ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಯದು ಎನ್ನಲಾದ ರಾಸಲೀಲೆ ಸಿಡಿ ಪ್ರಕರಣದ ಸಂಬಂಧ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದ್ದು, ಶನಿವಾರ ಸಂತ್ರಸ್ತ ಯುವತಿಯ ಪಾಲಕರು ಮಾಧ್ಯಮಗಳ ಮುಂದೆ ಕೆಪಿಸಿಸಿ ಅಧ್ಯಕ್ಷ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ನೇರ ಆರೋಪ ಮಾಡಿದ್ದು, ಈ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಡಿಕೆಶಿ ವಿರುದ್ಧ ಗುಡುಗಿದ್ದಾರೆ.
ಶನಿವಾರ ಸಂಜೆ ವೇಳೆಗೆ ಹೊಸ ಬಾಂಬ್ ಸಿಡಿಸುತ್ತೇನೆ ಎಂದು ಹೇಳಿದ್ದ ರಮೇಶ್ ಅದರಂತೆ ಸುದ್ದಿಗಾರರೊಂದಿಗೆ ಮಾತನಾಡಿ, ಸಿಡಿ ಪ್ರಕರಣ ಸಂಬಂಧ ಷಡ್ಯಂತ್ರ ನಡೆಸಿದ ಆ ಮಹಾನಾಯಕನ ಹೆಸರನ್ನು ಯುವತಿಯ ಪಾಲಕರು ಹೇಳಿದ್ದಾರೆ. ಇನ್ನು ನಾನು ಹೇಳುವುದು ಏನು ಇಲ್ಲ. ಯಾರು ತಪ್ಪ ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದರು.
ನನ್ನ ವಿರುದ್ಧ ರಾಸಲೀಲೆ ಸಿಡಿ ಷಡ್ಯಂತ್ರ ನಡೆಸಿರುವ ಡಿಕೆಶಿ ಒಬ್ಬ ಗಾಂಡು. ನಾನು ಗಂಡಸು. ರಾಜಕೀಯಕ್ಕೆ ಶಿವಕುಮಾರ್ ನಾಲಾಯಕ್ಕು ಎಂದು ಗಂಭೀರ ಆರೋಪ ಮಾಡಿದ್ದಾರೆ. ನನ್ ಬಳಿ 11 ಸಾಕ್ಷ್ಯಗಳಿವೆ. ನಾನು ಅವುಗಳನ್ನು ಎಸ್ಐಟಿ ಅಧಿಕಾರಿಗಳಿಗೆ ನೀಡುತ್ತೇನೆ. ಡಿಕೆಶಿ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸುತ್ತೇನೆ ಎಂದು ತಿಳಿಸಿದರು.
ನಾನು ಮುಂದಿನ ದಿನಗಳಲ್ಲಿ ಚುನಾವಣೆಗೆ ನಿಲ್ಲುವುದಿಲ್ಲ. ಗೋಕಾಕ್ನಲ್ಲಿ ನನ್ನ ತಮ್ಮನನ್ನು ನಿಲ್ಲಿಸಿ ಆತನನ್ನು ಗೆಲ್ಲಿಸಲು ತನು, ಮನ, ಧನ ವಿಯೋಗಿಸುತ್ತೇನೆ ಎಂದ ಅವರು, ಇನ್ನು ಡಿಕೆಶಿ ಕ್ಷೇತ್ರ ಕನಕಪುರದಲ್ಲಿ ಆತನನ್ನು ಸೋಲಿಸುತ್ತೇನೆ. ಅಲ್ಲಿ ಚುನಾವಣೆಗೆ ನಿಂತುಕೊಳ್ಳುವ ಅಭ್ಯರ್ಥಿಯ ಪರ ನಾನೇ ಮುಂದುನಿಂತು ಡಿಕೆಶಿಯನ್ನು ಸೋಲಿಸಿ ತೋರಿಸುತ್ತೇನೆ ಎಂದು ಸವಾಲು ಹಾಕಿದರು.
ಇನ್ನು ರಾಜಕೀಯ ಷಡ್ಯಂತ್ರ ಮಾಡಿ ನನ್ನನ್ನು ಕಟ್ಟಿಹಾಕಲು ಸಾಧ್ಯವಿಲ್ಲ. ನಾನು ಯಾವುದೇ ತಪ್ಪ ಮಾಡಿಲ್ಲ. ಹೀಗಾಗಿ ನಾನು ಯಾರಿಗೂ ಹೆದರುವ ಅಗತ್ಯವಿಲ್ಲ. ಗಾಂಡುಗಳ ರೀತಿ ನಾನು ನಡೆದುಕೊಳ್ಳುವುದಿಲ್ಲ ಎಂದು ಹೇಳಿದರು.