NEWSದೇಶ-ವಿದೇಶವಿಜ್ಞಾನ

ಸುದ್ದಿ, ಲೇಖನ ಬಳಸಿಕೊಳ್ಳುವ ಗೂಗಲ್ ಮಾಧ್ಯಗಳಿಗೆ ಹಣ ಪಾವತಿಸುವ ಕಾನೂನು ಅಗತ್ಯವಿದೆ: ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂ ಡೆಲ್ಲಿ:  ಆಸ್ಟ್ರೇಲಿಯಾ ಮಾದರಿಯಲ್ಲಿ ಸುದ್ದಿ ಲೇಖನ ಬಳಸಿಕೊಳ್ಳುವ ಗೂಗಲ್ ಮತ್ತು ಫೇಸ್ಬುಕ್ ಗಳು ಮಾಧ್ಯಮಗಳಿಗೆ ಹಣ ನೀಡಬೇಕೆಂಬ ಕಾನೂನು ರೂಪಿಸಬೇಕು ಎಂದು ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ಶೂನ್ಯವೇಳೆಯಲ್ಲಿ ಇಂದು ವಿಷಯ ಪ್ರಸ್ತಾಪಿಸಿದ ಅವರು ಗೂಗಲ್ ಫೇಸ್ಬುಕ್ ಹಾಗೂ  ಯೂಟೂಬ್‌ ಉಚಿತವಾಗಿ ಸುದ್ದಿಗಳನ್ನು ಬಳಸಿಕೊಳ್ಳುತ್ತಿವೆ. ಹೀಗಾಗಿ ಮಾಧ್ಯಮ ಮತ್ತು ಸುದ್ದಿವಾಹಿನಿಗಳಿಗೆ ಹಣ ಪಾವತಿಸುವಂತೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸುದ್ದಿಮಾಧ್ಯಮ, ಉದ್ಯಮಗಳಿಗೆ ಅವುಗಳ ವಿಷಯಕ್ಕೆ ತಕ್ಕ ಸಂಭಾವನೆ ದೊರೆಯುವುದನ್ನು ಖಚಿತಪಡಿಸಿಕೊಳ್ಳುವ ವಿಶ್ವದ ಮೊದಲ ಕಾನೂನಿಗೆ ಆಸ್ಟ್ರೇಲಿಯಾ ಸಂಸತ್ ಕಳೆದ ತಿಂಗಳು ಅನುಮೋದನೆ ನೀಡಿತ್ತು. ಅದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಕ್ರಮ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ದೇಶೀಯವಾಗಿ ಸುದ್ದಿ ಒದಗಿಸುವ ಮಾಧ್ಯಮಗಳಿಗೆ ಗೂಗಲ್ ಮತ್ತು ಫೇಸ್ಬುಕ್ ತಮ್ಮ ಗಳಿಕೆಯ ನ್ಯಾಯವನ್ನು ಪಾಲನ್ನು ಒದಗಿಸುವಂತೆ ಮಾಡಬೇಕು ಈ ವಿಚಾರದಲ್ಲಿ ಭಾರತವು ಮುಂದಾಳತ್ವ ವಹಿಸಬೇಕು ಎಂದು ಸುಶೀಲ್ ಕುಮಾರ್ ಮೋದಿ ಹೇಳಿದರು.

ಸಾಂಪ್ರದಾಯಿಕ ಮುದ್ರಣ ಮತ್ತು ಸುದ್ದಿ ಪ್ರಸಾರ ಮಾಧ್ಯಮಗಳ ವಿಷಯಗಳು ದೈತ್ಯರು ನಡೆಸುವ ತಾಣಗಳಲ್ಲಿ ಮುಕ್ತವಾಗಿ ದೊರೆಯುತ್ತಿವೆ. ಇದರಿಂದಾಗಿ ಸಾಂಪ್ರದಾಯಿಕ ಮುದ್ರಣ ಮತ್ತು ಸುದ್ದಿ ಪ್ರಸಾರ ಮಾಧ್ಯಮಗಳು  ಸಂಕಷ್ಟಕ್ಕೆ ಈಡಾದರೆ, ಫೇಸ್ಬುಕ್  ಯೂಟ್ಯೂಬ್ ಗಳಿಂದಾಗಿ ತೊಂದರೆಗೆ ಸಿಲುಕಿದೆ ಎಂದು ಹೇಳಿದರು.

ಇದು ಪರಿಗಣಿಸಬೇಕಾದ ಸಲಹೆ ಎಂದು ರಾಜ್ಯಸಭೆಯ ಉಪಸಭಾಪತಿ, ಉಪರಾಷ್ಟ್ರಪತಿ  ಎಂ. ವೆಂಕಯ್ಯ ನಾಯ್ಡು ಹೇಳಿದರು.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು