NEWSದೇಶ-ವಿದೇಶ

ಟ್ವಿಟರ್ , ಮೈಕ್ರೊಬ್ಲಾಗಿಂಗ್ ಹೇಳಿಕೆಗೆ ಭಾರತ ಸರ್ಕಾರ ಖಂಡನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ‘ತಿರುಚಿದ ಮೀಡಿಯಾ’ ಟ್ಯಾಗ್ ಗಳ ವಿಚಾರದಲ್ಲಿ ಪೊಲೀಸರಿಂದ ಬೆದರಿಕೆ ಹಾಕಲಾಗಿದೆ ಎಂದು ಟ್ವಿಟರ್ ಹೇಳಿದ ನಂತರ ಮೈಕ್ರೊಬ್ಲಾಗಿಂಗ್ ವೇದಿಕೆ ನೀಡಿರುವ ಹೇಳಿಕೆ ನಿರಾಧಾರ, ತಪ್ಪು ಮತ್ತು ದೇಶಕ್ಕೆ ಅಪಖ್ಯಾತಿ ತರುವ ಪ್ರಯತ್ನವಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಖಂಡಿಸಿದೆ.

ಟ್ವಿಟರ್ ಸೇರಿ ಸೋಶಿಯಲ್ ಮೀಡಿಯಾ ಕಂಪನಿಗಳ ಪ್ರತಿನಿಧಿಗಳು, ದೇಶದಲ್ಲಿ ಯಾವುದೇ ಸುರಕ್ಷಿತವಾಗಿ ಇರಲಿದ್ದಾರೆ. ಅವರ ವೈಯಕ್ತಿಕ ಸುರಕ್ಷತೆ ಮತ್ತು ಭದ್ರತೆಗೆ ಯಾವುದೇ ಬೆದರಿಕೆ ಇಲ್ಲ ಎಂದು ಮಾಹಿತಿ ತಂತ್ರಜ್ಞಾನ ಸಚಿವಾಲಯ ಪ್ರತಿಪಾದಿಸಿದೆ.

ಟ್ವಿಟರ್ ನೀಡಿರುವ ದುರಾದೃಷ್ಟಕರ ಹೇಳಿಕೆಯನ್ನು ಸರ್ಕಾರ ಖಂಡಿಸಿದು, ಅದು ಸಂಪೂರ್ಣವಾಗಿ ನಿರಾಧಾರ, ಸುಳ್ಳು ಮತ್ತು ತಮ್ಮ ಸ್ವಂತ ದಡ್ಡತನವನ್ನು ಮರೆ ಮಾಚಲು ದೇಶಕ್ಕೆ ಅಪಖ್ಯಾತಿ ತರುವ ಪ್ರಯತ್ನವಾಗಿದೆ ಎಂದು ಮಾಹಿತಿ ಸಚಿವಾಲಯ ತಿಳಿಸಿದೆ.

ಇದಕ್ಕೂ ಮುನ್ನ, ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಇರುವ ಸಂಭಾವ್ಯ ಆಪಾಯ ಮತ್ತು ಪೊಲೀಸರ ಮೂಲಕ ಬೆದರಿಸುವ ತಂತ್ರದ ಬಗ್ಗೆ ಟ್ವಿಟರ್ ಆತಂಕ ವ್ಯಕ್ತಪಡಿಸಿತ್ತು. ತನ್ನ ಕಚೇರಿಗೆ ಪೊಲೀಸರ ಭೇಟಿ ಪ್ರಸ್ತಾಪಿಸಿ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ತನ್ನ ಸಂಸ್ಥೆಯ ನೌಕರರ ಭದ್ರತೆ ಬಗ್ಗೆಯೂ ಕಳವಳ ವ್ಯಕ್ತಪಡಿಸಿತ್ತು.

ಇನ್ನು ಟ್ವಿಟರ್ ಹೇಳಿಕೆ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವಕ್ಕೆ ನಿಯಮಗಳನ್ನು ನಿರ್ದೇಶಿಸುವ ಪ್ರಯತ್ನವಾಗಿದೆ. ಟ್ವಿಟರ್ ತನ್ನ ಕಾರ್ಯಗಳು ಮತ್ತು ಉದ್ದೇಶಪೂರ್ವಕವಾಗಿ ಕೆಣಕುವ ಮೂಲಕ ಭಾರತದ ಕಾನೂನು ವ್ಯವಸ್ಥೆಯನ್ನು ಹಾಳುಮಾಡಲು ಪ್ರಯತ್ನಿಸುತ್ತದೆ ಎಂದು ಸಚಿವಾಲಯ ಹೇಳಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ