CrimeNEWSದೇಶ-ವಿದೇಶ

ಯುವತಿ ಮೇಲೆ ಅತ್ಯಾಚಾರ, ಹಲ್ಲೆ: ಬೆಂಗಳೂರಿನಲ್ಲಿ ಐವರು ಬಾಂಗ್ಲಾ ಪ್ರಜೆಗಳ ಬಂಧನ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬಾಂಗ್ಲಾದೇಶದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬೆಂಗಳೂರು ಪೊಲೀಸರು ಒಬ್ಬ ಮಹಿಳೆ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.

ಸಂತ್ರಸ್ತ ಯುವತಿ ಹಾಗೂ ಐವರೂ ಆರೋಪಿಗಳು ಬಾಂಗ್ಲಾದೇಶದವರಾಗಿದ್ದು, ಸಂತ್ರಸ್ತ ಯುವತಿಯನ್ನು ಬಾಂಗ್ಲಾದೇಶದಿಂದ ಮಾನವ ಕಳ್ಳ ಸಾಗಣೆ ಮೂಲಕ ಭಾರತಕ್ಕೆ ಕರೆತಂದಿದ್ದು, ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಸಂತ್ರಸ್ತೆ ಮೇಲಿನ ದ್ವೇಷದಿಂದಾಗಿ ನಾಲ್ವರು ಯುವಕರು ಲೈಂಗಿಕ ದೌರ್ಜನ್ಯ ಎಸಗಿದ್ದರು. ಇದನ್ನು ವಿಡಿಯೋ ಮಾಡಿ ವಿಕೃತಿ ಮೆರೆದಿದ್ದರು. ಈ ವಿಡಿಯೋ ಬಾಂಗ್ಲಾದೇಶ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ವೈರಲ್‌ ಆಗಿತ್ತು.

ಅಸ್ಸಾಂ ಪೊಲೀಸರು ಈ ವಿಡಿಯೋ ಕುರಿತು ತನಿಖೆ ನಡೆಸಿದಾಗ ಇದು ಬೆಂಗಳೂರಿನಲ್ಲಿ ನಡೆದಿದೆ ಎಂದು ತಿಳಿದುಬಂದಿತ್ತು. ಅಲ್ಲದೇ ಈ ಕೃತ್ಯದಲ್ಲಿ ಬಾಂಗ್ಲಾ ಪ್ರಜೆಗಳು ಭಾಗಿಯಾಗಿರುವುದು ಗೊತ್ತಾಗಿತ್ತು. ಆರೋಪಿಗಳ ಕುರಿತು ಬೆಂಗಳೂರಿಗೆ ಬಾಂಗ್ಲಾ ಪೊಲೀಸರು ಮಾಹಿತಿ ರವಾನಿಸಿದ್ದರು. ಅವಲಹಳ್ಳಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಮಾಡಿ ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ.

ಭೀಕರ ವಿಡಿಯೋ
ವೈರಲ್‌ ಆಗಿರುವ ವಿಡಿಯೋದಲ್ಲಿ ಯುವತಿಯು ಎಷ್ಟೇ ಒದ್ದಾಡಿದರೂ ಆಕೆಯನ್ನು ಬಿಡದಂತೆ ಮೈ ಮೇಲೆ ಎರಗಿ ಆಕೆಯನ್ನು ನಿರ್ವಸ್ತ್ರಳನ್ನಾಗಿ ಮಾಡಿ ಆಕೆಯ ಮರ್ಮಾಂಗಕ್ಕೆ ಮದ್ಯದ ಬಾಟಲಿ ಹಾಕಿದ್ದರು. ಆಕೆಯನ್ನು ಕ್ರೂರವಾಗಿ ಥಳಿಸಿದ್ದರು.

ರಾಮಮೂರ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐವರನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ