NEWSನಮ್ಮರಾಜ್ಯರಾಜಕೀಯ

ಸಾರಿಗೆ ನೌಕರರ ಮುಷ್ಕರ: ಬಸ್‌ ಇಲ್ಲದೆ ಪರದಾಡುತ್ತಿರುವ ಪ್ರಯಾಣಿಕರು

ಖಾಸಗಿ ಬಸ್‌ ಹಾಕುತ್ತೇವೆ ಎಂಬ ಸರ್ಕಾರ * ಸಮರ್ಪಕ ಬಸ್‌ ಇಲ್ಲದೇ ಹಿಡಿ ಶಾಪ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸರ್ಕಾರದ ಹಠಮಾರಿ ಧೋರಣೆಯಿಂದ ಬೇಸತ್ತಿರುವ ಸಾರಿಗೆ ನೌಕರರು ಇಂದಿನಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸಾರಿಗೆ ನೌಕರರು ಆರನೇ ವೇತನ ಆಯೋಗ ನಮಗೂ ಜಾರಿ ಮಾಡಿ ಎಂಬ ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ. ಆದರೆ ಈ ಬೇಡಿಕೆಯನ್ನು ಈಡೇರಿಸುವ ಭರವಸೆ ನೀಡಿದ್ದ ಸರ್ಕಾರ ಮತ್ತು ಸಾರಿಗೆ ಸಚಿವರು ಇದುವರೆಗೂ ಸಬೂಬು ಹೇಳಿಕೊಂಡು ಬಂದಿದ್ದು, ಯಾವುದೇ ಪ್ರಮುಖ ಬದಲಾವಣೆ ಆಗದ ಕಾರಣ ನಾಳೆಯಿಂದ ಮುಷ್ಕರ ಮಾಡುತ್ತಿದ್ದಾರೆ.

ಇನ್ನು ಮುಷ್ಕರ ಹತ್ತಿಕ್ಕುವ ನಿಟ್ಟಿನಲ್ಲಿ ಸರ್ಕಾರ ಮತ್ತು ಸಾರಿಗೆ ಸಚಿವರು ಯತ್ನಿಸುತ್ತಿದ್ದು, ಇಂದು ಮೈಸೂರು, ಬೆಂಗಳೂರಿನಲ್ಲಿ ಖಾಸಗಿ ಬಸ್‌ಗಳನ್ನು ಬಿಡಲಾಗುತ್ತಿದೆ. ಆದರೆ ಸಮರ್ಪಕವಾಗಿ ಸೇವೆ ಸಿಗುತ್ತಿಲ್ಲ ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ.

ಸಾರ್ವಜನಿಕರು ಸರ್ಕಾರಕ್ಕೆ ಬಸ್‌ ಬಂದ್‌ ಮಾಡಿರುವ ನೌಕರರ ಬೇಡಿಕೆ ಈಡೇರಿಸಿದೆ ಈ ರೀತಿ ಜನರಿಗೆ ತೊಂದರೆ ಕೊಡುವುದು ಎಷ್ಡು ಸರಿ ಎಂದು ಹಿಡಿ ಶಾಪಹಾಕುತ್ತಿದ್ದಾರೆ. ಆದರೆ, ಸರ್ಕಾರ ಮಾತ್ರ ಜನರಿಗೆ ತೊಂದರೆ ಆದರೂ ಸರಿ ನಾವು ಈಗೋವನ್ನು ಬಿಟ್ಟುಕೊಡುವುದಿಲ್ಲ ಎಂಬ ಧೋರಣೆ ಅನುಸರಿಸುತ್ತಿದ್ದಾರೆ.

ಈ ನಡುವೆ ನಮ್ಮ ಕೆಲಸ ಹೋದರೂ ಚಿಂತೆಯಿಲ್ಲ. ನಾವು ಇನ್ನು ಎಷ್ಟುದಿನ ಅಧಿಕಾರಿಗಳ ಕಿರುಕುಳ, ಕಡಿಮೆ ವೇತನಕ್ಕೆ ದುಡಿಯೋಣ ಹೇಳಿ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸವ ನಮಗೆ ಮಗಲು ಜಾಗವಿಲ್ಲ. ಒಂದು ರೀತಿ ಬೀದಿ ನಾಯಿಯಂತೆ ಸೊಳ್ಳೆಗಳು ಚಳಿಯಿಂದಲೇ ರಾತ್ರಿ ಪೂರ ಕಳೆಯಬೇಕು. ಸರಿಯಾದ ನಿದ್ರೆಯೂ ಇಲ್ಲ.

ಜತೆಗೆ ಎದ್ದಕೂಡಲೇ ನಿತ್ಯಕರ್ಮಗಳನ್ನು ಮುಗಿಸಲು ಸರಿಯಾದ ವ್ಯವಸ್ಥೆ ಇಲ್ಲ. ಇಂಥ ಪರಿಸ್ಥಿತಿಯಲ್ಲೂ ಸಂಸ್ಥೆಗೆ ಆದಾಯ ತರುತ್ತಿದ್ದೇವೆ. ಆದರೆ ಅದು ಸೋರಿಕೆಯಾಗುತ್ತಿದ್ದು, ಆ ಸೋರಿಕೆ ತಡೆಗೆ ಸರ್ಕಾರ ಮುಂದಾಗಿಲ್ಲ. ಅದರೆ ನಮಗೆ ವೇತನ ನೀಡುವಲ್ಲಿ ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಒಟ್ಟಾರೆ ಇಂದಿನಿಂದ ತಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ. ಅದು ಎಷ್ಟು ದಿನಗಳಾದರೂ ಸರಿಯೇ ನಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು 1.30 ಲಕ್ಷ ಸಾರಿಗೆ ನೌಕರರು ಒಗ್ಗಟ್ಟಿನಿಂದ ‌ಹೇಳುತ್ತಿದ್ದಾರೆ.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ