Breaking NewsNEWSನಮ್ಮರಾಜ್ಯ

ಹಿಂದೆ ಮಾಡಿದ್ದ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುತ್ತಿದೆ: ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಜಿಂದಾಲ್‌ ಕಂಪನಿಗೆ 3,667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ. ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ. ಆದರೆ, ನಷ್ಟ ಜಾಸ್ತಿಯೇ ಆಗಿದೆ ಎಂದು ಸರಣಿ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಜಿಂದಾಲ್‌ಗೆ ಲೀಸ್‌ ಕಂ ಸೇಲ್‌ ಆಧಾರದಲ್ಲಿ ಭೂಮಿ ನೀಡಲಾಗಿತ್ತು. ಲೀಸ್‌ ಅವಧಿ ಮುಗಿದಿದ್ದರಿಂದ ಕ್ರಯಪತ್ರ ಮಾಡಿಕೊಡಬೇಕಾಗಿತ್ತು. ಅಷ್ಟನ್ನು ಮಾತ್ರ ಮಾಡಲು ಮುಂದಾಗಿದ್ದ ನನ್ನ ಸರ್ಕಾರದ ವಿರುದ್ಧ ಯಡಿಯೂರಪ್ಪನವರು ಸಲ್ಲದ ಆರೋಪ ಮಾಡಿದ್ದರು. ಆದರೆ ಈಗ? ಅವರು ಅಂದು ನನ್ನ ಮೇಲೆ ಮಾಡಿದ ಆರೋಪಗಳನ್ನೆಲ್ಲ ತಮ್ಮ ಮೇಲೆ ಹೊತ್ತುಕೊಳ್ಳುವಂಥಾಗಿದೆ ಎಂದು ತಿರುಗೇಟು ನೀಡಿದ್ದಾರೆ.

ವಿರೋಧಕ್ಕಾಗಿ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿ ‘ಸಂಸ್ಕೃತಿ’. ಬಿಜೆಪಿ ಪಾಲಿಸಿಕೊಂಡು ಬಂದ ಈ ಸಂಸ್ಕೃತಿ ಇಂದು ಅವರಿಗೆ ತಿರುಗುಬಾಣವಾಗಿದೆ. ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್‌ ಸಾಕ್ಷಿ ಎಂದು ಅಂದು ತಮ್ಮ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದಕ್ಕೆ ಆಕ್ರೋಶ ಹೊರಹಾಕಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ