Breaking NewsNEWSರಾಜಕೀಯ

ಬೆಡ್ ಬ್ಲಾಕ್ ದಂಧೆ – ಕೈ ನಾಯಕರ ಜತೆ ಆರೋಪಿ: ಫೋಟೋ ವೈರಲ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬೆಡ್ ಬ್ಲಾಕ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಅವರಲ್ಲಿ ಆರೋಪಿ ನೇತ್ರಾವತಿ ಎಂಬುವರು ಕಾಂಗ್ರೆಸ್ ನಾಯಕರ ಜತೆ ಇರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಬೆಂಗಳೂರು ಪೊಲೀಸರು ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ(42) ಮತ್ತು ರೋಹಿತ್(32) ನನ್ನು ಈಗಾಗಲೇ ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಈ ಮಧ್ಯೆ ನೇತ್ರಾವತಿ ಹಲವು ಕಾಂಗ್ರೆಸ್ ನಾಯಕರ ಜತೆ ಇರುವ ಫೋಟೋಗಳು ಈಗ ಹರಿದಾಡುತ್ತಿವೆ. ಇದು ಹಗರಣ ಮಜಲನ್ನೇ ಬದಲಿಸಬಹುದೇ ಎಂಬ ಅನುಮಾನ ಈಗ ಹಲವರಲ್ಲಿ ವ್ಯಕ್ತವಾಗುತ್ತಿದೆ.

ನೇತ್ರಾವತಿ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್, ಜಯನಗರ ಶಾಸಕಿ ಸೌಮ್ಯಾ ರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಕಂಡ್ರೆ ಜತೆಗೆ ಇರುವ ಫೋಟೋಗಳು ಹರಿದಾಡುತ್ತಿವೆ. ಜತೆಗೆ ಬಂಧಿತರಿಬ್ಬರು ನೆರೆಮನೆ ನಿವಾಸಿಯಾಗಿದ್ದಾರೆ. ನಾನು ಸಾಮಾಜಿಕ ಕಾರ್ಯಕರ್ತೆ ಎಂದು ಪೊಲೀಸರ ಬಳಿ ನೇತ್ರಾವತಿ ಹೇಳಿದ್ದಾಳೆ.

ಬಿಬಿಎಂಪಿ ವಾರ್ ರೂಮ್‌ನಲ್ಲಿ ಈಕೆ ಹಲವರ ಜತೆ ಸಂಪರ್ಕದಲ್ಲಿರುವುದು ಖಚಿತವಾಗಿದೆ. ಈ ದಂಧೆಯ ಹಿಂದೆ ದೊಡ್ಡ ಜಾಲವೇ ಇರುವುದು ಸಿಸಿಬಿ ಗಮನಕ್ಕೆ ಬಂದಿದೆ. ಈಗ ಪೊಲೀಸರು ಇವರ ಜತೆ ಸಂಪರ್ಕದಲ್ಲಿದ್ದವರ ಪತ್ತೆಗೆ ಮುಂದಾಗುತ್ತಿದ್ದಂತೆ ಹಲವರು ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

ಸಮಯಕ್ಕೆ ಸರಿಯಾಗಿ ಬೆಡ್‌, ಆಕ್ಸಿಜನ್‌, ಚಿಕಿತ್ಸೆ ಸಿಗದೆ ಅದೆಷ್ಟೋ  ಕೊರೊನಾ ಸೋಂಕಿತರು ಅಸುನೀಗಿದ್ದಾರೆ. ಆ ಮೃತರ ಮನೆಯವ ಶಾಪ ಇವರಿಗೆ ತಟ್ಟದೆ ಇರದೇ. ಇಂಥ ನೀಚ ಕೃತ್ಯಕ್ಕೆ ಕೈ ಹಾಕಿರುವವರು ತಕ್ಷ ಶಿಕ್ಷೆ ಅನುಭವಿಸಲೇ ಬೇಕು ಎಂಬುವುದು ನಾಡಿನ ಜನರ ನೋವಿನ ನುಡಿಯಾಗಿದೆ.

Leave a Reply

error: Content is protected !!
LATEST
ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!!