ಉಳಿದಂತೆ 16ರಿಂದ 17 ಸಾವಿರ ನೌಕರರ ವರ್ಗಾವಣೆ ಬಾಕಿಯಿದೆ. ಅವರೆಲ್ಲರೂ ಅರ್ಜಿ ಸಲ್ಲಿಸಿದ್ದರೂ ಅದನ್ನು ಹಿಂದೆ ಪರಿಗಣಿಸಿರಲಿಲ್ಲ. ಇದೀಗ ಅವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದರೆ ಅದನ್ನು ಪರಿಗಣಿಸಿ ವರ್ಗಾವಣೆ ಮಾಡಲಾಗುತ್ತದೆ.

ಆದರೆ, ನಿಗಮದಿಂದ ನಿಗಮಕ್ಕೆ ವರ್ಗಾವಣೆಯನ್ನು ಒಂದು ಬಾರಿ ಮಾತ್ರ ಮಾಡಲಾಗುವುದು ಮತ್ತು ಆ ನಿಗಮದಲ್ಲಿ ಅವರಿಗೆ ಸೇವಾ ಹಿರಿತನವನ್ನು ನೀಡುವುದಿಲ್ಲ. ಅವರು ವರ್ಗಾವಣೆಗೊಂಡ ನಿಗಮದಲ್ಲಿ ಕೊನೆಯ ಸ್ಥಾನದಲ್ಲಿ ಇರಲಿದ್ದಾರೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ