NEWSನಮ್ಮರಾಜ್ಯರಾಜಕೀಯ

ಮುಷ್ಕರ ಹತ್ತಿಕ್ಕುವ ಹುನ್ನಾರ: ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ಸಾರಿಗೆ ನೌಕರರ ಕೂಟದ ಮತ್ತು ವಿವಿಧ ಸಂಘಟನೆಗಳ ಮುಖಂಡರ ಬಂಧನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಯೋಜಿಸಿದ್ದ ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹ ಹತ್ತಿಕ್ಕುವ ನಿಟ್ಟಿನಲ್ಲಿ ಇಂದು ಪೊಲೀಸರು ಸಾರಿಗೆ ನೌಕರರ ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿ ಸತ್ಯಾಗ್ರಹಕ್ಕೆ ಬೆಂಬಲ ನೀಡಿದ ವಿವಿಧ ಸಂಘಟನೆಗಳ ಪದಾಧಿಕಾರಿಗಳನ್ನು ಬಂಧಿಸಿದ್ದಾರೆ.

ಆದರೂ ನಮ್ಮ ಮುಷ್ಕರ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಮುಂದುವರಿಯಲಿದೆ. ನಾವು ಠಾಣೆಯಲ್ಲೋ ಅಥವಾ ಜೈಲಿಗೆ ಹಾಕಿದರೆ ಅಲ್ಲಿಯೇ ಉಪವಾಸ ಸತ್ಯಾಗ್ರಹ ಕುಳಿತುಕೊಳ್ಳುತ್ತೇವೆ. ನಮ್ಮ ಪ್ರಾಣ ಹೋದರು ಸರಿಯೇ ನಮಗೆ ನ್ಯಾಯ ಸಿಗುವವರೆಗೂ ಮುಷ್ಕರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಕೂಟದ ಅಧ್ಯಕ್ಷ ಚಂದ್ರು ತಿಳಿಸಿದ್ದಾರೆ.

ಪೊಲೀಸರು ಬಂಧಿಸಲು ಬಂದವೇಳೆ ಮಾತನಾಡಿದ ಅವರು, ನಮ್ಮ ನೌಕರರು ಯಾವುದಕ್ಕೂ ಹೆದರುವ ಅಗತ್ಯವಿಲ್ಲ. ಸರ್ಕಾರ ನಮ್ಮ ಮೇಲೆ ಏನೇ ಪ್ರಯೋಗ ಮಾಡಿದರೂ ನಾವು

ನೇ ವೇತನ ಆಯೋಗ ಜಾರಿ ಮಾಡದ ಹೊರತು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಹೀಗಾಗಿ ನೌಕರರು ಭಯಪಡುವ ಅಗತ್ಯವಿಲ್ಲ. ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ ಎಂದು ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಇಂದು ಬೆಳಗ್ಗೆ ಉಪವಾಸ ಸತ್ಯಾಗ್ರಹ ಹಿನ್ನೆಲೆ ಕೋಡಿಹಳ್ಳಿ ಚಂದ್ರಶೇಖರ್ ಅವರ ಕಚೇರಿ ಆವರಣದಲ್ಲಿ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರು , ಪದಾಧಿಕಾರಿಗಳಾದ ಆನಂದ್, ತಿಪ್ಪೇಸ್ವಾಮಿ ಸತೀಶ್, ಕನ್ನಡ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಲಿಂಗೆಗೌಡ, ಯುವ ಘಟಕದ ರಾಜ್ಯಾಧ್ಯಕ್ಷ ರಂಗೇಶ್ ಗೌಡ್ರು ಸೇರಿದಂತೆ ಹಲವಾರು ಕಾರ್ಮಿಕರು ಮತ್ತು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ತಮ್ಮ ವಾಹನದಲ್ಲೇ ಕರೆದುಕೊಂಡು ಹೋಗಿದ್ದಾರೆ.

ಈ ನಡುವೆ ಮುಷ್ಕರ ವಾಪಸ್ ತೆಗೆದುಕೊಂಡಿದ್ದೇವೆ ಎಂಬುದು ಸುಳ್ಳು ವದಂತಿ ದಯವಿಟ್ಟು ಶಾಂತಿಯುತ ಸತ್ಯಾಗ್ರಹ ಮುಂದುವರಿಸಿ ಕೋಡಿಹಳ್ಳಿ ಚಂದ್ರಶೇಖರ್ ಅವರು ಅಂತಿಮ ತೀರ್ಮಾನ ಹೇಳುವವರೆಗೂ ದಯಮಾಡಿ ಸತ್ಯಾಗ್ರಹ ಮುಂದುವರಿಯಲಿ ಎಂದು ಬಂಧಿತರು ನೌಕರರಿಗೆ ಕರೆ ನೀಡಿದ್ದಾರೆ.

ಹೀಗಾಗಿ ಪ್ರತಿಭಟನೆ ವೇಳೆ ಜಮಾಯಿಸಿದ್ದ ನೌಕರರು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ವಿರುದ್ಧ ಘೋಷಣೆಗಳನ್ನು ಕೂಗಿ, ತಮ್ಮ ಪರ ಧ್ವನಿ ಎತ್ತಿದವರ ಧ್ವನಿ ಕುಗ್ಗಿಸುವ ಪ್ರಯತ್ನ ಮಾಡುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...