NEWSನಮ್ಮಜಿಲ್ಲೆ

ಸುರಕ್ಷಿತ ಯುಗಾದಿ- ಸಂತಸ ಯುಗಾದಿ – ನಗರದೆಲ್ಲೆಡೆ ಆಮ್ ಆದ್ಮಿ ಪಕ್ಷದಿಂದ ಸೋಂಕು ನಿವಾರಕ ಸಿಂಪಡಣೆ

ವಿಜಯಪಥ ಸಮಗ್ರ ಸುದ್ದಿ

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಸೋಂಕು ದೇಶವ್ಯಾಪಿ ಎರಡನೇ ಬಾರಿಗೆ ಹರಡುತ್ತಿದೆ. ಬೆಂಗಳೂರು ನಗರದಲ್ಲಿ ದಿನಕ್ಕೆ 5 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿ ಜನರಲ್ಲಿ ಭಯವನ್ನು ಸೃಷ್ಟಿ ಮಾಡಿದೆ ಎಂದು ಆಮ್ ಆದ್ಮಿ ಪಕ್ಷದ ಬಿಬಿಎಂಪಿ ಚುನಾವಣಾ ಉಸ್ತುವಾರಿ ಶಾಂತಲಾ ದಾಮ್ಲೆ ಹೇಳಿದ್ದಾರೆ.

ನಗರದ ಎನ್ .ಆರ್ .ರಸ್ತೆಯಲ್ಲಿನ ಬಿಬಿಎಂಪಿ ಕೇಂದ್ರ ಕಚೇರಿಯ ಮುಂಭಾಗದ ಬಸ್ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಆಯೋಜಿಸಿದ್ದ ಸೋಂಕು ನಿವಾರಕ ಸಿಂಪಡಣೆ (ಸ್ಯಾನಿಟೇಷನ್) ಮಾಡುವ ಕಾರ್ಯಕ್ರಮವನ್ನು ಸುರಕ್ಷಿತ ಯುಗಾದಿ – ಸಂತಸ ಯುಗಾದಿ ಎಂಬ ಘೋಷವಾಕ್ಯದೊಂದಿಗೆ ಚಾಲನೆ ನೀಡಿ ಮಾತನಾಡಿದರು.

ಕಳೆದ ವರ್ಷದ ಯುಗಾದಿ ಸೋಂಕಿನ ಮಧ್ಯೆ ಸಂಭ್ರಮದಿಂದ ಆಚರಿಸ ಸಾಧ್ಯವಾಗಲಿಲ್ಲ. ಈ ಬಾರಿಯೂ ಅದೇ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ನಾಮ್ಮ ಪಕ್ಷ ಈ ಬಾರಿ ವಿನೂತನ ರೀತಿಯಲ್ಲಿ ಯುಗಾದಿಯನ್ನು ಬರಮಾಡಿಕೊಳ್ಳುತ್ತಿದೆ. ಪಕ್ಷದ ದೇಶಭಕ್ತ ಕಾರ್ಯಕರ್ತರು ನಗರದ ಎಲ್ಲಾ ವಾರ್ಡುಗಳಲ್ಲಿನ ಮಾರುಕಟ್ಟೆಗಳು, ಧಾರ್ಮಿಕ ಕ್ಷೇತ್ರಗಳು, ಬಸ್ ಹಾಗೂ ರೈಲು ನಿಲ್ದಾಣಗಳು ಸೇರಿದಂತೆ ಹಲವಾರು ಜನ ನಿಬಿಡ ಪ್ರದೇಶಗಳಲ್ಲಿ ಸೋಂಕು ನಿವಾರಕ ಸಿಂಪಡಣೆ (ಸ್ಯಾನಿಟೇಷನ್) ಮಾಡುವ ಕಾರ್ಯಕ್ಕೆ ಮುಂದಾಗಿದ್ದು, ಇಂದಿನಿಂದ ಎಲ್ಲಾ ವಾರ್ಡ್‌ಗಳಲ್ಲೂ ಸೋಂಕು ನಿವಾರಕ ಸಿಂಪಡಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಇನ್ನು ಸೋಂಕು ಹರಡದಂತೆ ತಡೆಯಲು ಸಾರ್ವಜನಿಕರು ಕಡ್ಡಾಯ ನಿಯಮಗಳನ್ನು ಅನುಸರಿಸಬೇಕು, ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಸಭೆ ಸಮಾರಂಭಗಳಿಗೆ ಕಡಿವಾಣ ಹಾಕಬೇಕು. ಆಗ ಮಾತ್ರ ಸೋಂಕು ಹರಡುವುದನ್ನು ನಿಯಂತ್ರಿಸಲು ಸಾಧ್ಯ ಎಂದು ಸಲಹೆ ನೀಡಿದರು.

ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ಸದಂ, ಪಕ್ಷದ ಬೆಂಗಳೂರು ನಗರದ ಉಪಾಧ್ಯಕ್ಷ ಸುರೇಶ್ ರಾಥೋಡ್ ಮತ್ತು ಪಕ್ಷದ ಕಾರ್ಯಕರ್ತರು ಭಾಗವಹಿಸಿ ಮಾಸ್ಕ್ ವಿತರಿಸಿ ಸೋಂಕಿನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!?