NEWSನಮ್ಮಜಿಲ್ಲೆಸಂಸ್ಕೃತಿ

ತಿ.ನರಸೀಪುರ: ಮುಷ್ಕರ ಹತ್ತಿಕ್ಕುವ ದಮನಕಾರಿ ಧೋರಣೆ ಕೈಬಿಡಬೇಕು: ಡಾ. ಯತೀಂದ್ರ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ತಿ.ನರಸೀಪುರ: ರೈತರ ಹೋರಾಟ ಹಾಗೂ ಕಾರ್ಮಿಕರು ಮುಷ್ಕರವನ್ನು ಹತ್ತಿಕ್ಕುವ ದಮನಕಾರಿ ಧೋರಣೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೂಡಲೇ ಕೈಬಿಡಬೇಕು. ಶೋಷಿತರು ಸೇರಿದಂತೆ ದಲಿತರು ಹಾಗೂ ಹಿಂದುಳಿದ ವರ್ಗಗಳ ಜನರ ಮೂಲಭೂತ ಹಕ್ಕುಗಳನ್ನು ಹತ್ತಿಕ್ಕುವ ಪ್ರಯತ್ನವನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಡುತ್ತಿರುವುದು ಸೂಕ್ತವಲ್ಲ ಎಂದು ವರುಣ ಶಾಸಕ ಡಾ.ಎಸ್.ಯತೀಂದ್ರ ಹೇಳಿದರು.

ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿರುವ ಉದ್ಯಾನವನದಲ್ಲಿ ಬುಧವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 130ನೇ ಜಯಂತಿ ಆಚರಣೆಯ ಹಿನ್ನೆಲೆಯಲ್ಲಿ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೆ ಹೋರಾಟವನ್ನು ದಮನಗೊಳಿಸುವ ಕಾರ್ಯ ಆರಂಭವಾಯಿತು. ಹೋರಾಟಗಾರರನ್ನು ಬಂಧಿಸುವ ಮೂಲಕ ದೀನದಲಿತರ ಧ್ವನಿಯನ್ನು ಅಡಗಿಸುವ ಷಡ್ಯಎಂತರವನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ದೇಶದ ನಾನಾ ರಾಜ್ಯಗಳ ಲಕ್ಷಾಂತರ ರೈತರು ಕೇಂದ್ರದ ವಿರುದ್ಧ ಹಲವು ತಿಂಗಳುಗಳಿಂದ ಪ್ರತಿಭಟನೆ ಮಾಡುತ್ತಿದ್ದರೂ ಸೌಜನ್ಯಕ್ಕೂ ಕೇಂದ್ರ ಸರ್ಕಾರ ಅವರನ್ನು ಮಾತುಕತೆಗೆ ಕರೆಯಲು ಸಿದ್ಧವಿಲ್ಲ. ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಡೆಸುತ್ತಿದ್ದರೂ ಅಹವಾಲು ಕೇಳಬೇಕಾದ ರಾಜ್ಯಸರ್ಕಾರವೇ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ.

ಇನ್ನಾದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರು ಮತ್ತು ನೌಕರರ ಬೇಡಿಕೆಗಳನ್ನು ಈಡೇರಿಸಲು ಗಮನವನ್ನು ನೀಡಬೇಕು. ದೇಶದ ವ್ಯವಸ್ಥೆಯನ್ನು ಗಂಭೀರವಾಗಿ ಅರಿತಿದ್ದ ಅಂಬೇಡ್ಕರ್ ಅವರು ಬಲಿಷ್ಠವಾದ ಭಾರತವನ್ನು ಕಟ್ಟಲು ಅತ್ಯುತ್ತಮವಾದ ಸಂವಿಧಾನವನ್ನು ಬರೆದರು. ನಾಯಕರ ಜನ್ಮದಿನವನ್ನು ದೇಶದಲ್ಲಷ್ಟೇ ಅಲ್ಲ ಜಗತ್ತಿನಾದ್ಯಂತ ಆಚರಣೆ ಮಾಡುತ್ತಿರುವುದು ನಾವೆಲ್ಲರೂ ಕೊಡುವ ವಿಚಾರವಾಗಿದೆ ಎಂದು ತಿಳಿಸಿದರು.

ಪುರಸಭೆ ಅಧ್ಯಕ್ಷ ಎನ್.ಸೋಮು, ತಾಲೂಕು ಕುರುಬರ ಸಂಘದ ಅಧ್ಯಕ್ಷ ಟಿ.ಎಂ.ನಂಜುಂಡಸ್ವಾಮಿ, ವರುಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಮುದ್ದೇಗೌಡ, ದಸಂಸ ಜಿಲ್ಲಾ ಸಂಚಾಲಕ ಆಲಗೂಡು ಶಿವಕುಮಾರ್, ಸಂಘಟನಾ ಸಂಚಾಲಕ ಸಿ.ಉಮಾ ಮಹದೇವ, ಯಡದೊರೆ ಮಹದೇವಯ್ಯ, ತಾಪಂ ಮಾಜಿ ಉಪಾಧ್ಯಕ್ಷ ಬಿ.ಮರಯ್ಯ, ಪುರಸಭೆ ಸದಸ್ಯರಾದ ಸಿ.ಪ್ರಕಾಶ್, ಆರ್.ಅರ್ಜುನ್, ಬಾದಾಮಿ ಮಂಜು, ಮುಖಂಡರಾದ ಕೊತ್ತೇಗಾಲ ಬಸವರಾಜು, ಪುಳ್ಳಾರಿ ಮಾದೇಶ, ಸೋಸಲೆ ಶಿವಣ್ಣ, ಯಡದೊರೆ ಸಿದ್ದರಾಜು, ಜಲ್ಲಿ ಮಹದೇವಸ್ವಾಮಿ ಇದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ