ವಿಜಯಪಥ ಸಮಗ್ರ ಸುದ್ದಿ
ಚಿಕ್ಕಬಳ್ಳಾಪುರ: ಕೋವಿಡ್ ಲಸಿಕೆ ರಾಮಬಾಣವಿದ್ದಂತೆ 45 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳಿ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜನರಿಗೆ ಲಸಿಕೆ ಹಾಕಿಸಿಕೊಳ್ಳಲು ಮುಂದಾಗುತ್ತಿಲ್ಲ. ಹೀಗಾಗಿ ಕಾಡಿ ಬೇಡಿ ಅವರಿಗೆ ಕೊರೊನಾ ಲಸಿಕೆ ಹಾಕಲಾಗುತ್ತಿದೆ. ದಯಮಾಡಿ ಇನ್ನಾದರೂ ಪ್ರಯೊಬ್ಬರೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದು ಮನವಿ ಮಾಡಿದರು.
ರಾಜ್ಯದಲ್ಲಿ 5.500 ಕೋವಿಡ್ ಲಸಿಕಾ ಕೇಂದ್ರಗಳನ್ನ ಸಿದ್ಧಪಡಿಸಲಾಗಿದೆ. ಪ್ರತಿ ಕೇಂದ್ರದಲ್ಲೂ ಪ್ರತಿ ದಿನ 100 ಜನರಂತೆ ವ್ಯಾಕ್ಸಿನ್ ಹಾಕಿದರೂ 5 ಲಕ್ಷದ 50 ಸಾವಿರ ಮಂದಿ ಲಸಿಕೆ ಪಡೆದುಕೊಳ್ಳಬಹುದಾಗಿದೆ. ಅದರೆ ಪ್ರತಿದಿನ ಕೇವಲ 1 ರಿಂದ ಒಂದೂವರೆ ಲಕ್ಷ ಜನ ಮಾತ್ರ ಲಸಿಕೆ ಪಡೆದುಕೊಳ್ತಿದ್ದಾರೆ ಎಂದರು.
ಸೋಂಕು ಕಡಿಮೆ ಮಾಡುವ ದೃಷ್ಟಿಯಿಂದ ಕೆಲವು ಮಾರ್ಗ ಸೂಚಿಗಳನ್ನು ಹಾಕಿದ್ದೇವೆ. ಒಬ್ಬ ವ್ಯಕ್ತಿಯ ಒಂದು ಚಟುವಟಿಕೆಗಾಗಿ ನಿರ್ಬಂಧ ಮಾಡಿಲ್ಲ. ಕೊರೊನಾ ಕಡಿವಾಣ ಮಾಡುವ ಉದ್ದೇಶದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು, ಕೊರೊನಾ ನಿಯಮಗಳನ್ನು ಪಾಲನೆ ಮಾಡುವಂತೆ ಸಲಹೆ ನೀಡಿದರು.
ಕೊರೊನಾ ನ್ಯೂ ರೂಲ್ಸ್ಗೆ ಕೆಲವರ ಆಕ್ಷೇಪಾರ್ಹಗಳು ಬರ್ತವೆ. ಆದರೆ ಆರೂವರೆ ಕೋಟಿ ಜನರ ಹಿತದೃಷ್ಟಿಯಿಂದ ನಿರ್ಬಂಧಗಳನು ಹೇರಲಾಗಿದೆ. ಕೊರೊನಾ ಕಡಿಮೆ ಆಗುವವರೆಗೆ ನಿಯಮ ಪಾಲನೆ ಮಾಡಿ ಎಂದು ಹೇಳಿದರು.