NEWSನಮ್ಮರಾಜ್ಯರಾಜಕೀಯ

ಸರ್ಕಾರ ಬಗ್ತಿಲ್ಲ: ಸಾರಿಗೆ ನೌಕರರು ಬಿಡ್ತಿಲ್ಲ- ಎರಡನೇ ದಿನವೂ ಮುಂದುವರಿದ ಮುಷ್ಕರ, ಜನರು ಹೈರಾಣು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸರ್ಕಾರದ ಹಠಮಾರಿ ಧೋರಣೆಯಿಂದ ಬೇಸತ್ತಿರುವ ಸಾರಿಗೆ ನೌಕರರು ಎರಡನೇ ದಿನವೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿದಿದ್ದು, ಜನರು ಪರದಾಡುವಂತಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸಾರಿಗೆ ನೌಕರರು ಆರನೇ ವೇತನ ಆಯೋಗ ನಮಗೂ ಜಾರಿ ಮಾಡಿ ಎಂಬ ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ. ಆದರೆ ಈ ಬೇಡಿಕೆಯನ್ನು ಈಡೇರಿಸುವ ಭರವಸೆ ನೀಡಿದ್ದ ಸರ್ಕಾರ ಮತ್ತು ಸಾರಿಗೆ ಸಚಿವರು ಇದು ಸಾಧ್ಯವಿಲ್ಲ ಎಂದು ಖಡಕ್‌ ಹೇಳಿಕೆ ನೀಡುವ ಮೂಲಕ ಮಾತು ತಪ್ಪಿದ್ದರಿಂದ ಆಕ್ರೋಶಗೊಂಡಿರುವ ನೌಕರರ ತಮ್ಮ ಮುಷ್ಕರವನ್ನು ಮುಂದುವರಿಸಿಸದ್ದಾರೆ.

ಇತ್ತ ಸಿಎಂ ಉಪ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದು ಜನರಿಗೆ ಆಗುತ್ತಿರುವ ತೊಂದರೆ ನಿವಾರಿಸುವ ನಿಟ್ಟಿನಲ್ಲಿ ನೌಕರರ ಬೇಡಿಕೆ ಈಡೇರಿಸುವ ಸಂಬಂಧ ಮಾತುಕತೆಗೆ ಕರೆದು ಮುಷ್ಕರ ಕೈ ಬಿಡುವಂತೆ ಮನವೊಲಿಸುವ ಕೆಲಸ ಮಾಡುತ್ತಿಲ್ಲ. ಇದರಿಂದ ಜನರು ಸಿಎಂ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಇನ್ನು ಮುಷ್ಕರ ಹತ್ತಿಕ್ಕುವ ನಿಟ್ಟಿನಲ್ಲಿ ಸರ್ಕಾರ ಮತ್ತು ಸಾರಿಗೆ ಸಚಿವರು ಖಾಸಗಿ ವಾಹನಗಳನ್ನು ಓಡಿಸುವ ಸಹಾಸಕ್ಕೆ ಕೈಹಾಕಿದ್ದಾರೆ. ಆದರೆ ಇದರಿಂದ ಕೆಲ ಖಾಸಗಿ ಬಸ್‌ಗಳು ಜನರ ಸುಲಿಗೆಗೆ ಇಳಿದಿವೆ ಇದರಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗುತ್ತಿದೆ.

ಇನ್ನು ರಾಯಚೂರಿನಲ್ಲಿ ಖಾಸಗಿ ಬಸ್‌ಗಳು ರಸ್ತೆಗಿಳಿದಿಲ್ಲ ಎಂದು ಹೇಳಲಾಗುತ್ತಿದೆ. ಇದರಿಂದ ಮುಂಜಾನೆಯಿಂದ ಜನರು ಕಚೇರಿ ಮತ್ತು ತಮ್ಮ ತಮ್ಮ ಕೆಲಸಗಳ ಸ್ಥಳಗಳಿಗೆ ತೆರಳಲು ಪರದಾಡುವಂತ್ತಾಗಿದೆ.

ಸಾರ್ವಜನಿಕರು ಸರ್ಕಾರಕ್ಕೆ ಬಸ್‌ ಬಂದ್‌ ಮಾಡಿರುವ ನೌಕರರ ಬೇಡಿಕೆ ಈಡೇರಿಸಿದೆ ಈ ರೀತಿ ತೊಂದರೆ ಕೊಡುವುದು ಎಷ್ಡು ಸರಿ ಎಂದು ಹಿಡಿ ಶಾಪಹಾಕುತ್ತಿದ್ದಾರೆ. ಆದರೆ, ಸರ್ಕಾರ ಮಾತ್ರ ಜನರಿಗೆ ತೊಂದರೆ ಆದರೂ ಸರಿ ನಾವು ಈಗೊ ಬಿಟ್ಟುಕೊಡುವುದಿಲ್ಲ ಎಂಬ ಧೋರಣೆ ಅನುಸರಿಸುತ್ತಿದ್ದಾರೆ.

ಒಟ್ಟಾರೆ ನಿನ್ನೆಯಿಂದ ತಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ. ಅದು ಎಷ್ಟು ದಿನಗಳಾದರೂ ಸರಿಯೇ ನಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು 1.30 ಲಕ್ಷ ಸಾರಿಗೆ ನೌಕರರು ಒಗ್ಗಟ್ಟಿನಿಂದ ‌ಮುಷ್ಕರ ನಡೆಸುತ್ತಿದ್ದು ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ