NEWSನಮ್ಮಜಿಲ್ಲೆ

ಗಿರಿಜನರಿಗೆ ಅಧಿಕಾರಿಗಳು ಸಹಕಾರ ನೀಡಿ: ಶಾಸಕ ಮಹದೇವ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ: ಕಾಡಂಚಿನ ಗ್ರಾಮಸ್ಥರಿಗೆ ಮತ್ತು ಗಿರಿಜನರಿಗೆ ಚೆಸ್ಕಾಂ  ಇಲಾಖೆ ಮೂಲ ಸೌಕರ್ಯಗಳನ್ನು ಒದಗಿಸುವ ಸಂದರ್ಭದಲ್ಲಿ ಅಧಿಕಾರಿಗಳು  ಸಹಕಾರ ನೀಡಬೇಕು ಎಂದು ಶಾಸಕ ಕೆ.ಮಹದೇವ್ ತಿಳಿಸಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ತಾಲೂಕಿನ ಹಬಟೂರು, ಗಾಂಧೀನಗರ, ಕೊಪ್ಪ ಹಾಗೂ ಹೊನ್ನಾಪುರ ಗ್ರಾಮಗಳಲ್ಲಿ ಅಭಿವೃದ್ದಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಕಾಡಂಚಿನಲ್ಲಿ ವಾಸಮಾಡುತ್ತಿರುವ ಗಿರಿಜನರು ರೈತರಿಗೆ ಚೆಸ್ಕಾಂ ಇಲಾಖೆಯವರು ವಿದ್ಯುತ್ ಸಂಪರ್ಕ ಪಡೆಯಲು ಮತ್ತಿತರರ ಕೆಲಸಗಳಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿದ್ದು ಮಾನವನ ಮೂಲಸೌಕರ್ಯ  ಕಲ್ಪಿಸುವುದು ಸರಕಾರದ ಪ್ರಮುಖ ಆದ್ಯತೆಯಾಗಿದ್ದು ಇದಕ್ಕೆ ಎಲ್ಲಾ ಇಲಾಖೆಗಳು ಸಹಕಾರ ನೀಡಬೇಕು ಚೆಸ್ಕಾಂ ಅಧಿಕಾರಿಗಳು ಗಿರಿಜನರಿಗೆ ಕಾಡಂಚಿನ ಪ್ರದೇಶದ ರೈತರಿಗೆ  ಅನುಕೂಲವಾಗುವ ರೀತಿಯಲ್ಲಿ ಸಹಕಾರ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಷ್ಟಿಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೋಟ್ಯಂತ ರೂ.ಗಳ ದುರುಪಯೋಗವನ್ನು ಹಿಂದೆ ಅಧಿಕಾರ ನಡೆಸಿದವರು ಮಾಡಿದ ಪರಿಣಾಮ ಇಂದು ಯೋಜನೆ ಅನುಷ್ಠಾನಕ್ಕೆ ತೊಂದರೆಯಾಗುತ್ತಿದೆ. ಇದು ಮಹತ್ವದ ಯೋಜನೆಯಾಗಿದ್ದು ಸದುಪಯೋಗ ಪಡಿಸಿಕೊಂಡರೆ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗಲಿದೆ. ಇದನ್ನು ರೈತರು ನಮ್ಮ  ಹೊಲನಮ್ಮ ರಸ್ತೆ ಯೋಜನೆ, ಕೃಷಿಹೊಂಡ, ಇಂಗು ಬಚ್ಚಲು ನಿರ್ಮಾಣ ಮುಂತಾದ ತಮ್ಮ ಸ್ವಂತ ಜಮೀನುಗಳ ಅಭಿವೃದ್ಧಿಗೆ ಬಳಸಿಕೊಂಡು ಗ್ರಾಮ ಮತ್ತು ಸ್ವಂತ ಅಭಿವೃದ್ದಿಯನ್ನು ಮಾಡಬಹುದಾಗಿದೆ. ಎಲ್ಲಾ ಕೆಲಸಗಳಿಗೂ ಶಾಸಕರ ಅನುದಾನವನ್ನೇ ಕಾಯದೆ ಅಧಿಕಾರಿಗಳು ಮತ್ತು ಜನಪತ್ರಿನಿಧಿಗಳು ಯೋಜನೆಯ ಸದುಪಯೋಗಕ್ಕೆ ಮುಂದಾಗಬೇಕು ಎಂದು ತಿಳಿಸಿದರು.

ತಾಲೂಕಿನಲ್ಲಿ ಜಾನುವಾರುಗಳ ಕಳ್ಳತನ ಮತ್ತು ಅವುಗಳನ್ನು ಹತ್ಯೆಮಾಡುವ ಪ್ರಕರಣಗಳು ಹೆಚ್ಚಾಗಿದ್ದು ಈ ಬಗ್ಗೆ ಪೊಲೀಸ್ ಇಲಾಖೆ ಕ್ರಮವಹಿಸುವಂತೆ ಬೈಲುಕೊಪ್ಪೆ ಎಸ್ಐ ಪುಟ್ಟರಾಜುರವರಿಗೆ ತಿಳಿಸಿದರು.

ತಾಪಂ ಸ್ಥಾಯಿಸಮಿತಿ ಅಧ್ಯಕ್ಷ ಎ.ಟಿ.ರಂಗಸ್ವಾಮಿ, ಇಒ ಸಿ.ಆರ್.ಕೃಷ್ಣಕುಮಾರ್, ಕೊಪ್ಪ ಗ್ರಾ.ಪಂ.ಅಧ್ಯಕ್ಷ ರೇಣುಕಾಸ್ವಾಮಿ, ಉಪಾಧ್ಯಕ್ಷೆ ಸಿಂಧು, ಪಿಡಿಒ ಸತೀಶ್, ಆರ್ಐ ಪ್ರದೀಪ್ ಎನ್.ಕೆ., ಗ್ರಾಮಲೆಕ್ಕಿಗ ನವೀನ್ರಾವ್ ಎಂ.ಎಸ್, ಮಾಜಿ ತಾ.ಪಂ.ಸದಸ್ಯ ರಘುನಾಥ್,  ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಇಂಜಿನಿಯರ್ ಕುಮಾರ್, ಪಾಷಾ, ಮುಖಂಡರಾದ ಅಶೋಕ್, ಸತೀಶ್ ಇದ್ದರು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ