NEWSನಮ್ಮರಾಜ್ಯ

ಕಾಂಗ್ರೆಸ್ ಸಹವಾಸದಿಂದ ಕುಮಾರಣ್ಣ ದುಃಖ ಪಡುವಂತಾಯಿತು: ಕೈ ವಿರುದ್ಧ ರೇವಣ್ಣ ಕಿಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಹಾಸನ: ದೇವೇಗೌಡ್ರನ್ನು ಹನ್ನೊಂದು ತಿಂಗಳಲ್ಲಿ ತೆಗೆದರಲ್ವಾ, ಆ ಶಾಪ ಕಾಂಗ್ರೆಸ್ ಪಕ್ಷಕ್ಕೆ ಕಾಡುತ್ತಿದೆ. ಆ ಶಾಪದಿಂದಾಗಿಯೇ ದೇಶದಲ್ಲಿ ಕಾಂಗ್ರೆಸ್ ನಿರ್ನಾಮ ಆಗುತ್ತಿದೆ. ಬೇರೆ ಯಾರೂ ಏನೂ ಮಾಡಬೇಕಾಗಿಲ್ಲ ಎಂದು ಮಾಜಿ ಸಚಿವ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ತಾಂಬೂಲ ತಂದಿದ್ದೇವೆ, ದೇವೇಗೌಡ್ರೇ ನಿಮ್ಮ ಕಾಲಿಗೆ ಬೀಳುತ್ತೇವೆ, ಕುಮಾರಸ್ವಾಮಿಯವರೇ ನಿಮ್ಮ ಕಾಲಿಗೆ ಬೀಳುತ್ತೇವೆ, ನೀವೇ ಮುಖ್ಯಮಂತ್ರಿಯಾಗ ಬೇಕೆಂದು ಗೋಗರೆದರು, ಅದಕ್ಕೆ ಗೌಡ್ರು ಒಪ್ಪಿಕೊಂಡರು ಎಂದು  ಅಂದು ಕಾಂಗ್ರೆಸ್‌ ಕುಮಾರಸ್ವಾಮಿ ಅವರನ್ನು ಸಿಎಂ ಮಾಡಿದ್ದ ಬಗ್ಗೆ ವಿವರಿಸಿದರು.

ಈಗ ಬಿಜೆಪಿ ಮತ್ತು ಕಾಂಗ್ರೆಸ್ಸಿನವರು ಸಿಡಿ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಆದರೆ, ನಮ್ಮ ಬಳಿ ಯಾವ ಸಿಡಿಯೂ ಇಲ್ಲ. ಅಂದಿನ ಕಾಂಗ್ರೆಸ್ ಸಹವಾಸದಿಂದ ಕುಮಾರಣ್ಣ ದುಃಖ ಪಡುವಂತಾಯಿತು ಎಂದು ರೇವಣ್ಣ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ಕಾಂಗ್ರೆಸ್ಸಿನವರ ಸಹವಾಸದಿಂದ ಕುಮಾರಸ್ವಾಮಿ ಮನೆಯಲ್ಲಿ ಕೂರುವಂತಾಯಿತು. ಕಾಂಗ್ರೆಸ್ಸಿನವರೇ ಮನೆ ಬಾಡಿಗೆ ನೀಡಿ, ಸಹಿ ಹಾಕಿಸಿಕೊಂಡು ಆ ನಂತರ ಮನೆ ಖಾಲಿ ಮಾಡಿಸಿದರು ಎಂದು ರೇವಣ್ಣ ವ್ಯಂಗ್ಯವಾಗಿ ಅಂದಿನ ಘಟನೆಯನ್ನು ವಿವರಿಸಿದರು.

ಇನ್ನು ನಮ್ಮ ಬಳಿ ಯಾವ ಸಿಡಿಯೂ ಇಲ್ಲ. ಆದರೂ ಬಹಳ ವಿಚಾರವಿದೆ, ಸಮಯ ಸಂದರ್ಭ ಬಂದಾಗ ಎಲ್ಲಾ ಹೇಳುತ್ತೇವೆ. ಪಾಪ ಸಿದ್ರಾಮಣ್ಣ, ಪಾಪದ್ದು ಅದಕ್ಕೆ ಏನೂ ಗೊತ್ತಾಗಲ್ಲ ಎಂದು ಹೇಳುವ ಮೂಲಕ ರೇವಣ್ಣ ಮಾಜಿ ಸಿಎಂ ಸಿದ್ದರಾಮಯ್ಯನವರ ಮೇಲಿನ ಪ್ರೀತಿಯನ್ನು ಮತ್ತೆ ತೋರಿಸಿದ್ದಾರೆ.

ಸಿದ್ರಾಮಣ್ಣ ಮತ್ತೆ ಮುಖ್ಯಮಂತ್ರಿಯಾಗುತ್ತಾರಾ, ಕಾಂಗ್ರೆಸ್ಸಿನವರು ಅವರನ್ನೇ ಮತ್ತೆ ಸಿಎಂ ಮಾಡುತ್ತಾರಾ ಎಂದು ಮೊದಲು ಕೇಳಿ ಎಂದು ರೇವಣ್ಣ ಈ ವೇಳೆ ಮಾಧ್ಯಮದವರನ್ನೇ ಪ್ರಶ್ನಿಸಿದರು.

 

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...