NEWSನಮ್ಮರಾಜ್ಯರಾಜಕೀಯ

ಕೋಲಾರ ಡಿಪೋ ಬಳಿ ಸಾರಿಗೆ ನೌಕರರ ಕುಟುಂಬಸ್ಥರಿಂದ ಧರಣಿ: 20 ಮಂದಿ ಬಂಧನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕೋಲಾರ: ಪ್ರಮುಖವಾಗಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಬಸ್ ಮುಷ್ಕರ ಇಂದು ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ.

ಈ ನಡುವೆ ಗುರುವಾರ ಕೋಲಾರದ ಬಸ್ ಡಿಪೋ ಬಳಿ ಸಾರಿಗೆ ನೌಕರರ ಕುಟುಂಬಸ್ಥರಿಂದ ದಿಢೀರ್ ಪ್ರತಿಭಟನೆ ನಡೆದಿದ್ದು, ನೌಕರರಿಗೆ ಮಾರ್ಚ್ ತಿಂಗಳ ವೇತನ ನೀಡುವಂತೆ ಒತ್ತಾಯಿಸಿದರು.

ಈ ವೇಳೆ ಸಾರಿಗೆ ನೌಕರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪ್ರತಿಭಟನಾಕಾರರನ್ನು ಡಿಪೋ ಒಳಗೆ ಬಿಡದೆ ಗೇಟ್ ಬಳಿ ಪೊಲೀಸರು ತಡೆದಿದ್ದರು. ಇದರಿಂದ ಕುಪಿತಗೊಂಡ ಪ್ರತಿಭಟನಾಕಾರರು ಮಾರ್ಚ್‌ ನಲ್ಲಿ ದುಡಿದ ವೇತನ ಕೊಡಲು ಮೀನಮೇಷ ಎಣಿಸುತ್ತಿರುವ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ಸಾರಿಗೆ ನೌಕರರ ಜೊತೆ ಮಹಿಳೆಯರು ಮತ್ತು ಮಕ್ಕಳು ಪ್ರತಿಭಟನೆ ನಡೆಸುತ್ತಿದ್ದು, ನಮ್ಮ ನ್ಯಾಯ ನಾವು ಕೇಳುತ್ತಿದ್ದೇವೆ ಒಳಗೆ ಬಿಡಿ ಎಂದು ಪಟ್ಟುಹಿಡಿದರು.

ಈ ವೇಳೆ ಪರಿಸ್ಥಿತಿ ತಿಳಿಗೊಳಿಸಲು ಮುಂದಾದ ಗಲ್ ಪೇಟೆ ಪೊಲೀಸರು ಪ್ರತಿಭಟನಾ ನಿರತ 20 ಜನ ಮಹಿಳೆಯರನ್ನು ಬಂಧಿಸಿದ್ದು, ಬಸ್ ಡಿಪೋ ಬಳಿ 144 ಸೆಕ್ಷನ್ ಜಾರಿ ಹಿನ್ನೆಲೆ ಪ್ರತಿಭಟನೆಗೆ ಅವಕಾಶ ನೀಡಿಲ್ಲ.

ರಾಜ್ಯ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಮತ್ತೊಮ್ಮೆ ಬಿಜೆಪಿ ಪರ ಮತ ನೀಡುವುದಿಲ್ಲ ಎಂದು ಕೂಗುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ