ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಚಾಲಕನ ನಿಯಂತ್ರಣದ ತಪ್ಪಿದ ಬಿಎಂಟಿಸಿ ಬಸ್ ರಸ್ತೆ ಪಕ್ಕದ ಆಲದ ಮರಕ್ಕೆ ಡಿಕ್ಕಿ ಹೊಡೆದು ಬಸ್ಸಿನ ಮುಂದಿನ ಗ್ಲಾಸ್ ಪುಡಿಪುಡಿಯಾಗಿ, ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಅತ್ತಿಬೆಲೆ-ಸರ್ಜಾಪುರ ರಸ್ತೆಯಲ್ಲಿ ನಡೆದಿದೆ.
ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಆರನೇ ವೇತನ ಶಿಫಾರಸು ಜಾರಿಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದು, ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ.
ಈ ಹಿನ್ನೆಲೆಯಲ್ಲಿ ಖಾಸಗಿ ಚಾಲಕರು ಮತ್ತು ನಿರ್ವಾಹಕರನ್ನು ಕೆಲಸಕ್ಕೆ ಕಳುಹಿಸುವ ಮೂಲಕ ಸಾರಿಗೆ ಇಲಾಖೆ, ಬಿಎಂಟಿಸಿ ಅಧಿಕಾರಿಗಳು ಮತ್ತು ಸರ್ಕಾರ ಜನರ ಜೀವದ ಜತೆ ಆಟವಾಡುತ್ತಿದೆ. ಇದರಿಂದಲೇ ಇಂದು ಅಪಘಾತವಾಗಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಸ್ಥಳದಲ್ಲಿ ಇದ್ದ ಜನರು ಆಕ್ರೋಶಗೊಂಡು ಚಾಲಕನಿಗೆ ಥಳಿಸಲು ಮುಂದಾದ ಘಟನೆಯು ನಡೆಯಿತು.
ಇನ್ನು ಅಪಘಾತದಿಂದ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿರುವುದಾಗಿ ಹೆಸರೇಳಲಿಚ್ಛಿಸದ ಅಧಿಕಾರಿಯೊಬ್ಬರು ವಿಜಯಪಥಕ್ಕೆ ಮಾಹಿತಿ ನೀಡಿದ್ದಾರೆ.
ಯಾರಿಗೂ ಪ್ರಾಣದ ಭಯವಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ. ಆದರೆ, ಜನರು ಇದರಿಂದ ಆಕ್ರೋಶಗೊಂಡಿದ್ದು, ನೌಕರರು ಗೌರವಯುತವಾಘಿ ಬದಕುಲು ಬದುಕಲು ಬೇಕಾದ ವೇತನ ನೀಡುವಲ್ಲಿ ತಾರತಮ್ಯ ಮಾಡಿದ್ದು ಅಲ್ಲದೆ ಈ ರೀತಿ ಬಸ್ ಚಾಲನೆ ಮಾಡಲು ಬಾರದವರ ಕೈಗೆ ಬಸ್ ಕೊಟ್ಟು ಜನರ ಪ್ರಾಣದೊಂದಿಗೆ ಸಿಎಂ ಯಡಿಯೂರಪ್ಪ ಮತ್ತ ಉಸಾರಿಗೆ ಸಚಿವ ಲಕ್ಷ್ಮಣ ಸವದಿ ಆಟವಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಸರ್ಕಾರ ನೌಕರರ ಜತೆ ಸಂಧಾನ ಸಭೆ ನಡೆಸಿ ಶೀಘ್ರದಲ್ಲೇ ಅವರ ಬೇಡಿಕೆ ಈಡೇರಿಸದೆ ಇಂಥ ಅನಾಹುತಗಳಿಗೆ ಕಾರಣವಾಗುವುದನ್ನು ಮುಂದುವರಿಸಿದರೆ ನಾವು ಕೂಡ ರಸ್ತೆಗಿಳಿಯಬೇಕಾಗುತ್ತಿದೆ ಎಂಬ ಎಚ್ಚರಿಕೆ ಸಂದೇಶವನ್ನು ಸಿಎಂಗೆ ರವಾನಿಸಿದರು.