NEWSಸಿನಿಪಥ

ಹೃದಯಾಘಾತಕ್ಕೆ ಒಳಗಾಗಿ ಮೂರ್ಛೆ ಹೋಗಿದ್ದ ಹಾಸ್ಯನಟ ವಿವೇಕ್ ಇನ್ನಿಲ್ಲ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಿನಿಪಥ
ಚೆನ್ನೈ: ತಮಿಳು ಸಿನಿಮಾಗಳಲ್ಲಿ ಹಾಸ್ಯನಟನಾಗಿ ಖ್ಯಾತಿಗಳಿಸಿರುವ ನಟ ವಿವೇಕ್ (59) ಶನಿವಾರ ನಿಧನರಾದರು ಶುಕ್ರವಾರ ಬೆಳಗ್ಗೆ ಅವರಿಗೆ ಹೃದಯಾಘಾತವಾಗಿತ್ತು

ಹೃದಯಾಘಾತಕ್ಕೆ ಒಳಗಾಗಿ ಮೂರ್ಛೆ ಹೋಗಿದ್ದ ಅವರನ್ನು ತಕ್ಷಣವೇ ಪತ್ನಿ ಮತ್ತು ಮಗಳು ಆಸ್ಪತ್ರೆಗೆ ದಾಖಲಿಸಿದ್ದರು ಗುರುವಾರ (ಏ.15) ಅವರು ಕೋವಿಡ್‌ ಲಸಿಕೆ ಪಡೆದಿದ್ದರು. ಬಳಿಕ ಅರ್ಹರೆಲ್ಲ ಚಿಕಿತ್ಸೆ ಪಡೆದುಕೊಳ್ಳಬೇಕಿ ಎಂದು ಕರೆ ನೀಡಿದ್ದರು.

ಹೃದಯಾಘಾತಕ್ಕೆ ಒಳಗಾಗಿದ್ದರಿಂದ ಚೆನ್ನೈನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತಿತ್ತು. ಆರೆ ಇಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇನ್ನು ಇವರ ಸಾವಿಗೂ ಕೊರೊನಾ ಚಿಕಿತ್ಸೆ ಪಡೆದಿದ್ದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಆಸ್ಪತ್ರೆಯ ವೈದ್ಯರು ಶುಕ್ರವಾರ ಸ್ಪಷ್ಟಪಡಿಸಿದ್ದರು.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವಿವೇಕ್ ಅವರು ರಜನಿಕಾಂತ್, ವಿಜಯ್, ಕಮಲ ಹಾಸನ್, ಅಜಿತ್ ಸೇರಿ ಪ್ರಮುಖ ನಾಯಕರೊಂದಿಗೆ ನಟಿಸಿದ್ದಾರೆ. 2012ರ ಹಿಂದಿಯ ವಿಕ್ಕಿ ಡೋನರ್ ಚಿತ್ರದ ತಮಿಳು ರಿಮೇಕ್ ಧಾರಾಳ ಪ್ರಭು ಅವರು ಕಾಣಿಸಿಕೊಂಡ ಕೊನೆಯ ಚಿತ್ರ.

ನಿರ್ದೇಶಕ ಕೆ.ಬಾಲ ಚಂದರ್‌ ಅವರು ವಿವೇಕರನ್ನು ಚಿತ್ರರಂಗಕ್ಕೆ ಪರಿಚಯಿಸಿದರು.1987 ರಿಂದ ವಿವೇಕ್ ಸಿನಿಮಾ ಪ್ರಯಾಣ ಶುರುವಾಯಿತು. ಕನ್ನಡದ ಚಂದ್ರ ಸೇರಿದಂತೆ ನೂರಾರು ಸಿನಿಮಾಗಳಲ್ಲಿ ನಟಿಸಿದ್ದರು.

ಚಿತ್ರರಂಗದ ಹಲವು ಪ್ರಮುಖರು ಹಾಗೂ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಆಗಲಿದ ನಟನಿಗೆ ಸಂತಾಪ ಸೂಚಿಸಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...