ವಿಜಯಪಥ ಸಮಗ್ರ ಸುದ್ದಿ
ಮಸ್ಕಿ (ರಾಯಚೂರು): ಸಿಡಿ ಯುವತಿಗೂ ನಮಗೂ ಯಾವುದೇ ಸಂಬಂಧವಿಲ್ಲ ಹೀಗಾಗಿ ಆಕೆ ಪೋಷಕರು ನೀಡಿರುವ ಹೇಳಿಕೆ ಬಗ್ಗೆ ಏನೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಸ್ಕಿ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಯೊಂದಿಗೆ ನಾಮಪತ್ರ ಸಲ್ಲಿಸಲು ಹೆಲಿಕಾಪ್ಟರ್ ಮೂಲಕ ಆಗಮಿಸಿದ ವೇಳೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
ಆದರೆ, ರಾಜಕೀಯದಲ್ಲಿ ಯಾವುದು ಶಾಶ್ವತವಲ್ಲ. ರಮೇಶ್ ಜಾರಕಿಹೊಳಿ ಅವರು ದಿನಕ್ಕೊಂದು ಮಾತನಾಡುತ್ತಿದ್ದಾರೆ. ಏನೇನೋ ಮಾತನಾಡುತ್ತಾರೆ. ಅವರ ಸುದ್ದಿಯನ್ನು ಬಿಟ್ಟುಬಿಡಿ. ಎಲ್ಲರಿಗೂ ಒಳ್ಳೆಯದಾಗಲಿ. ಪಾಪ ಜಾರಕಿಹೊಳಿ ಬಗ್ಗೆ ನಾನು ಏನು ಮಾತನಾಡೊಲ್ಲ ಎಂದು ಹೇಳಿದರು.
ಅದೇ ಹೆಲಿಕಾಪ್ಟರ್ ಮೂಲಕ ಆಗಮಿಸಿದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಯಾವುದೇ ಪ್ರತಿಕ್ರಿಯೆ ನೀಡದೇ, ಪಕ್ಷದ ಅಧ್ಯಕ್ಷರು ಮಾತನಾಡುತ್ತಾರೆ ಎಂದು ಹೇಳಿ ನಡೆದರು.