NEWSನಮ್ಮರಾಜ್ಯವಿಡಿಯೋ

ಕಪ್ಪುಪಟ್ಟಿ ಧರಿಸಿ ಸಾರಿಗೆ ನೌಕರರು ಸೇವೆಗೆ ಹಾಜರ್‌; ನಾಳೆ ಬೋಂಡ ಬಜ್ಜಿ ಮಾಡಿ ಹೋರಾಟ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರು ಇಂದು ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಕರ್ತವ್ಯಕ್ಕೆ ಹಾಜರಾಗುವ ಮೂಲಕ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿನೂತನ ಪ್ರತಿಭನೆ ಮಾಡುತ್ತಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಈಗಾಗಲೇ ಸಾರಿಗೆ ನೌಕರರು ಅನೇಕ ಬಾರಿ ಮುಷ್ಕರ ಮಾಡಿದ್ದಾರೆ. ಆದರೆ, ಇದುವರೆಗೂ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ. ಹೀಗಾಗಿ ಏಪ್ರಿಲ್‌ 7ರಿಂದ ಬೇಡಿಕೆ ಈಡೇರುವವರೆಗೂ ಮುಷ್ಕರ ನಡೆಸುವುದು ಖಚಿತ ಎಂದು ನೌಕರರ ಕೂಟ ಹೇಳಿದೆ.

ಅದರದ ಅಂಗವಾಗಿ ಬುಧವಾರ (ಏ.1) ಎಲ್ಲಾ 4 ನಿಗಮಗಳ ಸಾರಿಗೆ ನೌಕರರು ಕೈಗೆ ಕಪ್ಪುಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಜರಾಗುವ ಮೂಲಕ ಏ.7ರಂದು ತಮ್ಮ ಬೇಡಿಕೆ ಈಡೇರುವವರೆಗೂ ಮುಷ್ಕರ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸಾರಿಗೆ ನೌಕರರ ಕೂಟದ ಗೌರವ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಸುದ್ದಿಗಾರರೊಂದಿಗೆ ಮಾತನಾಡಿ, ಸಾರಿಗೆ ನೌಕರರನ್ನು 6ನೇ ವೇತನ ಆಯೋಗದಡಿ ತರಬೇಕು ಎನ್ನುವುದು ಪ್ರಮುಖ ಬೇಡಿಕೆ ಆಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಸಾರಿಗೆ ಸಚಿವರು ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಯಾವುದೇ ತೀರ್ಮಾನ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಇಂದು ನಮ್ಮ ಎಲ್ಲಾ ಸಾರಿಗೆ ನೌಕರರ ತೋಳಿಗೆ ಕಪ್ಪುಪಟ್ಟಿ ಧರಿಸಿ ಸೇವೆ ಹಾಜರಾಗಿದ್ದಾರೆ.

ಅದರಂತೆ ನಾಳೆ (ಏ.2) ರಸ್ತೆ ಮತ್ತು ಕೆಲವು ಬಸ್‌ ನಿಲ್ದಾಣಗಳಲ್ಲಿ ವಡೆ, ಬೋಂಡ ಮಾಡುವ ಮೂಲಕ ಎರಡನೇ ದಿನದ ಪ್ರತಿಭಟನೇ ದಿನವು ಪ್ರತಿಭಟನಾ ಎಚ್ಚರಿಕೆ ನೀಡಲಿದ್ದಾರೆ. ಹೀಗೆ ಏ.1ರಿಂದ 6ರವರೆಗೆ ಒಂದು ರೀತಿಯ ಎಚ್ಚರಿಕಾ ಸಂದೇಶದ ಪ್ರತಿಭಟನಾ ಹೋರಾಟ ಮಾಡಲಿದ್ದು ಏ.7ರಿಂದ ಬಸ್‌ಬಂದ್‌ ಮಾಡಿ ಸತ್ಯಾಗ್ರಹ ಮಾಡುವ ಮೂಲಕ ನಮ್ಮ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಹೇಳಿದರು.

ಕಳೆದ ಡಿಸೆಂಬರ್ ನಲ್ಲಿ ನಾಲ್ಕು ದಿನಗಳ ಕಾಲ ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು. ಸಾರಿಗೆ ನೌಕರರು ಸರ್ಕಾರಿ ನೌಕರರನ್ನಾಗಿ ಮಾಡಬೇಕೆಂಬ ಬೇಡಿಕೆಗಳನ್ನು ಇಟ್ಟಿದ್ದರು. ಈ ವೇಳೆ ರಾಜ್ಯ ಸರ್ಕಾರ ಸರ್ಕಾರಿ ನೌಕರನಾಗಿ ಮಾಡುವ ಬೇಡಿಕೆ ಬಿಟ್ಟು ಉಳಿದ ಒಂಬತ್ತು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು.

ಜೊತೆಗೆ 6ನೇ ವೇತನ ಆಯೋಗ ಜಾರಿ ಭರವಸೆ ನೀಡಲಾಗಿತ್ತು. ಆದರೆ, ತಮ್ಮ ಬೇಡಿಕೆಗಳ ಈಡೇರಿಕೆ ಬಗ್ಗೆ ಮುಷ್ಕರದ ನಂತರವೂ ಹಲವು ಬಾರಿ ಮನವಿ ಕೊಟ್ಟರು ಸರ್ಕಾರ ಸ್ಪಂದಿಸದಿರುವ ಕಾರಣ ಹೋರಾಟ ಅನಿವಾರ್ಯವಾಗಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ