ವಿಜಯಪಥ ಸಮಗ್ರ ಸುದ್ದಿ
ವಿಜಯನಗರ: ಆರನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ಮತ್ತು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
ನೌಕರರ ಬೇಡಿಕೆ ನ್ಯಾಯಯುತವಗಿದ್ದು ಅವುಗಳನ್ನು ಪರಿಗಣಿಸಬೇಕು ಎಂದು ಸಂಘಟನೆಗಳ ಪದಾಧಿಕಾರಿಗಳು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿವೆ.
ಈ ಎರಡೂ ಸಂಘಟನೆಗಳು ಜಂಟಿಯಾಗಿ ಸಾರಿಗೆ ನೌಕರರ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದು ಸಂಘಟನೆಗಳ ಪದಾಧಿಕಾರಿಗಳು ಈಕರಾರಸಾ ನಿಗಮದ ಪಟ್ಟಣದ ಘಟಕ ವ್ಯವಸ್ಥಾಪಕರಿಗೆ ಮನವಿ ಪತ್ರ ನೀಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಬಾಷಾ, ಮುಖಂಡರಾದ ಜಿ. ಸರೋಜಮ್ಮ, ಹುಲಿಗೆಮ್ಮ, ರೇಣುಕಾ, ಕೆ.ಲೋಕಪ್ಪ, ಬಸವರಾಜ, ಕೆ.ಪಾಯಲ್ ಬಾನು, ಕೃಷ್ಣಪ್ಪ, ಎಚ್.ಟಿ. ನಿಂಗಪ್ಪ ಸೇರಿದಂತೆ ಹಲವರು ಇದ್ದರು.