NEWSನಮ್ಮರಾಜ್ಯರಾಜಕೀಯ

ಮೆಜೆಸ್ಟಿಕ್‌-ಚನ್ನಮ್ಮಕೆರೆ ಅಚ್ಚುಕಟ್ಟು ನಡುವೆ ಬಿಎಂಟಿಸಿ ಬಸ್‌ ಓಡಿಸುತ್ತಿರುವ ಚಾಲಕ ತ್ಯಾಗರಾಜ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ ನಡುವೆಯೇ ಮೆಜೆಸ್ಟಿಕ್‌ನಿಂದ ಚನ್ನಮ್ಮಕೆರೆ ಅಚ್ಚುಕಟ್ಟು ಪ್ರದೇಶವರೆಗೆ ಬಿಎಂಟಿಸಿ 13  ಕತ್ತರಿಗುಪ್ಪೆ ಘಟಕದ ಚಾಲಕ ಕಂ ನಿರ್ವಾಹಕ  ತ್ಯಾಗರಾಜ್‌  ಬಿಎಂಟಿಸಿ ಬಸ್‌ ಓಡಿಸುತ್ತಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ನಡುವೆ  ಸುದ್ದಿಗಾರರೊಂದಿಗೆ ಮಾತನಾಡಿದ, ಬಸ್‌ಗೆ ಹಾನಿಯಾದರೆ ಕೋಡಿಹಳ್ಳಿ ಚಂದ್ರಶೇಖರ್‌ ಮತ್ತು ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರು ಅವರನ್ನೆ ಹೊಣೆ ಮಾಡಬೇಕು ಎಂದು ಪೊಲೀಸ್‌ಠಾಣೆಯಲ್ಲಿ ದೂರು ನೀಡಿ ಬಂದಿರುವುದಾಗಿ ಹೇಳಿದ್ದಾರೆ.

ಇನ್ನು ನಾನು ಸಾರ್ವಜನಿಕ ಸೇವೆ ಮಾಡಲು ಬಂದಿದ್ದೇನೆ ಮಾಡುತ್ತೇನೆ. ನಮಗೆ ಸರ್ಕಾರ ಕೊರೊನಾ ಸಂಕಷ್ಟದಲ್ಲಿ 3 ತಿಂಗಳು ವೇತನ ನೀಡಿದೆ ಹೀಗಾಗಿ ನಾನು ಇಂದು ಪೂರ್ತಿದಿನ ಸೇವೆ ನೀಡಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

ಇನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಯುವಜ್ರ ಬಸ್‌ಗಳು ಎಂದಿನಂತೆ ಸಂಚಾರ ನಡೆಸುತ್ತಿವೆ.

ಇನ್ನು ಮುಷ್ಕರವನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್‌ಗಳು ಮತ್ತು ಕೆಲ ಆಟೋಚಾಲಕರು ಸುಲಿಗೆಗೆ ಇಳಿಸಿದ್ದಾರೆ.

ಕೆಂಗೇರಿ ಸೇರಿ ಮೈಸೂರು ರಸ್ತೆಯಲ್ಲಿ ಯಾವುದೇ ಬಸ್‌ಗಳ ಸಂಚಾರ ಇಲ್ಲ. ಇನ್ನು ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು, ತುಮಕೂರು, ಚಿಕ್ಕಮಗಳೂರು, ಮಂಗಳೂರು, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ಕಲಬುರಗಿ, ಬೆಳಗಾವಿ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲೆಗಳ ಸಾರಿಗೆ ಡಿಪೋಗಳ ನೌಕರರು ಬೀದಿಗಿಳಿಯದಿರುವುದರಿಂದ ಸಂಚಾರ ಸಂಪೂರ್ಣ ಸ್ತಬ್ಧವಾಗಿದೆ.

 

 

 

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ