NEWSನಮ್ಮಜಿಲ್ಲೆ

ದುರುಳ ಸಚಿವ ಉಮೇಶ್ ಕತ್ತಿಯ ಸಂಪುಟದಿಂದ ವಜಾಗೊಳಿಸಿ: ಜಗದೀಶ್ ವಿ. ಸದಂ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮೊಬೈಲ್ ಸಂಭಾಷಣೆಯಲ್ಲಿ ಪಡಿತರ ಅಕ್ಕಿ ವಿತರಣೆಯಲ್ಲಿ ಆಗುತ್ತಿರುವ ಕಡಿತದ ಬಗ್ಗೆ ರೈತರೊಬ್ಬರ ಜೊತೆ ಮಾತನಾಡುತ್ತಾ “ಸತ್ತರೆ ಒಳ್ಳೆಯದು” ಎಂದು ದಾರ್ಷ್ಟ್ಯತನ ಮತ್ತು ದುರುಳ ವಾಗಿ ಮಾತನಾಡಿರುವ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಮಹತ್ವದ ಜವಾಬ್ದಾರಿ ಹೊತ್ತಿರುವ ಉಮೇಶ್ ಕತ್ತಿ ಯನ್ನು ಈ ಕೂಡಲೇ ಸಂಪುಟದಿಂದ ವಜಾಗೊಳಿಸಬೇಕೆಂದು ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆಗ್ರಹಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಕುರಿತು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಮಹಾಮಾರಿಯ ಎರಡನೇ ಅಲೆ ಇಡೀ ರಾಜ್ಯವನ್ನೇ ನಜ್ಜುಗುಜ್ಜಾಗಿ ಅಂಧಕಾರದತ್ತ ಕರೆದೊಯ್ಯುತ್ತಿರುವ ಈ ದುರ್ದಿನಗಳಲ್ಲಿ ರೈತರೊಬ್ಬರು ತಮ್ಮ ಅಳಲನ್ನು ತೋಡಿಕೊಳ್ಳಲು ಮಂತ್ರಿಗಳ ಜೊತೆ ಮಾತನಾಡಿದಾಗ ಸಮಾಧಾನ ಪಡಿಸುವಂತಹ ಮಾತನಾಡುವುದನ್ನು ಬಿಟ್ಟು ಈ ರೀತಿಯ ದುರುಳತನವನ್ನು ತೋರಿಸಿರುವ ಮಂತ್ರಿ ಯಾವುದೇ ನಾಗರಿಕ ಸಮಾಜದಲ್ಲಿ ಆಹಾರ ಪೂರೈಕೆ ಯಂತಹ ಮಹತ್ವದ ಜವಾಬ್ದಾರಿ ಮತ್ತು ಅಧಿಕಾರವನ್ನು ಹೊಂದಿರಲು ನಾಲಾಯಕ್ಕು ಎಂದು ಜಗದೀಶ್ ಕಿಡಿಕಾರಿದರು.

ಸಂಪುಟದಿಂದ ಕಿತ್ತು ಹಾಕದಿದ್ದಲ್ಲಿ ಸಚಿವರ ಮನೆ ಮುಂದೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಉಗ್ರ ಪ್ರತಿಭಟನೆಯನ್ನು ನಡೆಸಲಾಗುವುದೆಂದು ಸಿಎಂ ಯಡಿಯೂರಪ್ಪ ಅವರಿಗೆ ಎಚ್ಚರಿಕೆ ನೀಡಿದರು.

Leave a Reply

error: Content is protected !!
LATEST
4ನಿಗಮಗಳ ಅಧಿಕಾರಿಗಳು-ನೌಕರರಿಗೂ ಸರಿಸಮಾನ ವೇತನ ಕೊಡಿ: ಸಾರಿಗೆ ಸಚಿವರು, ಅಧಿಕಾರಿಗಳಿಗೆ KSRTC ಸಿಬ್ಬಂದಿ, ಲೆಕ್ಕ ಪತ್... ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಣೆಗೆ ಅರ್ಜಿ ಆಹ್ವಾನ ಅ.28ರಂದು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC ‍& KSRTC ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ